AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Harshal Patel: ಅಭ್ಯಾಸ ಪಂದ್ಯದಲ್ಲೂ ಹರ್ಷಲ್ ಪಟೇಲ್​ ತುಂಬಾ ದುಬಾರಿ..!

Harshal Patel: 159 ರನ್​ಗಳನ್ನು ಬೆನ್ನತ್ತಿದ ವೆಸ್ಟರ್ನ್​ ಆಸ್ಟ್ರೇಲಿಯಾ ಟೀಮ್ ಇಂಡಿಯಾ ಬೌಲರ್​ಗಳ ಮುಂದೆ ಉತ್ತಮ ಪ್ರದರ್ಶನವನ್ನೇ ನೀಡಿತು. ಏಕೆಂದರೆ ಬಲಿಷ್ಠ ಬೌಲಿಂಗ್ ಲೈನಪ್ ಹೊಂದಿದ್ದ ಟೀಮ್ ಇಂಡಿಯಾ ಬೌಲರ್​ಗಳ ವಿರುದ್ದ 8 ವಿಕೆಟ್ ನಷ್ಟಕ್ಕೆ 145 ರನ್ ಬಾರಿಸಿತ್ತು.

Harshal Patel: ಅಭ್ಯಾಸ ಪಂದ್ಯದಲ್ಲೂ ಹರ್ಷಲ್ ಪಟೇಲ್​ ತುಂಬಾ ದುಬಾರಿ..!
Harshal Patel
TV9 Web
| Edited By: |

Updated on:Oct 11, 2022 | 3:55 PM

Share

T20 World Cup 2o22: ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾ (Team India) ಭರ್ಜರಿ ಸಿದ್ದತೆಯಲ್ಲಿದೆ. ಈಗಾಗಲೇ ಮೊದಲ ಅಭ್ಯಾಸ ಪಂದ್ಯವನ್ನು ಆಡಿದ್ದು, ಈ ಪಂದ್ಯದಲ್ಲಿ 13 ರನ್​ಗಳಿಂದ ಜಯ ಸಾಧಿಸಿದೆ. ಆದರೆ ಈ ಗೆಲುವಿನ ಹೊರತಾಗಿಯೂ ಇದೀಗ ಟೀಮ್ ಇಂಡಿಯಾದ ಪ್ರದರ್ಶನದ ಬಗ್ಗೆ ಪ್ರಶ್ನೆಗಳೆದ್ದಿವೆ. ಏಕೆಂದರೆ ಭಾರತ ತಂಡವು ಮೊದಲ ಅಭ್ಯಾಸ ಪಂದ್ಯವಾಡಿರುವುದು ವೆಸ್ಟರ್ನ್​ ಆಸ್ಟ್ರೇಲಿಯಾ ವಿರುದ್ದ. ದ್ವಿತೀಯ ದರ್ಜೆಯ ಆಟಗಾರರನ್ನು ಒಳಗೊಂಡ ಈ ತಂಡದ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಟೀಮ್ ಇಂಡಿಯಾ ಆಟಗಾರರು ವಿಫಲವಾಗಿದ್ದಾರೆ.

ಏಕೆಂದೆರೆ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಕಲೆಹಾಕಿದ್ದು ಕೇವಲ 158 ರನ್​ಗಳು ಮಾತ್ರ. 35 ಎಸೆತಗಳಲ್ಲಿ 52 ರನ್​ ಕಲೆಹಾಕಿದ ಸೂರ್ಯಕುಮಾರ್ ಯಾದವ್ ಅವರನ್ನು ಹೊರತುಪಡಿಸಿ ಉಳಿದ ಬ್ಯಾಟ್ಸ್​ಮನ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.

ಇನ್ನು 159 ರನ್​ಗಳನ್ನು ಬೆನ್ನತ್ತಿದ ವೆಸ್ಟರ್ನ್​ ಆಸ್ಟ್ರೇಲಿಯಾ ಟೀಮ್ ಇಂಡಿಯಾ ಬೌಲರ್​ಗಳ ಮುಂದೆ ಉತ್ತಮ ಪ್ರದರ್ಶನವನ್ನೇ ನೀಡಿತು. ಏಕೆಂದರೆ ಬಲಿಷ್ಠ ಬೌಲಿಂಗ್ ಲೈನಪ್ ಹೊಂದಿದ್ದ ಟೀಮ್ ಇಂಡಿಯಾ ಬೌಲರ್​ಗಳ ವಿರುದ್ದ 8 ವಿಕೆಟ್ ನಷ್ಟಕ್ಕೆ 145 ರನ್ ಬಾರಿಸಿತ್ತು.

ಇದನ್ನೂ ಓದಿ
Image
Anna Rajan: ಸಿಮ್ ಖರೀದಿಸಲು ಹೋದ ನಟಿಯನ್ನು ಶೋ ರೂಮ್​ನಲ್ಲಿ ಕೂಡಿ ಹಾಕಿದ ಸಿಬ್ಬಂದಿ..!
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಅಚ್ಚರಿ ಎಂದರೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿರುವ ಹರ್ಷಲ್ ಪಟೇಲ್ ಈ ಪಂದ್ಯದಲ್ಲಿ 4 ಓವರ್​ಗಳಲ್ಲಿ ಬರೋಬ್ಬರಿ 49 ರನ್​ ನೀಡಿದ್ದರು. ಅಂದರೆ ದ್ವಿತೀಯ ದರ್ಜೆಯ ಟೀಮ್ ವಿರುದ್ಧವೇ ಹರ್ಷಲ್ ದುಬಾರಿಯಾಗಿದ್ದಾರೆ.

ಈ ಹಿಂದೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲೂ ಹರ್ಷಲ್ ಪಟೇಲ್ ದುಬಾರಿಯಾಗಿದ್ದರು. ಇದೀಗ ಯಾವುದೇ ಒತ್ತಡವಿಲ್ಲದೆ ಆಡಲಾದ ಅಭ್ಯಾಸ ಪಂದ್ಯದಲ್ಲೂ 24 ಎಸೆತಗಳಲ್ಲಿ 49 ರನ್ ಬಿಟ್ಟು ಕೊಟ್ಟಿದ್ದಾರೆ. ಟೀಮ್ ಇಂಡಿಯಾದ ಪ್ರಮುಖ ವೇಗಿಯ ಈ ಕಳಪೆ ಪ್ರದರ್ಶನವೇ ಇದೀಗ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಚಿಂತೆಯನ್ನು ಹೆಚ್ಚಿಸಿದೆ.

ಏಕೆಂದರೆ ಟೀಮ್ ಇಂಡಿಯಾ ಅಕ್ಟೋಬರ್ 23 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ವಿರುದ್ಧದ ಪಂದ್ಯದ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಆದರೆ ಈ ಬಾರಿ ತಂಡದಲ್ಲಿ ಜಸ್​ಪ್ರೀತ್ ಬುಮ್ರಾ ಇಲ್ಲ. ಇತ್ತ ಟಿ20 ವಿಶ್ವಕಪ್​ಗೆ ದಿನಗಳು ಮಾತ್ರ ಉಳಿದಿರುವಾಗಲೂ ಟೀಮ್ ಇಂಡಿಯಾ ಬೌಲಿಂಗ್ ಲೈನಪ್ ಲಯಕ್ಕೆ ಮರಳಿಲ್ಲ ಎಂಬುದು ಅಭ್ಯಾಸ ಪಂದ್ಯದ ಮೂಲಕ ನಿರೂಪಿತವಾಗಿದೆ. ಇದುವೇ ಈಗ ಟೀಮ್ ಇಂಡಿಯಾದ ಹೊಸ ಚಿಂತೆಗೆ ಕಾರಣವಾಗಿದೆ.

ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರರ ಪ್ರದರ್ಶನ ಹೀಗಿತ್ತು:

ಬ್ಯಾಟಿಂಗ್:

  • ರೋಹಿತ್ ಶರ್ಮಾ- 3 (4)
  • ರಿಷಭ್ ಪಂತ್- 9 (16)
  • ದೀಪಕ್ ಹೂಡಾ- 22 (14)
  • ಸೂರ್ಯಕುಮಾರ್ ಯಾದವ್ – 52 (35)
  • ಹಾರ್ದಿಕ್ ಪಾಂಡ್ಯ – 27 (20)
  • ದಿನೇಶ್ ಕಾರ್ತಿಕ್ – 19 (23)
  • ಅಕ್ಷರ್ ಪಟೇಲ್ – 10 (5)
  • ಹರ್ಷಲ್ ಪಟೇಲ್ – 5 (4)

ಬೌಲಿಂಗ್:

  • ಭುವನೇಶ್ವರ್ ಕುಮಾರ್:  4-0-26-2
  • ಅರ್ಷದೀಪ್ ಸಿಂಗ್:  3-1-6-3
  • ಹರ್ಷಲ್ ಪಟೇಲ್: 4-0-49-1
  • ಅಕ್ಷರ್ ಪಟೇಲ್:  3-0-23-0
  • ದೀಪಕ್ ಹೂಡಾ:  2-0-24-0
  • ಯುಜ್ವೇಂದ್ರ ಚಹಾಲ್:  4-0-15-2

Published On - 3:54 pm, Tue, 11 October 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ