AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬರುವ ಸರಣಿಗೂ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಡೌಟ್!

India vs Afghanistan: ಭಾರತ ಮತ್ತು ಅಫ್ಘಾನಿಸ್ತಾನ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಸೆಪ್ಟೆಂಬರ್ 13, 2026 ರಿಂದ ಆರಂಭವಾಗಲಿದೆ. ಈ ಸರಣಿಯ ದ್ವಿತೀಯ ಪಂದ್ಯ ಸೆಪ್ಟೆಂಬರ್ 15 ರಂದು ಹಾಗೂ ತೃತೀಯ ಪಂದ್ಯ ಸೆಪ್ಟೆಂಬರ್ 17 ರಂದು ಜರುಗಲಿದೆ. ಇನ್ನು ಈ ಸರಣಿಯ ಎಲ್ಲಾ ಪಂದ್ಯಗಳಿಗೂ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯ ವಹಿಸಲಿದೆ.

ಮುಂಬರುವ ಸರಣಿಗೂ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಡೌಟ್!
Team India Image Credit source: GettyImages
ಝಾಹಿರ್ ಯೂಸುಫ್
|

Updated on: Sep 01, 2026 | 10:14 AM

Share

ಭಾರತ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಪುನರಾಗಮನದ ಕನಸಿಗೆ ಮತ್ತೊಮ್ಮೆ ಗಾಯದ ಆತಂಕ ಎದುರಾಗಿದೆ. ಬೆಂಗಳೂರಿನ ಬಿಸಿಸಿಐ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (CoE) ಯಲ್ಲಿ ತರಬೇತಿ ಪಡೆಯುತ್ತಿದ್ದ ವೇಳೆ ಅವರಿಗೆ ಕಾಲಿನ ಸ್ನಾಯು ಸೆಳೆತ ಕಾಣಿಸಿಕೊಂಡಿದ್ದು, ಮುಂಬರುವ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗೆ ಅವರು ಲಭ್ಯರಿರುವುದು ಅನುಮಾನ ಎನ್ನಲಾಗಿದೆ.

ಸೆಪ್ಟೆಂಬರ್ 13, 2026 ರಿಂದ ಆರಂಭವಾಗಲಿರುವ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೂಲಕ ಪಾಂಡ್ಯ ಕಂಬ್ಯಾಕ್ ಮಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ಹೊಸ ಹಿನ್ನಡೆಯು ಬಿಸಿಸಿಐ ಆಯ್ಕೆ ಸಮಿತಿಗೆ ತಲೆನೋವು ತಂದಿಟ್ಟಿದೆ.

ತರಬೇತಿ ವೇಳೆ ಕಾಣಿಸಿಕೊಂಡ ಸಮಸ್ಯೆ!

ಮೂಲಗಳ ಮಾಹಿತಿ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರ ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಅಭ್ಯಾಸದಲ್ಲಿ ಯಾವುದೇ ತೊಂದರೆ ಇರಲಿಲ್ಲ. ಆದರೆ ಸಂಪೂರ್ಣ ವೇಗದಲ್ಲಿ ಬೌಲಿಂಗ್ ಮಾಡುವಾಗ ಅವರ ಕಾಲಿನಲ್ಲಿ ತೀವ್ರ ಅಸ್ವಸ್ಥತೆ ಕಾಣಿಸಿಕೊಂಡಿದೆ.

ಬಿಸಿಸಿಐ ವೈದ್ಯಕೀಯ ತಂಡವು ಅವರ ಬೌಲಿಂಗ್ ಲೋಡ್ ಅನ್ನು ಸದ್ಯಕ್ಕೆ ಸ್ಥಗಿತಗೊಳಿಸುವಂತೆ ಸೂಚಿಸಿದೆ. ಸರಣಿ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವುದರಿಂದ ಅವರು ಸಂಪೂರ್ಣ ಫಿಟ್ನೆಸ್ ಸಾಧಿಸುವುದು ಕಷ್ಟ ಎನ್ನಲಾಗುತ್ತಿದೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಲ್ಲೂ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳುವುದು ಅನುಮಾನವಾಗಿದೆ.

ಏಷ್ಯನ್ ಗೇಮ್ಸ್​​ಗಿಲ್ಲ ಹಾರ್ದಿಕ್ ಪಾಂಡ್ಯ:

ಏಷ್ಯನ್ ಗೇಮ್ಸ್​​ಗೆ ಆಯ್ಕೆ ಮಾಡಲಾಗಿರುವ ಭಾರತ ತಂಡದಲ್ಲಿ ಹಾರ್ದಿಕ್ ಪಾಂಡ್ಯಗೆ ಸ್ಥಾನ ನೀಡಲಾಗಿಲ್ಲ. ಹೀಗಾಗಿ ಸೆಪ್ಟೆಂಬರ್ ತಿಂಗಳಲ್ಲಿ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಿದರೂ ಏಷ್ಯನ್ ಗೇಮ್ಸ್​ನಲ್ಲೂ ಕೂಡ ಕಾಣಿಸಿಕೊಳ್ಳುವುದಿಲ್ಲ.

ಅಂದರೆ ಹಾರ್ದಿಕ್ ಪಾಂಡ್ಯ ಕಂಬ್ಯಾಕ್​ಗಾಗಿ ಅಕ್ಟೋಬರ್​ವರೆಗೆ ಕಾಯಲೇಬೇಕು. ಅಕ್ಟೋಬರ್​ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿ ನಡೆಯಲಿದ್ದು, ಈ ಸರಣಿಯ ಮೂಲಕ ಪಾಂಡ್ಯ ಅವರ ಪುನರಾಗಮನವನ್ನು ಎದುರು ನೋಡಬಹುದು.

ಇದನ್ನೂ ಓದಿ: ಶತಕದ ಪಂದ್ಯದಲ್ಲಿ ದಾಖಲೆಯ ಸೆಂಚುರಿ ಸಿಡಿಸಿದ ಹೆಟ್ಮೆಯರ್

ಏಷ್ಯನ್ ಗೇಮ್ಸ್​​ಗೆ ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪಾನಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್​ಪ್ರೀತ್ ಬುಮ್ರಾ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ವೈಭವ್ ಸೂರ್ಯವಂಶಿ.

Follow Us
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು