AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರಿಸ್ ರೌಫ್​ಗೆ ನಿಷೇಧ: ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುವಂತಿಲ್ಲ..!

Haris Rauf: ಪಾಕಿಸ್ತಾನ್ ತಂಡದ ಪ್ರಮುಖ ವೇಗಿಗಳಲ್ಲಿ ಹಾರಿಸ್ ರೌಫ್ ಕೂಡ ಒಬ್ಬರು. ಆದರೆ ಏಷ್ಯಾಕಪ್ ಟೂರ್ನಿಯ ವೇಳೆ ದುರ್ನಡತೆ ತೋರಿದ್ದಕ್ಕಾಗಿ ಇದೀಗ ಹಾರಿಸ್ ರೌಫ್​ ಎರಡು ಪಂದ್ಯಗಳ ನಿಷೇಧಕ್ಕೆ ಒಳಗಾಗಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಹಾರಿಸ್ ರೌಫ್ ಕಣಕ್ಕಿಳಿಯುವಂತಿಲ್ಲ.

ಹಾರಿಸ್ ರೌಫ್​ಗೆ ನಿಷೇಧ: ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುವಂತಿಲ್ಲ..!
Haris Rauf
ಝಾಹಿರ್ ಯೂಸುಫ್
|

Updated on: Nov 06, 2025 | 12:54 PM

Share

ಪಾಕಿಸ್ತಾನ್ ತಂಡದ ಪ್ರಮುಖ ವೇಗಿ ಹಾರಿಸ್ ರೌಫ್ ಸೌತ್ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ. ಇದಕ್ಕೆ ಮುಖ್ಯ ಕಾರಣ ಐಸಿಸಿ ಹೇರಿರುವ ನಿಷೇಧ. ಏಷ್ಯಾಕಪ್ ಟೂರ್ನಿ ವೇಳೆ ಕ್ರೀಡಾ ಘನತೆಗೆ ಧಕ್ಕೆ ತಂದ ಹಿನ್ನಲೆ ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಹಾರಿಸ್ ರೌಫ್​ ಮೇಲೆ 2 ಪಂದ್ಯಗಳ ನಿಷೇಧ ಹೇರಲಾಗಿದೆ.

ಸೆಪ್ಟೆಂಬರ್ 14 ರಂದು ನಡೆದ ಭಾರತದ ವಿರುದ್ಧದ ಪಂದ್ಯದ ವೇಳೆ ಹಾರಿಸ್ ರೌಫ್ ಸ್ಟೇಡಿಯಂನಲ್ಲಿದ್ದ ಪ್ರೇಕ್ಷಕರತ್ತ ತಿರುಗಿ ವಿಮಾನ ಹೊಡೆದುರುಳಿಸಿದ್ದೇವೆ ಎಂದು ಸಂಜ್ಞೆ ಮಾಡಿ ಸಂಭ್ರಮಿಸಿದ್ದರು.

ಇದಾದ ಬಳಿಕ ಸೆಪ್ಟೆಂಬರ್ 28 ರಂದು ನಡೆದ ಭಾರತದ ವಿರುದ್ಧದ ಪಂದ್ಯದ ಮತ್ತೊಮ್ಮೆ ವಿಮಾನ ಬೀಳಿಸಿದ್ದೇವೆ ಎಂಬಾರ್ಥದಲ್ಲಿ ಕೈ ಸನ್ನೆ ಮಾಡಿ ಭಾರತೀಯ ಪ್ರೇಕ್ಷಕರನ್ನು ಪ್ರಚೋದಿಸಿದ್ದರು.

ಪಾಕ್ ವೇಗಿಯ ಈ ನಡೆಯ ಬಗ್ಗೆ ಬಿಸಿಸಿಐ ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್​ಗೆ ದೂರು ಸಲ್ಲಿಸಿತ್ತು. ಈ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿರುವ ಐಸಿಸಿ, ಹಾರಿಸ್ ರೌಫ್​ಗೆ 4 ಡಿಮೆರಿಟ್ ಪಾಯಿಂಟ್ ನೀಡಿದೆ.

ಇತ್ತ ಒಂದೇ ವರ್ಷದಲ್ಲಿ ನಾಲ್ಕು ಡಿಮೆರಿಟ್ ಪಾಯಿಂಟ್ ಪಡೆದಿರುವ ಕಾರಣ ಅವರಿಗೆ 2 ಅಂತಾರಾಷ್ಟ್ರೀಯ ಪಂದ್ಯಗಳ ನಿಷೇಧ ಹೇರಲಾಗಿದೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಸರಣಿಯ ಎರಡು ಪಂದ್ಯಗಳಿಂದ ಹೊರಗುಳಿಯಬೇಕಾಗಿ ಬಂದಿದೆ.

ಹೀಗಾಗಿ ಇಂದು (ನ.6) ಫೈಸಲಾಬಾದ್​ನಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಹಾರಿಸ್ ರೌಫ್ ಕಣಕ್ಕಿಳಿಯುವಂತಿಲ್ಲ. ಅತ್ತ ರೌಫ್ ಹೊರಗುಳಿಯುವ ಕಾರಣ ಪಾಕ್ ಪರ ಎರಡನೇ ವೇಗಿಯಾಗಿ ನಸೀಮ್ ಶಾ ಕಾಣಿಸಿಕೊಳ್ಳಲಿದ್ದಾರೆ.

ಗೆದ್ದು ಬೀಗಿರುವ ಪಾಕ್ ಪಡೆ:

ಫೈಸಲಾಬಾದ್​ನ ಇಕ್ಬಾಲ್ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ್ ತಂಡ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಶಾಹೀನ್ ಅಫ್ರಿದಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪರ ಕ್ವಿಂಟನ್ ಡಿಕಾಕ್ 63 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಸೌತ್ ಆಫ್ರಿಕಾ ತಂಡವು 49.1 ಓವರ್​ಗಳಲ್ಲಿ 263 ರನ್​ಗಳಿಸಿ ಆಲೌಟ್ ಆಯಿತು.

264 ರನ್​ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಸೈಮ್ ಅಯ್ಯೂಬ್ (39) ಹಾಗೂ ಫಖರ್ ಝಮಾನ್ (45) ಉತ್ತಮ ಆರಂಭ ಒದಗಿಸಿದ್ದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ 55 ರನ್​ಗಳ ಕೊಡುಗೆ ನೀಡಿದರು. ಆ ಬಳಿಕ ಬಂದ ಸಲ್ಮಾನ್ ಅಲಿ ಅಘಾ 62 ರನ್ ಬಾರಿಸಿದರು.

ಇದಾಗ್ಯೂ ಪಾಕಿಸ್ತಾನ್ ತಂಡ 257 ರನ್​ಗಳಿಗೆ 7 ವಿಕೆಟ್​ ಕಳೆದುಕೊಂಡು ಸೋಲಿನತ್ತ ಮುಖ ಮಾಡಿತು. ಈ ಹಂತದಲ್ಲಿ ಮೊಹಮ್ಮದ್ ನವಾಝ್ 9 ರನ್​ಗಳಿಸುವ ಮೂಲಕ ತಂಡಕ್ಕೆ ಆಸರೆಯಾಗಿ ನಿಂತರು. ಈ ಮೂಲಕ 49.4 ಓವರ್​ಗಳಲ್ಲಿ 264 ರನ್​ಗಳಿಸಿ ಪಾಕಿಸ್ತಾನ್ ತಂಡ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

ಇದೀಗ ಮೂರು ಪಂದ್ಯಗಳ ಸರಣಿಯ 2ನೇ ಮ್ಯಾಚ್ ಇಂದು (ನ.6) ನಡೆಯಲಿದೆ. ಈ ಪಂದ್ಯವು ಸೌತ್ ಆಫ್ರಿಕಾ ತಂಡಕ್ಕೆ ನಿರ್ಣಾಯಕ. ಹೀಗಾಗಿ ಇಂದಿನ ಮ್ಯಾಚ್​ನಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಇದನ್ನೂ ಓದಿ: RCB ಖರೀದಿಗೆ ಮುಂದಾದ ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ: ಅದಾನಿ ಕಡೆಯಿಂದ ಟಕ್ಕರ್..!

ಪಾಕಿಸ್ತಾನ್ ಏಕದಿನ ತಂಡ: ಫಖರ್ ಝಮಾನ್, ಸೈಮ್ ಅಯ್ಯೂಬ್, ಬಾಬರ್ ಆಝಂ, ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಸಲ್ಮಾನ್ ಅಲಿ ಅಘಾ, ಹುಸೇನ್ ತಲತ್, ಹಸನ್ ನವಾಝ್, ಮೊಹಮ್ಮದ್ ನವಾಝ್, ಶಾಹೀನ್ ಅಫ್ರಿದಿ (ನಾಯಕ), ನಸೀಮ್ ಶಾ, ಅಬ್ರಾರ್ ಅಹ್ಮದ್, ಮೊಹಮ್ಮದ್ ವಾಸಿಮ್ ಜೂನಿಯರ್, ಫೈಸಲ್ ಅಕ್ರಮ್, ಹಸೀಬುಲ್ಲಾ ಖಾನ್, ಫಯೀಮ್ ಅಶ್ರಫ್, ಹಾರಿಸ್ ರೌಫ್ (ಅಲಭ್ಯ).

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!