AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Harshal Patel: ಕ್ರೀಡಾಸ್ಪೂರ್ತಿ ಮರೆತ ಹರ್ಷಲ್ ಪಟೇಲ್: ಆರ್​ಸಿಬಿ ವೇಗಿ ವಿರುದ್ದ ಆಕ್ರೋಶ

IPL 2022: ಅಂತಿಮವಾಗಿ ಆರ್​ಸಿಬಿ 19.3 ಓವರ್​ಗಳಲ್ಲಿ 115 ರನ್​ಗೆ ಆಲೌಟ್ ಆಗುವ ಮೂಲಕ 29 ರನ್​ಗಳಿಂದ ಸೋಲೊಪ್ಪಿಕೊಂಡಿತು. 31 ಎಸೆತಗಳಲ್ಲಿ 56 ರನ್ ಬಾರಿಸಿ ಮಿಂಚಿದ್ದ ರಿಯಾನ್ ಪರಾಗ್ ಈ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Harshal Patel: ಕ್ರೀಡಾಸ್ಪೂರ್ತಿ ಮರೆತ ಹರ್ಷಲ್ ಪಟೇಲ್: ಆರ್​ಸಿಬಿ ವೇಗಿ ವಿರುದ್ದ ಆಕ್ರೋಶ
Harshal Patel-Riyan Parag
TV9 Web
| Edited By: |

Updated on: Apr 27, 2022 | 12:27 PM

Share

IPL 2022: ಪುಣೆಯಲ್ಲಿ ನಡೆದ ಐಪಿಎಲ್​ನ 39ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ದ ರಾಜಸ್ಥಾನ್ ರಾಯಲ್ಸ್ (RCB vs RR) 29 ರನ್​ಗಳಿಂದ ಜಯ ಸಾಧಿಸಿತ್ತು. ಈ ಪಂದ್ಯದ ವೇಳೆ ಆರ್​ಸಿಬಿ ಆಟಗಾರ ಹರ್ಷಲ್ ಪಟೇಲ್ ಹಾಗೂ ರಿಯಾನ್ ಪರಾಗ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಪರಾಗ್, ಹರ್ಷಲ್ ಪಟೇಲ್ ಅವರ ಕೊನೆಯ ಓವರ್​ನಲ್ಲಿ 1 ಫೋರ್ 2 ಸಿಕ್ಸ್​ನೊಂದಿಗೆ 18 ರನ್ ಬಾರಿಸಿದ್ದರು. ಅದರಲ್ಲೂ ಕೊನೆಯ ಎಸೆತದಲ್ಲಿ ಸಿಕ್ಸ್​ ಬಾರಿಸಿದ್ದರಿಂದ ಹರ್ಷಲ್ ಪಟೇಲ್​ಗೆ ಕೋಪ ನೆತ್ತಿಗೇರಿದೆ. ಇತ್ತ ಇನಿಂಗ್ಸ್ ಮುಗಿಸಿ ಡಗೌಟ್​ಗೆ ಮರಳುತ್ತಿದ್ದ ಪರಾಗ್​ ಅವರನ್ನು ಮೇಲ್ನೋಟಕ್ಕೆ ಹರ್ಷಲ್ ಪಟೇಲ್ ಕೆಣಕಿದ್ದಾರೆ. ಇದರಿಂದ ಕೋಪಗೊಂಡ ರಿಯಾನ್ ಪರಾಗ್ ಕೂಡ ತಿರುಗೇಟು ನೀಡಿದ್ದರು. ಆ ಬಳಿಕ ಇಬ್ಬರ ನಡುವೆ ಮೈದಾನದಲ್ಲೇ ಮಾತಿನ ಚಕಮಕಿ ನಡೆಯಿತು. ಅಷ್ಟರಲ್ಲಿ ಇತರೆ ಆಟಗಾರರು ಆಗಮಿಸುವ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಇದಾದ ಬಳಿಕ 145 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಆರ್​ಸಿಬಿ ತಂಡವು 19.3 ಓವರ್​ಗಳಲ್ಲಿ ಕೇವಲ 115 ರನ್​ಗಳಿಸಿ 29 ರನ್​ಗಳಿಂದ ಸೋಲೋಪ್ಪಿಕೊಂಡಿತು. ಅಂತಿಮವಾಗಿ ಔಟ್ ಆಗಿದ್ದು ಹರ್ಷಲ್ ಪಟೇಲ್. ವಿಶೇಷ ಎಂದರೆ ಹರ್ಷಲ್ ಪಟೇಲ್ ಕ್ಯಾಚ್ ನೀಡಿದ್ದು ರಿಯಾನ್ ಪರಾಗ್​ಗೆ. ಪಂದ್ಯ ಮುಗಿದ ಬಳಿಕ ಉಭಯ ತಂಡಗಳ ಆಟಗಾರರು ಶೇಕ್ ಹ್ಯಾಂಡ್ ನೀಡಿದ್ದರು. ಆದರೆ ಈ ವೇಳೆ ಹರ್ಷಲ್ ಪಟೇಲ್ ರಿಯಾನ್ ಪರಾಗ್​ ಅವರನ್ನು ನಿರ್ಲಕ್ಷ್ಯ ಮಾಡಿದ್ದಾರೆ.

ಕೈ ಕುಲಕಲು ಬಂದ ಪರಾಗ್ ಅವರನ್ನು ನಿರ್ಲಕ್ಷಿಸಿ ಹರ್ಷಲ್ ಪಟೇಲ್ ಮುಂದಕ್ಕೆ ಹೋಗಿದ್ದಾರೆ. ಇದೀಗ ಆರ್​ಸಿಬಿ ಆಟಗಾರನ ಈ ನಡೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಷ್ಟೇ ಅಲ್ಲದೆ ಕ್ರೀಡಾಸ್ಪೂರ್ತಿ ಮರೆತ ಹರ್ಷಲ್ ಪಟೇಲ್ ವಿರುದ್ದ ಕ್ರಿಕೆಟ್ ಪ್ರೇಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರೀಕ್ಷೆಯನ್ನು ಸಮರ್ಥಿಸುವಂತೆ ಬೌಲಿಂಗ್ ಮಾಡಿದ್ದ ಆರ್​ಸಿಬಿ ಬೌಲರ್​ಗಳು ಆರಂಭದಲ್ಲೇ ಯಶಸ್ಸು ಸಾಧಿಸಿದ್ದದರು. ಪವರ್​ಪ್ಲೇನಲ್ಲೇ 3 ವಿಕೆಟ್ ಉರುಳಿಸಿ ರಾಜಸ್ಥಾನ್ ರಾಯಲ್ಸ್​ಗೆ ಆಘಾತ ನೀಡಿದ್ದರು. ಆದರೆ 6ನೇ ಕ್ರಮಾಂಕದಲ್ಲಿ ಆಡಿದ ರಿಯಾನ್ ಪರಾಗ್ ಅವರು ಮಾತ್ರ ಆರ್​ಸಿಬಿ ಬೌಲರ್​ಗಳ ವಿರುದ್ದ ತಿರುಗಿಬಿದ್ದರು.

29 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಪರಾಗ್ ತಂಡದ ಮೊತ್ತವನ್ನು ಹೆಚ್ಚಿಸುತ್ತಾ ಹೋದರು. ಅಲ್ಲದೆ ಅಂತಿಮವಾಗಿ 31 ಎಸೆತಗಳಲ್ಲಿ 51 ರನ್​ ಬಾರಿಸಿ ರಾಜಸ್ಥಾನ್ ರಾಯಲ್ಸ್ ತಂಡದ ಮೊತ್ತವನ್ನು 144 ಕ್ಕೆ ತಂದು ನಿಲ್ಲಿಸಿದರು. 145 ರನ್​ಗಳ ಸಾಧಾರಣ ಸವಾಲು ಪಡೆದ ಆರ್​ಸಿಬಿ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾಗಿ ಬಡ್ತಿ ಪಡೆದಿದ್ದ ವಿರಾಟ್ ಕೊಹ್ಲಿ ಕೇವಲ 9 ರನ್​ಗಳಿಸಿ ಔಟಾಗಿದ್ದರು. ಇದರ ಬೆನ್ನಲ್ಲೇ ಡುಪ್ಲೆಸಿಸ್​ (23) ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ (0) ಔಟಾಗುವ ಮೂಲಕ ನಿರಾಸೆ ಮೂಡಿಸಿದರು.

ಇನ್ನುಳಿದಂತೆ ರಜತ್ ಪಾಟಿದಾರ್ (16), ಸುಯಶ್ ಪ್ರಭುದೇಸಾಯಿ (2) ಬಂದ ವೇಗದಲ್ಲೇ ಹಿಂತಿರುಗಿದರು. ಇದಾಗ್ಯೂ ಶಹಬಾಜ್ ಅಹ್ಮದ್ (17) ಒಂದಷ್ಟು ಹೊತ್ತು ಕ್ರೀಸ್ ಕಚ್ಚಿ ನಿಂತರು. ಆದರೆ ಈ ವೇಳೆ ಕೆಟ್ಟ ರನ್​ ಕರೆಯಿಂದಾಗಿ ದಿನೇಶ್ ಕಾರ್ತಿಕ್ (6) ಅವರು ರನೌಟ್ ಆದರು. ಇದರೊಂದಿಗೆ ಆರ್​ಸಿಬಿ ತಂಡದ ಸೋಲು ಖಚಿತವಾಗಿತ್ತು. ಅಂತಿಮವಾಗಿ ಆರ್​ಸಿಬಿ 19.3 ಓವರ್​ಗಳಲ್ಲಿ 115 ರನ್​ಗೆ ಆಲೌಟ್ ಆಗುವ ಮೂಲಕ 29 ರನ್​ಗಳಿಂದ ಸೋಲೊಪ್ಪಿಕೊಂಡಿತು. 31 ಎಸೆತಗಳಲ್ಲಿ 56 ರನ್ ಬಾರಿಸಿ ಮಿಂಚಿದ್ದ ರಿಯಾನ್ ಪರಾಗ್ ಈ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಇದನ್ನೂ ಓದಿ: IPL 2022 VIDEO: ಏನೋ ಮಾಡ್ತೀಯಾ..? ಮೈದಾನದಲ್ಲೇ ಜಗಳಕ್ಕಿಳಿದ ಹರ್ಷಲ್-ಪರಾಗ್

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ