AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSL 2022: ಕ್ಯಾಚ್ ಬಿಟ್ಟಿದ್ದಕ್ಕೆ ತನ್ನದೇ ತಂಡದ ಪ್ಲೇಯರ್​ನ ಕಪಾಳಕ್ಕೆ ಹೊಡೆದ ಪಾಕ್ ಬೌಲರ್

Haris Rauf Slaps Kamran Ghulam: ಪಾಕಿಸ್ತಾನ ಸೂಪರ್ ಲೀಗ್​ನಲ್ಲಿ ಸ್ಟಾರ್ ಬೌಲರ್ ಹ್ಯಾರಿಸ್ ರೌಫ್ ಮೈದಾನದಲ್ಲೇ ತಮ್ಮದೇ ತಂಡದ ಆಟಗಾರ ಕಮ್ರಾನ್ ಗುಲಾಮ್ ಅವರ ಕಪಾಳಕ್ಕೆ ಹೊಡೆದಿದ್ದು ವಿಡಿಯೋ ವೈರಲ್ ಆಗುತ್ತಿದೆ.

PSL 2022: ಕ್ಯಾಚ್ ಬಿಟ್ಟಿದ್ದಕ್ಕೆ ತನ್ನದೇ ತಂಡದ ಪ್ಲೇಯರ್​ನ ಕಪಾಳಕ್ಕೆ ಹೊಡೆದ ಪಾಕ್ ಬೌಲರ್
Haris Rauf Slaps Ghulam PSL 2022
TV9 Web
| Edited By: |

Updated on: Feb 22, 2022 | 10:59 AM

Share

ಭಾರತದಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) ಬಿಟ್ಟರೆ ನಮ್ಮದೇ ಅತ್ಯಂತ ಗುಣಮಟ್ಟದ ಶ್ರೇಷ್ಠ ಟಿ20 ಲೀಗ್ ಎಂದು ಹೇಳಿಕೊಳ್ಳುವ ಪಾಕಿಸ್ತಾನದ ಪಾಕಿಸ್ತಾನ ಸೂಪರ್ ಲೀಗ್​ನಲ್ಲಿ (Pakistan Super League) ಮತ್ತೊಂದು ನಾಚಿಕೆ ಗೇಡಿನ ಘಟನೆ ನಡೆದಿದೆ. ಮೊನ್ನೆಯಷ್ಟೆ ಆಸ್ಟ್ರೇಲಿಯಾದ ಆಲ್​ರೌಂಡರ್​ ಜೇಮ್ಸ್ ಫಾಕ್ನರ್ ಅವರು ಪಾಕಿಸ್ತಾನ ಕ್ರಿಕೆಟ್​ ಬೋರ್ಡ್​ ಒಪ್ಪಂದದಂತೆ ಹಣ ನೀಡದೇ ವಂಚಿಸಿದೆ ಎಂದು ಆರೋಪಿಸಿ ​ಲೀಗ್​ ಹಂತದಲ್ಲೇ ಟೂರ್ನಿಯನ್ನು ತ್ಯಜಿಸಿ ತವರಿಗೆ ಹಿಂತಿರುಗಿದ್ದರು. ಈ ಮೂಲಕ ಪಿಎಸ್​ಎಲ್​ನ ಕರಾಳ ಮುಖವನ್ನು ಬಯಲು ಮಾಡಿದ್ದರು. ಇದೀಗ ಕ್ರಿಕೆಟ್ ಜಗತ್ತು ತಲೆ ತಗ್ಗಿಸುವಂತಹ ಮತ್ತೊಂದು ಘಟನೆಗೆ ಪಾಕ್ ಸೂಪರ್ ಲೀಗ್​ ಸಾಕ್ಷಿಯಾಗಿದೆ. ಪಾಕ್ ಸ್ಟಾರ್ ಬೌಲರ್ ಹ್ಯಾರಿಸ್ ರೌಫ್ (Haris Rauf) ಮೈದಾನದಲ್ಲೇ ತಮ್ಮದೇ ತಂಡದ ಆಟಗಾರ ಕಮ್ರಾನ್ ಗುಲಾಮ್ ಅವರ ಕಪಾಳಕ್ಕೆ ಹೊಡೆದಿದ್ದು ವಿಡಿಯೋ ವೈರಲ್ ಆಗುತ್ತಿದೆ. ಜಂಟಲ್ ಮ್ಯಾನ್ ಗೇಮ್ ಕ್ರಿಕೆಟ್​ನಲ್ಲಿ ಈರೀತಿಯ ಘಟನೆ ನಡೆದಿರುವುದು ಅನೇಕ ಕ್ರಿಕೆಟ್ ಪಂಡಿತರ ಮತ್ತು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಈ ಘಟನೆ ಪಿಎಸ್​ಎಲ್ 2022ರ ಸೋಮವಾರ ರಾತ್ರಿ ನಡೆದ ಲಾಹೋರ್ ಖಲಂದರ್ಸ್ ಮತ್ತು ಪೇಶಾವರ್ ಝಲ್ಮಿ ನಡುವಣ ರೋಚಕ ಪಂದ್ಯದಲ್ಲಿ ಸಂಭವಿಸಿದೆ. ಪೇಶಾವರ್ ಝಲ್ಮಿ ಬ್ಯಾಟಿಂಗ್​​ಗೆ ಇಳಿದ ಸಂದರ್ಭ ಈ ಘಟನೆ ನಡೆದಿದೆ. ಲಾಹೋರ್ ಖಲಂದರ್ಸ್ ತಂಡದ ಬೌಲರ್ ಹ್ಯಾರಿಸ್ ರೌಫ್ ಓವರ್​ನಲ್ಲಿ ಪೇಶಾವರ್ ತಂಡದ ಬ್ಯಾಟರ್ ಹರ್ಜತುಲ್ಲಾ ಝಝಾಯ್ ಅವರ ಕ್ಯಾಚನ್ನು ಕಮ್ರಾನ್ ಗುಲಾಮ್  ಕೈಚೆಲ್ಲಿದರು. ಇದರಿಂದ ರೌಫ್ ಕೋಪಗೊಂಡರು. ನಂತರ ಇದೇ ಓವರ್​ನಲ್ಲಿ ಮತ್ತೊಬ್ಬ ಬ್ಯಾಟರ್ ಮೊಹಮ್ಮದ್ ಹ್ಯಾರಿಸ್ ವಿಕೆಟ್ ಅನ್ನು ರೌಫ್ ಪಡೆದುಕೊಂಡರು. ಫಾಹಾದ್ ಅಹ್ಮದ್ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ರೌಫ್ ಮೊದಲ ವಿಕೆಟ್ ಕಿತ್ತರು.

ವಿಕೆಟ್ ಪಡೆದ ಖುಷಿಯಲ್ಲಿ ಸಹ ಆಟಗಾರರ ಜೊತೆ ರೌಫ್ ಸಂಭ್ರಮಿಸುತ್ತಿರುವಾಗ ಅಲ್ಲಿಗೆ ಕಮ್ರಾನ್ ಗುಲಾಮ್ ಕೂಡ ಖುಷಿಯಲ್ಲಿ ಪಾಲ್ಗೊಳ್ಳಲು ಬಂದರು. ಇನ್ನೇನು ಗುಲಾಮ್ ಕೈಕೊಟ್ಟು ಶುಭಕೋರಬೇಕು ಎನ್ನುವಷ್ಟರಲ್ಲಿ ರೌಫ್ ಇವರ ಕಪಾಳಕ್ಕೆ ಹೊಡೆದಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ರೌಫ್ ತಮ್ಮ ಕಪಾಳಕ್ಕೆ ಬಾರಿಸಿದರೂ ಗುಲಾಮ್ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ನಗುತ್ತಾ ಇರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪೇಶಾವರ್ ಝಲ್ಮಿ ತಂಡ ಶೊಯೇಬ್ ಅಮಲಿಕ್ ಅವರ 32 ರನ್ ಮತ್ತು ಹೈದರ್ ಅಲಿ ಅವರ 25 ರನ್​ಗಳ ನೆರವಿನಿಂದ 20 ಓವರ್​​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತು. ಟಾರ್ಗೆಟ್ ಬೆನ್ನಟ್ಟಿದ ಲಾಹೋರ್ ಖಲಂದರ್ಸ್ ತಂಡ ಕೂಡ ಮೊಹಮ್ಮದ್ ಹಫೀಜ್ ಅವರ 49 ರನ್ ಮತ್ತು ನಾಯಕ ಶಾಹೀನ್ ಅಫ್ರೀದಿ ಅವರ ಅಜೇಯ 39 ರನ್​ಗಳ ನೆರವಿನಿಂದ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 158 ರನ್​ಗಳನ್ನೇ ಕಲೆಹಾಕಿತು.

ಪಂದ್ಯ ಟೈ ಆದ ಕಾರಣ ಸೂಪರ್ ಓವರ್ ನಡೆಸಲಾಯಿತು. ಇದರಲ್ಲಿ ಮೊದಲ ಬ್ಯಾಟ್ ಮಾಡಿದ ಲಾಹೋರ್ ತಂಡ 6 ಎಸೆತಗಳಲ್ಲಿ ವಿಕೆಟ್ ನಷ್ಟವಿಲ್ಲದೆ 5 ರನ್​ಗಳನ್ನಷ್ಟೆ ಗಳಿಸಿತು. ಪೇಶಾವರ್ ಝಲ್ಮಿ ತಂಡ ಮೊದಲ ಎರಡು ಎಸೆತಗಳಲ್ಲಿ 2 ಬೌಂಡರಿ ಬಾರಿಸಿ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಪೇಶಾವರ್ ತಂಡ 10 ಪಂದ್ಯಗಳಲ್ಲಿ 6 ರಲ್ಲಿ ಗೆದ್ದು ನಾಲ್ಕರಲ್ಲಿ ಸೋಲು ಕಂಡು 12 ಅಂಕದೊಂದಿಗೆ ಮೂರನೇ ಸ್ಥಾನದಲ್ಲಿದೆ.

IND vs SL: ಟೀಮ್ ಇಂಡಿಯಾ ಮುಂದಿನ ಟಾರ್ಗೆಟ್ ಶ್ರೀಲಂಕಾ: ಲಖನೌ ತಲುಪಿದ ರೋಹಿತ್ ಶರ್ಮ ಪಡೆ

Rahul Dravid: ಸಾಹ ಶಾಕಿಂಗ್ ಹೇಳಿಕೆಗೆ ದ್ರಾವಿಡ್ ಕೂಲ್ ರಿಪ್ಲೇ: ಏನಂದ್ರು ನೋಡಿ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ