AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಕೋಚ್ ರಾಹುಲ್ ದ್ರಾವಿಡ್ ಜೊತೆ ಜಾಲಿ ಮೂಡ್​ನಲ್ಲಿ ಟೀಮ್ ಇಂಡಿಯಾ

India vs England: ಭಾರತ ತಂಡವು ತನ್ನ ಮುಂದಿನ ಪಂದ್ಯವನ್ನು ಅಕ್ಟೋಬರ್ 29 ರಂದು ಆಡಲಿದೆ. ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ಅನ್ನು ಎದುರಿಸಲಿದೆ.

VIDEO: ಕೋಚ್ ರಾಹುಲ್ ದ್ರಾವಿಡ್ ಜೊತೆ ಜಾಲಿ ಮೂಡ್​ನಲ್ಲಿ ಟೀಮ್ ಇಂಡಿಯಾ
Rahul Dravid
TV9 Web
| Updated By: ಝಾಹಿರ್ ಯೂಸುಫ್|

Updated on: Oct 25, 2023 | 8:10 PM

Share

ಭಾರತೀಯ ಕ್ರಿಕೆಟ್ ತಂಡವು ವಿಶ್ವಕಪ್‌ನಲ್ಲಿ (ICC Cricket World Cup 2023) ಅತ್ಯುತ್ತಮ ಫಾರ್ಮ್‌ನಲ್ಲಿದೆ. ಭಾರತ ಇದುವರೆಗೆ ಆಡಿರುವ ಐದು ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಈ ಮೂಲಕ ಗೆಲುವಿನ ಲಯ ಮುಂದುವರೆಸಿದೆ. ಅದರಲ್ಲೂ ನ್ಯೂಝಿಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಆಟಗಾರರು ಇದೀಗ ವಿಶ್ರಾಂತಿಯಲ್ಲಿದ್ದಾರೆ. ಈ ವಿಶ್ರಾಂತಿ ನಡುವೆ ಟೀಮ್ ಇಂಡಿಯಾ ಸಿಬ್ಬಂದಿಗಳು ಟ್ರೆಕ್ಕಿಂಗ್ ಮೂಲಕ ಧರ್ಮಶಾಲಾದ ಪ್ರಕೃತಿಯನ್ನು ಎಂಜಾಯ್ ಮಾಡುತ್ತಿದ್ದಾರೆ.

ಈ ಟ್ರೆಕ್ಕಿಂಗ್ ವಿಡಿಯೋವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಅಧಿಕೃತ Instagram ಖಾತೆಯಲ್ಲಿ ಹಂಚಿಕೊಂಡಿದೆ. ವೀಡಿಯೊದಲ್ಲಿ, ರಾಹುಲ್ ದ್ರಾವಿಡ್ ಮತ್ತು ಉಳಿದ ಕೋಚಿಂಗ್ ಸಿಬ್ಬಂದಿ ಧರ್ಮಶಾಲಾದಲ್ಲಿ ಚಾರಣಕ್ಕೆ ಹೋಗುತ್ತಿರುವುದನ್ನು ಕಾಣಬಹುದು.

ಇದೇ ವೇಳೆ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕೂಡ ಮಾತನಾಡಿದ್ದು, ಇಲ್ಲಿನ ಪ್ರಕೃತಿ ರಮಣೀಯ ದೃಶ್ಯಾವಳಿ ಅದ್ಭುತವಾಗಿದೆ ಎಂದರು. ಪರ್ವತಗಳನ್ನು ಹತ್ತುವುದು ತುಂಬಾ ಕಷ್ಟ. ಟ್ರೈಂಡ್ ಟ್ರೆಕ್ ತುಂಬಾ ಸವಾಲಿನದು. ಪರ್ವತಾರೋಹಣ ಸಮಯದಲ್ಲಿ ಬಂಡೆಗಳ ಮೇಲೆ ನಡೆಯುವುದು ಅಪಾಯಗಳಿಂದ ಕೂಡಿದೆ. ಹಾಗಾಗಿ ನಮ್ಮ ಆಟಗಾರರನ್ನು ಇಲ್ಲಿಗೆ ಕರೆತರಲು ಸಾಧ್ಯವಾಗಲಿಲ್ಲ. ಆದರೆ, ಅವರೆಲ್ಲರೂ ವಿಶ್ರಾಂತಿ ಪಡೆಯಬೇಕಾದಾಗ ಇಲ್ಲಿಗೆ ಬಂದು ಇಲ್ಲಿನ ಸುಂದರ ದೃಶ್ಯಾವಳಿಗಳನ್ನು ಕಣ್ತುಂಬಿಕೊಳ್ಳಬೇಕೆಂದು ನಾನು ಬಯಸುತ್ತೇನೆ,” ಎಂದರು.

ಮೆಕ್ಲಿಯೋಡ್‌ಗಂಜ್‌ನಲ್ಲಿರುವ ಗ್ಲುನಿಂದ ಈ ಚಾರಣವನ್ನು ಆರಂಭಿಸಿದ್ದೇವೆ ಎಂದು ಟೀಮ್ ಇಂಡಿಯಾ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಹೇಳಿದ್ದಾರೆ. ಕೊನೆಯ ಚಾರಣ ಸ್ವಲ್ಪ ಕಷ್ಟಕರವಾಗಿತ್ತು. ಆ ಸಮಯದಲ್ಲಿ ಅರ್ಧ ಗಂಟೆ ತುಂಬಾ ಚಾಲೆಂಜಿಂಗ್ ಆಗಿತ್ತು. ಆದರೆ ಅಂತಿಮವಾಗಿ ಪ್ರಕೃತಿಯ ಸೌಂದರ್ಯವನ್ನು ನೋಡಿದಾಗ ಆಯಾಸವೆಲ್ಲ ಮಾಯವಾಗುತ್ತದೆ ಎಂದರು.

ರಾಹುಲ್ ಜೊತೆ ಕೆಎಲ್ ಎಂಜಾಯ್:

ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಜೊತೆ ಕೆಎಲ್ ರಾಹುಲ್ ಕೂಡ ಟ್ರೆಕ್ಕಿಂಗ್​ಗೆ ತೆರಳಿದ್ದಾರೆ. ಇದರ ಫೋಟೋವನ್ನು ಕೆಎಲ್​ಆರ್​ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಈ ಫೋಟೋದಲ್ಲಿ ಟೀಮ್ ಇಂಡಿಯಾ ಕೋಚ್ ಸಖತ್ ಎಂಜಾಯ್ ಮಾಡುತ್ತಿರುವುದು ಕಾಣಬಹುದು.

ಭಾರತದ ಮುಂದಿನ ಪಂದ್ಯ ಯಾವಾಗ?

ಭಾರತ ತಂಡವು ತನ್ನ ಮುಂದಿನ ಪಂದ್ಯವನ್ನು ಅಕ್ಟೋಬರ್ 29 ರಂದು ಆಡಲಿದೆ. ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ಅನ್ನು ಎದುರಿಸಲಿದೆ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್