AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಹರ್ಷಲ್ ಪಟೇಲ್ ಭಾರತದ 2ನೇ ಅತ್ಯುತ್ತಮ ಟಿ20 ಬೌಲರ್ ಎಂದ ಮಾಜಿ ಕ್ರಿಕೆಟಿಗ

Harshal Patel: ಆಯ್ಕೆಗಾರರು ಹೆಚ್ಚು ರನ್ ಗಳಿಸಿದವರು ಮತ್ತು ಹೆಚ್ಚು ವಿಕೆಟ್ ಪಡೆದವರು ಯಾರು ಎಂಬುದನ್ನು ನೋಡುವುದಕ್ಕಿಂತ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಆಯ್ಕೆ ಮಾಡುವುದು ಉತ್ತಮ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

IPL 2022: ಹರ್ಷಲ್ ಪಟೇಲ್ ಭಾರತದ 2ನೇ ಅತ್ಯುತ್ತಮ ಟಿ20 ಬೌಲರ್ ಎಂದ ಮಾಜಿ ಕ್ರಿಕೆಟಿಗ
Harshal Patel
TV9 Web
| Edited By: |

Updated on:Apr 14, 2022 | 5:12 PM

Share

IPL 2022: ಐಪಿಎಲ್​ನಲ್ಲಿ ಭಾರತೀಯ ಬೌಲರ್​ಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಅದರಲ್ಲೂ ಆರ್​ಸಿಬಿ ವೇಗಿ ಹರ್ಷಲ್ ಪಟೇಲ್ ಅತ್ಯುತ್ತಮ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. ಕಳೆದ ಸೀಸನ್​ನಲ್ಲಿ 32 ವಿಕೆಟ್ ಪಡೆಯುವ ಮೂಲಕ ದಾಖಲೆ ಬರೆದಿದ್ದ ಹರ್ಷಲ್ ಪಟೇಲ್ ಈ ಬಾರಿ ಕೂಡ ಪ್ರಭಾವಿ ಬೌಲರ್ ಆಗಿ ಕಾಣಿಸಿಕೊಂಡಿದ್ದಾರೆ. ಓವರ್​ಗೆ ಕೇವಲ 5.50 ರ ಎಕನಾಮಿ ರೇಟ್​ನಲ್ಲಿ ನಾಲ್ಕು ಪಂದ್ಯಗಳಿಂದ ಆರು ವಿಕೆಟ್​ಗಳನ್ನು ಪಡೆದಿರುವ ಹರ್ಷಲ್ ಆರ್​ಸಿಬಿ ತಂಡದ ಟ್ರಂಪ್ ಕಾರ್ಡ್ ಎಂಬುದರಲ್ಲಿ ಸಂದೇಹವೇ ಇಲ್ಲ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ನಲ್ಲೂ ಪಟೇಲ್​ಗೆ ಸ್ಥಾನ ಸಿಗುವ ಸಾಧ್ಯತೆಯಿದೆ. ಇತ್ತ ಹರ್ಷಲ್ ಪಟೇಲ್ ಅವರ ಅದ್ಭುತ ಬೌಲಿಂಗ್ ಪ್ರದರ್ಶನವನ್ನು ಹೊಗಳಿರುವ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ, ಆರ್​ಸಿಬಿ ವೇಗಿ ಭಾರತದ ಎರಡನೇ ಅತ್ಯುತ್ತಮ T20 ಬೌಲರ್ ಎಂದು ಬಣ್ಣಿಸಿದ್ದಾರೆ.

ನನ್ನ ಪ್ರಕಾರ ಈಗಲೂ ಜಸ್​ಪ್ರೀತ್ ಬುಮ್ರಾ ಭಾರತದ ಅತ್ಯುತ್ತಮ ಟಿ20 ವೇಗಿ. 2ನೇ ಸ್ಥಾನದಲ್ಲಿ ಹರ್ಷಲ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಅವರ ಬೌಲಿಂಗ್ ಲೈನಪ್ ಹಾಗೂ ವೇರಿಯೇಷನ್ ಅತ್ಯುತ್ತಮವಾಗಿದೆ. ಹೀಗಾಗಿ ಬುಮ್ರಾ ಬಿಟ್ಟರೆ ಹರ್ಷಲ್ ಪಟೇಲ್ ಭಾರತದ ಅತ್ಯುತ್ತಮ ಟಿ20 ಬೌಲರ್ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.

ಇದೇ ವೇಳೆ ಮುಂಬರುವ T20 ವಿಶ್ವಕಪ್‌ನಲ್ಲಿ ಭಾರತದ ಇತರ ಆಯ್ಕೆಗಳ ಕುರಿತು ಮಾತನಾಡಿದ ಆಕಾಶ್ ಚೋಪ್ರಾ, ದೀಪಕ್ ಹೂಡಾ ಮತ್ತು ಅನುಭವಿ ದಿನೇಶ್ ಕಾರ್ತಿಕ್ ಅವರಂತಹ ಬ್ಯಾಟ್ಸ್​ಮನ್​ಗಳು ತಮ್ಮ ಜವಾಬ್ದಾರಿಯನ್ನು ಪರಿಪೂರ್ಣವಾಗಿ ನಿರ್ವಹಿಸಿದ್ದಾರೆ. ದೀಪಕ್ ಹೂಡಾ ಇಲ್ಲಿಯವರೆಗೆ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಅವರು ಕೆಳ ಕ್ರಮಾಂಕದಲ್ಲಿ ಆಯ್ಕೆಯಾಗಬಹುದು. ಹಾಗೆಯೇ ದಿನೇಶ್ ಕಾರ್ತಿಕ್ ಬಗ್ಗೆಯೂ ಯೋಚಿಸಬಹುದು. ಏಕೆಂದರೆ ವಯಸ್ಸಿಗೂ ಇದಕ್ಕೂ ಏನು ಸಂಬಂಧ? ನೀವು ಚೆನ್ನಾಗಿ ಆಡುತ್ತಿದ್ದರೆ, ನೀವು ಚೆನ್ನಾಗಿ ಆಡುತ್ತೀರಿ. ಸೂರ್ಯಕುಮಾರ್ ಕುಲದೀಪ್ ಕೂಡ ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಆದಾಗ್ಯೂ, ಆಯ್ಕೆಗಾರರು ಹೆಚ್ಚು ರನ್ ಗಳಿಸಿದವರು ಮತ್ತು ಹೆಚ್ಚು ವಿಕೆಟ್ ಪಡೆದವರು ಯಾರು ಎಂಬುದನ್ನು ನೋಡುವುದಕ್ಕಿಂತ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಆಯ್ಕೆ ಮಾಡುವುದು ಉತ್ತಮ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಆಟಗಾರರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೆ ಅವರಿಗೆ ಅವಕಾಶಗಳನ್ನು ನೀಡಿ, ಅದು ಮುಖ್ಯವಾಗಿದೆ. ಆರಂಭಿಕ ಆಟಗಾರನು ಹೆಚ್ಚು ರನ್ ಗಳಿಸಿದ ಮಾತ್ರಕ್ಕೆ ಮಧ್ಯಮ ಕ್ರಮಾಂಕದಲ್ಲಿ ಅವರಿಗೆ ಅವಕಾಶ ನೀಡಬೇಡಿ ಅಥವಾ ಮಧ್ಯಮ-ಓವರ್‌ಗಳ ಬೌಲರ್​ಗಳನ್ನು ಆಯ್ಕೆ ಮಾಡಬೇಡಿ. ಬದಲಾಗಿ ಯಾರು ಪ್ರಸ್ತುತ ಉತ್ತಮ ಪ್ರದರ್ಶನ ನೀಡುತ್ತಿದ್ದಾರೋ ಅವರ ಬಗ್ಗೆ ಆಯ್ಕೆದಾರರು ಯೋಚಿಸಬೇಕು ಎಂದು ನಾನು ಭಾವಿಸುತ್ತೇನೆ ಎಂದು ಆಕಾಶ್ ಚೋಪ್ರಾ ಹೇಳಿದರು.

ಇದನ್ನೂ ಓದಿ: Hardik Pandya: ಪಾಂಡ್ಯ ಪವರ್: ಸಿಕ್ಸ್ ಸಿಡಿಸಿ ದಾಖಲೆ ಬರೆದ ಹಾರ್ದಿಕ್

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

Published On - 4:58 pm, Thu, 14 April 22

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!