AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy 2023: ಫೈನಲ್​ಗೆ ಪ್ರವೇಶಿಸಿದ ಹರ್ಯಾಣ ತಂಡ

Haryana vs Tamil Nadu: ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹಿಮಾಂಶು ರಾಣಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ತಮಿಳುನಾಡು ಬೌಲರ್​ಗಳನ್ನು ದಿಟ್ಟವಾಗಿ ಎದುರಿಸಿದ ರಾಣಾ 118 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 116 ರನ್ ಬಾರಿಸಿದರು. ಇನ್ನು ಅಂತಿಮ ಹಂತದಲ್ಲಿ 30 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 3 ಫೋರ್​ಗಳೊಂದಿಗೆ ಸುಮಿತ್ ಕುಮಾರ್ 48 ರನ್​ ಬಾರಿಸಿದರು.

Vijay Hazare Trophy 2023: ಫೈನಲ್​ಗೆ ಪ್ರವೇಶಿಸಿದ ಹರ್ಯಾಣ ತಂಡ
Haryana
TV9 Web
| Edited By: |

Updated on: Dec 14, 2023 | 11:35 AM

Share

Vijay Hazare Trophy 2023: ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಷೇಯನ್ ಸ್ಟೇಡಿಯಂನಲ್ಲಿ ನಡೆದ ವಿಜಯ್ ಹಜಾರೆ ಟೂರ್ನಿಯ ಮೊದಲ ಸೆಮಿಫೈನಲ್​ನಲ್ಲಿ ಹರ್ಯಾಣ ತಂಡ ಭರ್ಜರಿ ಜಯ ಸಾಧಿಸಿದೆ. ತಮಿಳುನಾಡು ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಯಾಣ ತಂಡದ ನಾಯಕ ಅಶೋಕ್ ಮೆನಾರಿಯಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಹರ್ಯಾಣ ತಂಡಕ್ಕೆ ಆರಂಭಿಕ ಆಟಗಾರ ಯುವರಾಜ್ ಸಿಂಗ್ ಉತ್ತಮ ಆರಂಭ ಒದಗಿಸಿದ್ದರು. 79 ಎಸೆತಗಳನ್ನು ಎದುರಿಸಿದ ಯುವರಾಜ್ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 65 ರನ್ ಬಾರಿಸಿ ಟಿ ನಟರಾಜನ್​ಗೆ ವಿಕೆಟ್ ಒಪ್ಪಿಸಿದರು.

ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹಿಮಾಂಶು ರಾಣಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ತಮಿಳುನಾಡು ಬೌಲರ್​ಗಳನ್ನು ದಿಟ್ಟವಾಗಿ ಎದುರಿಸಿದ ರಾಣಾ 118 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 116 ರನ್ ಬಾರಿಸಿದರು. ಇನ್ನು ಅಂತಿಮ ಹಂತದಲ್ಲಿ 30 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 3 ಫೋರ್​ಗಳೊಂದಿಗೆ ಸುಮಿತ್ ಕುಮಾರ್ 48 ರನ್​ ಬಾರಿಸಿದರು. ಇದರೊಂದಿಗೆ ಹರ್ಯಾಣ ತಂಡವು 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 293 ರನ್ ಕಲೆಹಾಕಿತು.

294 ರನ್​ಗಳ ಗುರಿ ಬೆನ್ನತ್ತಿದ ತಮಿಳುನಾಡು ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕರಾಗಿ ಬಾಬಾ ಅಪರಜಿತ್ (7) ಹಾಗೂ ಎನ್ ಜಗದೀಸನ್ (30) ಬೇಗನೆ ಔಟಾದರು. ಇನ್ನು ಹರಿ ನಿಶಾಂತ್ ಕೇವಲ 1 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಆ ಬಳಿಕ ಬಂದ ವಿಜಯ್ ಶಂಕರ್ 23 ರನ್​ಗಳಿಸಲಷ್ಟೇ ಶಕ್ತರಾದರು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಬಾಬಾ ಇಂದ್ರಜಿತ್ 64 ರನ್​ಗಳ ಕೊಡುಗೆ ನೀಡಿದರು. ಇನ್ನು ನಾಯಕ ದಿನೇಶ್ ಕಾರ್ತಿಕ್ 31 ರನ್ ಬಾರಿಸಿ ಔಟಾದರು.

ಇದರೊಂದಿಗೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಹರ್ಯಾಣ ಬೌಲರ್​ಗಳು ಅಂತಿಮವಾಗಿ ತಮಿಳುನಾಡು ತಂಡವನ್ನು 47.1 ಓವರ್​ಗಳಲ್ಲಿ 230 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಹರ್ಯಾಣ ತಂಡವು 63 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಈ ಹರ್ಯಾಣ ತಂಡ ವಿಜಯ್ ಹಜಾರೆ ಟೂರ್ನಿ 2023 ರ ಫೈನಲ್​ಗೆ ಪ್ರವೇಶಿಸಿದೆ.

ಹರ್ಯಾಣ ಪ್ಲೇಯಿಂಗ್ 11: ಯುವರಾಜ್ ಸಿಂಗ್ , ಅಂಕಿತ್ ಕುಮಾರ್ , ಹಿಮಾಂಶು ರಾಣಾ , ಅಶೋಕ್ ಮೆನಾರಿಯಾ (ನಾಯಕ) , ನಿಶಾಂತ್ ಸಿಂಧು , ರೋಹಿತ್ ಪರ್ಮೋದ್ ಶರ್ಮಾ (ವಿಕೆಟ್ ಕೀಪರ್) , ರಾಹುಲ್ ತೆವಾಟಿಯಾ , ಸುಮಿತ್ ಕುಮಾರ್ , ಹರ್ಷಲ್ ಪಟೇಲ್ , ಅಮಿತ್ ರಾಣಾ , ಅಂಶುಲ್ ಕಾಂಬೋಜ್.

ಇದನ್ನೂ ಓದಿ: RCB ತಂಡದ ಅತ್ಯಂತ ಕೆಟ್ಟ ಆಯ್ಕೆಗಳಾವುವು ಗೊತ್ತಾ?

ತಮಿಳುನಾಡು ಪ್ಲೇಯಿಂಗ್ 11: ಬಾಬಾ ಅಪರಜಿತ್ , ಎನ್ ಜಗದೀಸನ್ , ಹರಿ ನಿಶಾಂತ್ , ಬಾಬಾ ಇಂದ್ರಜಿತ್ , ವಿಜಯ್ ಶಂಕರ್ , ದಿನೇಶ್ ಕಾರ್ತಿಕ್ (ನಾಯಕ) , ಶಾರುಖ್ ಖಾನ್ , ರವಿಶ್ರೀನಿವಾಸನ್ ಸಾಯಿ ಕಿಶೋರ್ , ಮಣಿಮಾರನ್ ಸಿದ್ಧಾರ್ಥ್ , ವರುಣ್ ಚಕ್ರವರ್ತಿ , ಟಿ ನಟರಾಜನ್.

ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ