AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6,084 ದಿನಗಳ ಕಾಯುವಿಕೆ ಅಂತ್ಯ; ಹರ್ಮನ್ ತೋಳಿನ ಮೇಲೆ ಮೂಡಿದ ವಿಶ್ವಕಪ್ ಟ್ರೋಫಿ ಟ್ಯಾಟೂ

Harmanpreet Kaur: ಭಾರತ ಮಹಿಳಾ ಕ್ರಿಕೆಟ್ ತಂಡ ಮೊದಲ ಐಸಿಸಿ ವಿಶ್ವಕಪ್ ಗೆದ್ದಿದೆ. ಹರ್ಮನ್‌ಪ್ರೀತ್ ಕೌರ್ ತಮ್ಮ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಈ ಸ್ಮರಣೀಯ ಗೆಲುವನ್ನು ಶಾಶ್ವತವಾಗಿಸಲು, ಹರ್ಮನ್‌ಪ್ರೀತ್ ತಮ್ಮ ತೋಳಿನ ಮೇಲೆ ವಿಶ್ವಕಪ್ ಟ್ರೋಫಿಯ ಟ್ಯಾಟೂ ಹಾಕಿಸಿಕೊಂಡಿದ್ದಾರೆ. 52 ವರ್ಷಗಳ ಕಾಯುವಿಕೆಯ ಅಂತ್ಯ, ಇದು ಅವರ ಬಾಲ್ಯದ ಕನಸು ನನಸಾದ ಕ್ಷಣ.

6,084 ದಿನಗಳ ಕಾಯುವಿಕೆ ಅಂತ್ಯ; ಹರ್ಮನ್ ತೋಳಿನ ಮೇಲೆ ಮೂಡಿದ ವಿಶ್ವಕಪ್ ಟ್ರೋಫಿ ಟ್ಯಾಟೂ
Harmanpreet Kaur
ಪೃಥ್ವಿಶಂಕರ
|

Updated on:Nov 05, 2025 | 4:35 PM

Share

ಭಾರತ ಮಹಿಳಾ ತಂಡ ( India Women’s Cricket Team) ಕೊನೆಗೂ ತನ್ನ ಐಸಿಸಿ (ICC) ಟ್ರೋಫಿ ಬರವನ್ನು ನೀಗಿಸಿಕೊಂಡಿದೆ. ಭಾನುವಾರ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿದ ಹರ್ಮನ್ ಪಡೆ ಮೊದಲ ಬಾರಿಗೆ ಮಹಿಳಾ ಏಕದಿನ ವಿಶ್ವಕಪ್ ಎತ್ತಿಹಿಡಿದಿದೆ. ಇದೀಗ ತಂಡವನ್ನು ಗೆಲುವಿನತ್ತ ಮುನ್ನಡೆಸಿದ ನಾಯಕಿ ಹರ್ಮನ್​ಪ್ರೀತ್ ಕೌರ್ (Harmanpreet Kaur) ವಿಶ್ವಕಪ್ ಗೆಲುವನ್ನು ಶಾಶ್ವತವಾಗಿ ನೆನಪಿನಲ್ಲಿಟ್ಟುಕೊಳ್ಳುವ ಸಲುವಾಗಿ ತಮ್ಮ ತೋಳಿನ ಮೇಲೆ ವಿಶ್ವಕಪ್ ಟ್ರೋಫಿಯ ಟ್ಯಾಟೂವನ್ನು ಹಾಕಿಸಿಕೊಂಡಿದ್ದಾರೆ. ವಿಶ್ವಕಪ್ ಫೈನಲ್ ಮುಗಿದ ಮರು ದಿನ ತಮ್ಮ ಇನ್ಸ್​ಟಾಗ್ರಾಮ್ ಖಾತೆಯಲ್ಲಿ ವಿಶ್ವಕಪ್ ಟ್ರೋಫಿಯ ಟ್ಯಾಟೂ ಹಾಕಿಸಿಕೊಂಡಿರುವ ಫೋಟೋಗಳನ್ನು ಹರ್ಮನ್​ ಹಂಚಿಕೊಂಡಿದ್ದಾರೆ. ಹರ್ಮನ್​ಗೆ ಈ ವಿಶ್ವಕಪ್ ಗೆಲುವು ಮತ್ತಷ್ಟು ವಿಶೇಷವಾಗಿದ್ದು, ಐಸಿಸಿ ಟ್ರೋಫಿಯನ್ನು ಗೆದ್ದ ಮೊದಲ ಭಾರತೀಯ ಮಹಿಳಾ ನಾಯಕಿ ಎಂಬ ದಾಖಲೆಯನ್ನು ಇತಿಹಾಸದ ಪುಟದಲ್ಲಿ ದಾಖಲಿಸಿದ್ದಾರೆ.

ಭಾರತದ ಮೊದಲ ನಾಯಕಿ

ಹರ್ಮನ್​ಪ್ರೀತ್ ಹಂಚಿಕೊಂಡಿರುವ ಫೋಟೋದಲ್ಲಿ ವಿಶ್ವಕಪ್ ಟ್ರೋಫಿಯ ಟ್ಯಾಟೂ ಜೊತೆಗೆ ವಿಶ್ವಕಪ್ ಗೆದ್ದ ವರ್ಷ ಹಾಗೂ 52 ಎಂಬ ಸಂಖ್ಯೆಯನ್ನು ಬರೆಸಿದ್ದಾರೆ. 52 ಎಂಬ ಸಂಖ್ಯೆಯೂ ಎರಡು ವಿಶೇಷತೆಗಳನ್ನು ಹೊಂದಿದ್ದು, ಮೊದಲನೆಯದ್ದು, 52 ವರ್ಷಗಳ ಮಹಿಳಾ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಭಾರತ ಮೊದಲ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರೆ, ಎರಡನೇಯದ್ದು, ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ತಂಡವನ್ನು 52 ರನ್​ಗಳಿಂದ ಸೋಲಿಸಿ ಟ್ರೋಫಿ ಎತ್ತಿಹಿಡಿದಿತ್ತು. ಈ ಟ್ಯಾಟೂ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಹರ್ಮನ್, ಇದು ನನ್ನ ಚರ್ಮ ಮತ್ತು ಹೃದಯದಲ್ಲಿ ಶಾಶ್ವತವಾಗಿ ಅಚ್ಚೊತ್ತಿದೆ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ.

6084 ದಿನಗಳ ಕಾಯುವಿಕೆ ಅಂತ್ಯ

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪ್ರವೇಶಿಸಿದ ಮೊದಲ ದಿನದಿಂದಲೂ ವಿಶ್ವಕಪ್ ಟ್ರೋಫಿಗಾಗಿ ಕಾಯುತ್ತಿದ್ದೆ ಎಂದು ಹರ್ಮನ್‌ಪ್ರೀತ್ ಕೌರ್ ಬರೆದಿದ್ದಾರೆ. ವಾಸ್ತವವಾಗಿ ಹರ್ಮನ್‌ಪ್ರೀತ್ ಕೌರ್ ಮಾರ್ಚ್ 7, 2009 ರಂದು ಪಾಕಿಸ್ತಾನ ವಿರುದ್ಧದ ಏಕದಿನ ಪಂದ್ಯದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಅಂದಿನಿಂದ, 6084 ವರ್ಷಗಳ ಕಾಯುವಿಕೆಯ ನಂತರ, ಅವರು ಅಂತಿಮವಾಗಿ ನವೆಂಬರ್ 2, 2025 ರಂದು ವಿಶ್ವಕಪ್​ಗೆ ಮುತ್ತಿಟ್ಟಿದ್ದಾರೆ.

ವಿಶ್ವಕಪ್‌ ಗೆಲ್ಲಿಸಿಕೊಟ್ಟ ಶಫಾಲಿ ವರ್ಮಾಗೆ ಒಲಿದ ನಾಯಕತ್ವ ಪಟ್ಟ

ನನಗೆ ತುಂಬಾ ಭಾವನಾತ್ಮಕ ಕ್ಷಣ

ಮಂಗಳವಾರದಂದು ಬಿಸಿಸಿಐ ಹರ್ಮನ್‌ಪ್ರೀತ್ ಅವರ ವೀಡಿಯೊವನ್ನು ಹಂಚಿಕೊಂಡಿದ್ದು, ಅದರಲ್ಲಿ ಅವರು ವಿಶ್ವಕಪ್ ಮತ್ತು ತಮ್ಮ ಬಗ್ಗೆ ಆಸಕ್ತಿದಾಯಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು, ‘ಇದು ನನಗೆ ತುಂಬಾ ಭಾವನಾತ್ಮಕ ಕ್ಷಣ, ಏಕೆಂದರೆ ನಾನು ಮೊದಲೇ ಹೇಳಿದಂತೆ, ಇದು ನನ್ನ ಬಾಲ್ಯದಿಂದಲೂ ಕನಸಾಗಿತ್ತು. ನಾನು ಟಿವಿ ನೋಡುವುದು ಮತ್ತು ಕ್ರಿಕೆಟ್ ಆಡಲು ಪ್ರಾರಂಭಿಸಿದಾಗಿನಿಂದ, ವಿಶ್ವಕಪ್ ಗೆಲ್ಲುವುದು ನನ್ನ ಕನಸಾಗಿತ್ತು. ನಾನು ಈಗ ತುಂಬಾ ನಿರಾಳವಾಗಿದ್ದೇನೆ ಮತ್ತು ನಾನು ಹಲವು ವರ್ಷಗಳಿಂದ ಕಂಡ ಕನಸು ಈಗ ನನಸಾಗಿದೆ. ಹೀಗಾಗಿ ನಾನು ದೇವರಿಗೆ ಕೃತಜ್ಞನಾಗಿದ್ದೇನೆ’ ಎಂದಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:32 pm, Wed, 5 November 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!