AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s T20 Challenge 2022: ಪೂಜಾ ಮಾರಕ ದಾಳಿಗೆ ನಲುಗಿದ ಟ್ರೇಲ್‌ಬ್ಲೇಜರ್ಸ್: ಸೂಪರ್‌ನೋವಾಸ್ 49 ರನ್​ಗಳ ಭರ್ಜರಿ ಜಯ

Trailblazers vs Supernovas: ಟಾಸ್ ಗೆದ್ದ ಹರ್ಮನ್‌ಪ್ರೀತ್ ಕೌರ್ ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ನಿಗದಿತ 20 ಓವರ್‌ಗಳಲ್ಲಿ ಸೂಪರ್‌ನೋವಾಸ್ 163 ರನ್ ಗಳಿಸಿತು. ಹರ್ಮನ್‌ಪ್ರೀತ್ 29 ಎಸೆತಗಳಲ್ಲಿ ನಾಲ್ಕು ಬೌಂಡರಿಗಳ ನೆರವಿನಿಂದ 36 ರನ್ ಗಳಿಸಿದರು.

Women’s T20 Challenge 2022: ಪೂಜಾ ಮಾರಕ ದಾಳಿಗೆ ನಲುಗಿದ ಟ್ರೇಲ್‌ಬ್ಲೇಜರ್ಸ್: ಸೂಪರ್‌ನೋವಾಸ್ 49 ರನ್​ಗಳ ಭರ್ಜರಿ ಜಯ
Trailblazers vs Supernovas
TV9 Web
| Edited By: |

Updated on:May 24, 2022 | 7:41 AM

Share

ಮಹಿಳೆಯರ ಮಿನಿ ಐಪಿಎಲ್ ಖ್ಯಾತಿಯ ವುಮೆನ್ಸ್ ಟಿ20 ಚಾಲೆಂಜ್ (Women’s T20 Challenge 2022) ಟೂರ್ನಿಗೆ ಚಾಲನೆ ಸಿಕ್ಕಿದೆ. ಸ್ಮತಿ ಮಂದನಾ ಸಾರಥ್ಯದ ಟ್ರೈಲ್‌ಬ್ಲೇಜರ್ಸ್‌ ಮತ್ತು ಹರ್ಮಾನ್‌ಪ್ರೀತ್ ಕೌರ್ ನೇತೃತ್ವದ ಸೂಪರ್‌ನೋವಾಸ್ (Trailblazers vs Supernovas) ತಂಡಗಳು ಮೊದಲ ಪಂದ್ಯದಲ್ಲಿ ಮುಖಾಮುಖಿ ಆಗಿದ್ದು ಇದರಲ್ಲಿ ಸೂಪರ್‌ನೋವಾಸ್ 49 ರನ್‌ಗಳಿಂದ ಗೆದ್ದು ಬೀಗಿದೆ. ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಪೂಜಾ ವಸ್ತ್ರಕರ್ (Pooja Vastrakar) ಅವರ ಪ್ರಭಾವಿ ದಾಳಿಗೆ ನಲುಗಿದ ಟ್ರೇಲ್‌ಬ್ಲೇಜರ್ಸ್ ತಂಡ ಕುಸಿಯಿತು. ಸೂಪರ್‌ನೋವಾಸ್ ತಂಡ ಭರ್ಜರಿ ಜಯ ಗಳಿಸಿತು. ಸೋಮವಾರ ನಡೆದ ಮಹಿಳೆಯರ ಟಿ20 ಚಾಲೆಂಜರ್ಸ್ ಟೂರ್ನಿಯ ಪಂದ್ಯದಲ್ಲಿ ಟ್ರೇಲ್‌ಬ್ಲೇಜರ್ಸ್ ತಂಡವನ್ನು ಮಣಿಸಿತು. ಈ ಗೆಲುವಿನ ಮೂಲಕ ಹರ್ಮನ್‌ಪ್ರೀತ್ ತಂಡವು ಉತ್ತಮ ರನ್ ರೇಟ್ ಅನ್ನು ಸಂಪಾದಿಸಿದೆ.

ಟಾಸ್ ಗೆದ್ದ ಹರ್ಮನ್‌ಪ್ರೀತ್ ಕೌರ್ ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ನಿಗದಿತ 20 ಓವರ್‌ಗಳಲ್ಲಿ ಸೂಪರ್‌ನೋವಾಸ್ 163 ರನ್ ಗಳಿಸಿತು. ಹರ್ಮನ್‌ಪ್ರೀತ್ 29 ಎಸೆತಗಳಲ್ಲಿ ನಾಲ್ಕು ಬೌಂಡರಿಗಳ ನೆರವಿನಿಂದ 36 ರನ್ ಗಳಿಸಿದರು. ಹರ್ಲೀನ್ ಡಿಯೋಲ್ 35, ಡಿಯಾಂಡಾ ಡೋಟಿನ್ 32 ಮತ್ತು ಪ್ರಿಯಾ ಪುನಿಯಾ 22 ರನ್ ಗಳಿಸಿದರು. ಇದು ಮಹಿಳಾ ಟಿ20 ಇತಿಹಾಸದಲ್ಲಿ ಅತಿ ಹೆಚ್ಚಿನ ಮೊತ್ತ ಆಗಿರುವುದು ವಿಶೇಷ. ಟ್ರೈಲ್‌ಬ್ಲೇಜರ್ಸ್ ಪರ ಹೈಲಿ ಮ್ಯಾಥ್ಯೂಸ್ 29 ರನ್ ನೀಡಿ ಮೂರು ವಿಕೆಟ್ ಪಡೆದರು. ಸಲ್ಮಾ ಖಾತುನ್ 30 ರನ್ ನೀಡಿ 2 ವಿಕೆಟ್ ಪಡೆದರು. ರಾಜೇಶ್ವರಿ ಗಾಯಕ್ವಾಡ್ 4 ಓವರ್‌ಗಳಲ್ಲಿ 34 ರನ್ ನೀಡಿ ಒಂದು ವಿಕೆಟ್ ಪಡೆದರು.

IPL 2022: ಇಡೀ ಸೀಸನ್​ನಲ್ಲಿ ಒಂದೇ ಒಂದು ಅವಕಾಶ ಪಡೆಯದ ಅರ್ಜುನ್ ತೆಂಡೂಲ್ಕರ್​ಗೆ ಅಕ್ಕನ ಭಾವನಾತ್ಮಕ ಸಾಂತ್ವನ

ಇದನ್ನೂ ಓದಿ
Image
GT vs RR Prediction Playing XI: ಗುಜರಾತ್ ಮತ್ತು ರಾಜಸ್ಥಾನದ ಮುಂದೆ ಒಂದೇ ಪ್ರಶ್ನೆ.. ಮೂರನೇ ವೇಗಿ ಯಾರು?
Image
GT vs RR, Playoff Prediction: ಫೈನಲ್ ಸುತ್ತು, ಪೈಪೋಟಿ ಗುಜರಾತ್ ಜೊತೆ; ರಾಜಸ್ಥಾನದ ಕಾಯುವಿಕೆ ಕೊನೆಗೊಳ್ಳುತ್ತಾ?
Image
Kusal Mendis: ಫೀಲ್ಡಿಂಗ್ ವೇಳೆ ಎದೆನೋವು: ಲಂಕಾ ಆಟಗಾರ ಆಸ್ಪತ್ರೆಗೆ ದಾಖಲು
Image
IPL 2022: ಈ ಸೀಸನ್​ನಲ್ಲಿ ಒಂದೇ ಒಂದು ಸೂಪರ್ ಓವರ್ ಇಲ್ಲ; ಮೊದಲ ಸೂಪರ್ ಓವರ್ ನಡೆದಿದ್ದು ಯಾವಾಗ?

ಸೂಪರ್‌ ನೋವಾ ತಂಡದ ನಿಖರ ದಾಳಿಗೆ ಕುಸಿದ ಟ್ರೈಲ್‌ಬ್ಲೇಜರ್ಸ್‌ ತಂಡವು 9 ವಿಕೆಟಿಗೆ 114 ರನ್‌ ಗಳಿಸಲಷ್ಟೇ ಶಕ್ತವಾಗಿ 49 ರನ್ನುಗಳಿಂದ ಸೋಲನ್ನು ಕಂಡಿತು. ಟ್ರೈಬ್ಲೇಜರ್ ತಂಡದ ಆರಂಭ ಉತ್ತಮವಾಗಿತ್ತು. ನಾಯಕಿ ಸ್ಮತಿ ಮಂಧನಾ ಎರಡನೆಯವರಾಗಿ ಔಟ್‌ ಆದಾಗ ತಂಡ 7.2 ಓವರ್‌ಗಳಲ್ಲಿ ಎರಡು ವಿಕೆಟಿಗೆ 63 ರನ್‌ ಗಳಿಸಿತ್ತು. ಮಂಧನಾ 23 ಎಸೆತ ಎದುರಿಸಿ 34 ರನ್‌ ಗಳಿಸಿದರು. ಇದು ತಂಡದ ಆಟಗಾರ್ತಿಯೊಬ್ಬರ ಗರಿಷ್ಠ ಮೊತ್ತವೂ ಆಗಿದೆ. ಆಬಳಿಕ ತಂಡವು ನಾಟಕೀಯ ಕುಸಿತ ಕಂಡಿತು. ಮುಂದಿನ 10 ರನ್‌ ಗಳಿಸುವಷ್ಟರಲ್ಲಿ ತಂಡವು ಮತ್ತೆ 5 ವಿಕೆಟ್‌ಗಳನ್ನು ಕಳೆದುಕೊಂಡು ಶೋಚನೀಯ ಸ್ಥಿತಿಗೆ ಬಿತ್ತು. ಅಂತಿಮವಾಗಿ 9 ವಿಕೆಟಿಗೆ 114 ರನ್‌ ಗಳಿಸಲಷ್ಟೇ ಶಕ್ತವಾಗಿ ಸೋಲನ್ನು ಒಪ್ಪಿಕೊಂಡಿತು. ಪೂಜಾ ವಸ್ತ್ರಾಕರ್‌ ತನ್ನ 4 ಓವರ್‌ಗಳ ದಾಳಿಯಲ್ಲಿ ಕೇವಲ 12 ರನ್‌ ನೀಡಿ 4 ವಿಕೆಟ್‌ ಕಿತ್ತು ಗೆಲುವಿನ ರೂವಾರಿಯಾದರು.

ಮುಂದಿನ ವರ್ಷದಿಂದ ಮಹಿಳೆಯರ ಪೂರ್ಣಪ್ರಮಾಣದ ಐಪಿಎಲ್ ಟೂರ್ನಿ ಆಯೋಜಿಸಲು ಬಿಸಿಸಿಐ ಈಗಾಗಲೆ ಸಿದ್ಧತೆ ಆರಂಭಿಸಿದೆ. ಹೀಗಾಗಿ ಅದಕ್ಕೆ ಪೂರ್ವಸಿದ್ಧತೆಯಂತಿರುವ ವುಮೆನ್ಸ್ ಟಿ20 ಚಾಲೆಂಜ್ ಈ ವರ್ಷವೇ ಕೊನೆಯದಾಗಿರಲಿದೆ. ಅನುಭವಿ ಆಟಗಾರ್ತಿಯರಾದ ಮಿಥಾಲಿ ರಾಜ್, ಜೂಲನ್ ಗೋಸ್ವಾಮಿ ಹಾಗೂ ಕನ್ನಡತಿ ವೇದಾ ಕೃಷ್ಣಮೂರ್ತಿ ಈ ಸಲದ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಿಲ್ಲ.

ವುಮೆನ್ಸ್ ಟಿ20 ಚಾಲೆಂಜ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಸೂಪರ್‌ನೋವಾಸ್ ಹಾಗೂ ವೆಲೋಸಿಟಿ ನಡುವೆ ಕಾದಾಟ ನಡೆಯಲಿದೆ. ಈ ಪಂದ್ಯ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:41 am, Tue, 24 May 22

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ