AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

INDW vs AUSW: ಹರ್ಮನ್, ರಿಚ್ಚಾ ಹೋರಾಟ ವ್ಯರ್ಥ: ರೋಚಕ ಪಂದ್ಯ ಗೆದ್ದು ಟಿ20 ಸರಣಿ ವಶಪಡಿಸಿಕೊಂಡ ಆಸ್ಟ್ರೇಲಿಯಾ

India Women vs Australia Women: ನಾಲ್ಕನೇ ಟಿ20 ಪಂದ್ಯದಲ್ಲಿ ಆಸೀಸ್ 7 ರನ್​ಗಳ ರೋಚಕ ಜಯ ಸಾಧಿಸಿತು. ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆಲುವಿಗೆ ಕಠಿಣ ಹೋರಾಟ ನಡೆಸಿದ ಭಾರತೀಯ ಮಹಿಳೆಯರಿಗೆ ಜಯ ಸಾಧಿಸಲು ಸಾಧ್ಯವಾಗಲಿಲ್ಲ.

INDW vs AUSW: ಹರ್ಮನ್, ರಿಚ್ಚಾ ಹೋರಾಟ ವ್ಯರ್ಥ: ರೋಚಕ ಪಂದ್ಯ ಗೆದ್ದು ಟಿ20 ಸರಣಿ ವಶಪಡಿಸಿಕೊಂಡ ಆಸ್ಟ್ರೇಲಿಯಾ
INDW vs AUSW
TV9 Web
| Edited By: |

Updated on:Dec 18, 2022 | 9:08 AM

Share

ಭಾರತ ಪ್ರವಾಸ ಬೆಳೆಸಿರುವ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡ (India Women vs Australia Women) ಟಿ20 ಸರಣಿಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಶನಿವಾರ ರಾತ್ರಿ ಮುಂಬೈನ (Mumbai) ಬ್ರಬೌರ್ನ್ ಸ್ಟೇಡಿಯಂನಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಆಸೀಸ್ 7 ರನ್​ಗಳ ರೋಚಕ ಜಯ ಸಾಧಿಸಿತು. ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆಲುವಿಗೆ ಕಠಿಣ ಹೋರಾಟ ನಡೆಸಿದ ಭಾರತೀಯ ಮಹಿಳೆಯರಿಗೆ ಜಯ ಸಾಧಿಸಲು ಸಾಧ್ಯವಾಗಲಿಲ್ಲ. ಈ ಮೂಲಕ ಹರ್ಮನ್ (Harmanpreet Kaur) ಪಡೆಗೆ ತವರಿನಲ್ಲೇ ಭಾರೀ ಮುಖಭಂಗವಾದರೆ ಇತ್ತ ಕಾಂಗರೂ ಪಡೆ 3-1 ಅಂತರದಿಂದ ಟಿ20 ಸರಣಿ ತನ್ನದಾಗಿಸಿಕೊಂಡಿತು.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಆಸ್ಟ್ರೇಲಿಯಾ ಮಹಿಳಾ ತಂಡ ಆರಂಭದಲ್ಲೇ ಬೆತ್ ಮೋನಿ (2) ಹಾಗೂ ತಹಿಲಾ ಮೆಕ್​ಘ್ರಾತ್ (9) ವಿಕೆಟ್ ಕಳೆದುಕೊಂಡಿತು. ನಾಯಕ ಅಲಿಸ್ಸಾ ಹೀಲೆ 30 ರನ್​ಗಳಿಸಿದ್ದಾಗ ರಿಟೈರ್ಡ್ ಹರ್ಟ್ ಆಗಿ ಪೆವಿಲಿಯನ್ ಸೇರಿಕೊಂಡರು. ಬಳಿಕ ಶುರುವಾಗಿದ್ದು ಎಲಿಸ್ಸಾ ಪೆರಿ ಸ್ಫೋಟಕ ಆಟ. ಇವರಿಗೆ ಗಾರ್ಡನರ್ ಅದ್ಭುತ ಸಾಥ್ ನೀಡಿದರು. ಭಾರತೀಯ ಬೌಲರ್​ಗಳನ್ನು ಮನಬಂದಂತೆ ದಂಡಿಸಿದ ಪೆರಿ ಕೇವಲ 42 ಎಸೆತಗಳಲ್ಲಿ 7 ಫೋರ್, 4 ಸಿಕ್ಸರ್ ಸಿಡಿಸಿ ಅಜೇಯ 72 ರನ್ ಚಚ್ಚಿದರು.

IPL 2023: ಹೊಸ ಅವತಾರದಲ್ಲಿ ಗೇಲ್; ಐಪಿಎಲ್​ಗೆ ಯೂನಿವರ್ಸಲ್ ಬಾಸ್ ರೀ ಎಂಟ್ರಿ..!

ಇದನ್ನೂ ಓದಿ
Image
ARG vs FRA FIFA Final Live Streaming: ಇಂದು ಅರ್ಜೆಂಟೀನಾ vs ಫ್ರಾನ್ಸ್ ಫಿಫಾ ವಿಶ್ವಕಪ್ ಫೈನಲ್: ಎಷ್ಟು ಗಂಟೆಗೆ?, ಯಾವುದರಲ್ಲಿ ನೇರಪ್ರಸಾರ?
Image
FIFA World cup 2022: ಮೊರಾಕ್ಕೊ ವಿರುದ್ಧ ಗೆದ್ದು 3ನೇ ಸ್ಥಾನಕ್ಕೆ ತೃಪ್ತಿಪಟ್ಟ ಕ್ರೋವೇಶಿಯಾಗೆ 223 ಕೋಟಿ ರೂ. ಬಹುಮಾನ!
Image
ಬಿಸಿಸಿಐ ವಿರುದ್ಧ ಗುಡುಗಿದ್ದ ರಮೀಜ್ ರಾಜಾಗೆ ಪಿಸಿಬಿ ಮುಖ್ಯಸ್ಥ ಸ್ಥಾನದಿಂದ ಗೇಟ್​ಪಾಸ್..!
Image
ಬೆಂಗಳೂರಿನಲ್ಲಿ ಬಾಂಗ್ಲಾ ತಂಡವನ್ನು ಮಣಿಸಿ ಹ್ಯಾಟ್ರಿಕ್ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ..!

ಗಾರ್ಡನರ್ 27 ಎಸೆತಗಳಲ್ಲಿ ತಲಾ 3 ಫೋರ್, ಸಿಕ್ಸರ್​ನೊಂದಿಗೆ 42 ರನ್ ಬಾರಿಸಿದರು. ಕೊನೆಯಲ್ಲಿ ಬಂದ ಗ್ರೇಸ್ ಹ್ಯಾರಿಸ್ ಅಬ್ಬರಿಸಿ ಕೇವಲ 12 ಎಸೆತಗಳಲ್ಲಿ ಅಜೇಯ 27 ರನ್ ಗಳಿಸಿದರು. ಆಸ್ಟ್ರೇಲಿಯಾ 20 ಓವರ್​ಗೆ 3 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. ಭಾರತ ಪರ ದೀಪ್ತಿ ಶರ್ಮಾ ದುಬಾರಿ ಆಗುವ ಜೊತೆಗೆ 2 ವಿಕೆಟ್ ಪಡೆದರು. ರಾಧಾ ಯಾದವ್ 1 ವಿಕೆಟ್ ಪಡೆದರು.

ಕಠಿಣ ಟಾರ್ಗೆಟ್ ಬೆನ್ನಟ್ಟಿದ ಭಾರತ ಮಹಿಳಾ ತಂಡ ಕಳಪೆ ಆರಂಭ ಪಡೆದುಕೊಂಡಿತು. 50 ರನ್​ಗೂ ಮೊದಲೇ ಮುಖ್ಯ 3 ವಿಕೆಟ್ ಕಳೆದುಕೊಂಡಿತು. ಸ್ಮೃತಿ ಮಂದಾನ 16 ರನ್​ಗೆ ಔಟಾದರೆ, ಶಫಾಲಿ ವರ್ಮಾ 20 ರನ್​ಗೆ ನಿರ್ಗಮಿಸಿದರು. ಜೆಮಿಯಾ ರೋಡ್ರಿಗಸ್ ಕಳಪೆ ಫಾರ್ಮ್ ಮುಂದುವರೆಸಿ 8 ರನ್​ಗೆ ನಿರ್ಗಮಿಸಿದರು. ಹೀಗೆ ಸಂಕಷ್ಟದಲ್ಲಿದ್ದ ತಂಡಕ್ಕೆ ನಾಯಕಿ ಹರ್ಮನ್​ಪ್ರೀತ್ ಕೌರ್ ಮತ್ತು ದೇವಿಕಾ ವೈದ್ಯ ಆಸರೆಯಾದರು.

ತಂಡದ ಗೆಲುವಿಗೆ ಹೋರಾಟ ನಡೆಸಿದ ಈ ಜೋಡಿ ಬಿರುಸಿನ ಆಟವಾಡಿತು. 72 ರನ್​ಗಳ ಜೊತೆಯಾಟ ಆಡಿದ ಕೌರ್-ವೈದ್ಯ ತಂಡಕ್ಕೆ ಗೆಲುವಿನ ಆಸೆ ಚಿಗುರಿಸಿದರು. ಆದರೆ, ಕೌರ್ ದೊಡ್ಡ ಹೊಡೆತಕ್ಕೆ ಮಾರುಹೋಗಿ 30 ಎಸೆತಗಳಲ್ಲಿ 46 ರನ್ ಸಿಡಿಸಿ ಔಟಾದರು. ಇದರ ಬೆನ್ನಲ್ಲೇ ದೇವಿಕಾ ಕೂಡ 26 ಎಸೆತಗಳಲ್ಲಿ 32 ರನ್ ಬಾರಿಸಿ ಸ್ಟಂಪ್​ಔಟ್ ಆದರು.

ಕೊನೆಯಲ್ಲಿ ರಿಚ್ಚಾ ಘೋಷ್ ಕ್ರೀಸ್​ಗೆ ಬಂದು ಸ್ಫೋಟಕ ಆಟವಾಡಿ ಹೋರಾಡಿದರೂ ತಂಡಕ್ಕೆ ಜಯ ತಂದುಕೊಡಲು ಸಾಧ್ಯವಾಗಲಿಲ್ಲ. ಕೊನೆಯ 12 ಎಸೆತಗಳಲ್ಲಿ ಭಾರತದ ಗೆಲುವಿಗೆ 38 ರನ್​ಗಳ ಅವಶ್ಯಕತೆಯಿತ್ತು. 19ನೇ ಓವರ್​ನಲ್ಲಿ ಎರಡು ಸಿಕ್ಸ್, ಒಂದು ಬಾರಿಸಿ ಒಟ್ಟು 19 ರನ್​ಗಳು ಬಂದವು. ಅಂತಿಮ 6 ಎಸೆತಗಳಲ್ಲಿ 20 ರನ್​ಗಳು ಬೇಕಿದ್ದಾಗ 12 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲು ಕಂಡಿತು. ಭಾರತ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿ ಸರಣಿ ಗೆಲ್ಲುವ ಆಸೆ ಕೈಚೆಲ್ಲಿತು. ರಿಚ್ಚಾ ಘೋಷ್ 19 ಎಸೆತಗಳಲ್ಲಿ 4 ಫೋರ್, 2 ಸಿಕ್ಸರ್ ಬಾರಿಸಿ ಅಜೇಯ 40 ರನ್ ಗಳಿಸಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:08 am, Sun, 18 December 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ