AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಗೆ ಪ್ಲೇಆಫ್​ ಪ್ರವೇಶಿಸಲು ಇರುವುದು ಮೂರೇ ದಾರಿ..!

IPL 2022 RCB Playoffs Chances: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ತಂಡಗಳು ಮುಂದಿನ ಪಂದ್ಯಗಳನ್ನು ಸೋತರೆ, ಕೆಕೆಆರ್​, ಪಂಜಾಬ್ ಕಿಂಗ್ಸ್ ಹಾಗೂ ಎಸ್​ಆರ್​ಹೆಚ್​ ತಂಡಗಳಿಗೆ ಪ್ಲೇಆಫ್​ಗೆ ಚಾನ್ಸ್ ಇರಲಿದೆ.

IPL 2022: RCB ಗೆ ಪ್ಲೇಆಫ್​ ಪ್ರವೇಶಿಸಲು ಇರುವುದು ಮೂರೇ ದಾರಿ..!
IPL 2022 RCB
TV9 Web
| Edited By: |

Updated on:May 18, 2022 | 6:25 PM

Share

IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ 2022 ರ ಪ್ಲೇಆಫ್ ಪ್ರವೇಶಿಸುವ ಯತ್ನದಲ್ಲಿದೆ. ಆದರೆ ಪ್ರಸ್ತುತ ಸನ್ನಿವೇಶದಲ್ಲಿ ಆರ್​ಸಿಬಿಗೆ ನಾಕೌಟ್‌ನ ಹಾದಿ ಸುಲಭವಲ್ಲ. ಏಕೆಂದರೆ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವು 13 ಪಂದ್ಯಗಳಿಂದ 14 ಅಂಕಗಳನ್ನು ಕಲೆಹಾಕಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ 5 ನೇ ಸ್ಥಾನದಲ್ಲಿದೆ. ಅತ್ತ ಇಷ್ಟೇ ಪಾಯಿಂಟ್ಸ್ ಕಲೆಹಾಕಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು 4ನೇ ಸ್ಥಾನದಲ್ಲಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ನಡುವೆ 4ನೇ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ವಿಶೇಷ ಎಂದರೆ ಉಭಯ ತಂಡಗಳಿಗೂ ಇನ್ನು ಒಂದು ಪಂದ್ಯವಿದ್ದು, ಈ ಪಂದ್ಯದ ಮೂಲಕ ಪ್ಲೇಆಫ್ ಆಡುವ ತಂಡ ಯಾವುದೆಂದು ನಿರ್ಧಾರವಾಗಲಿದೆ. ಹಾಗಿದ್ರೆ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಲು ಇರುವ ಮಾರ್ಗಗಳಾವುವು ನೋಡೋಣ…

1- ಗುಜರಾತ್ ಟೈಟನ್ಸ್ ವಿರುದ್ದದ ಗೆಲುವು: ಆರ್​ಸಿಬಿ ತಂಡವು ಗುಜರಾತ್ ಟೈಟನ್ಸ್ ವಿರುದ್ದ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸಬಹುದು. ಒಂದು ವೇಳೆ ಸಾಧಾರಣ ಗೆಲುವು ಕಂಡರೆ ಪ್ಲೇಆಫ್ ಹಾದಿ ಕಠಿಣವಾಗಲಿದೆ. ಏಕೆಂದರೆ ಅತ್ತ ಡೆಲ್ಲಿ ಕ್ಯಾಪಿಟಲ್ಸ್​ ತಂಡವು ಮುಂಬೈ ವಿರುದ್ದ ಸೋತರೆ ಮಾತ್ರ ಆರ್​ಸಿಬಿಗೆ ಪ್ಲೇಆಫ್​ ಪ್ರವೇಶಿಸುವ ಅವಕಾಶ ಇರಲಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್​ ರನ್​ ರೇಟ್​ ಅನ್ನು ಹಿಂದಿಕ್ಕುವಂತೆ ಗುಜರಾತ್ ಟೈಟನ್ಸ್ ವಿರುದ್ದ ಆರ್​ಸಿಬಿ ಗೆಲ್ಲಬೇಕು. ಅಂದರೆ ಕನಿಷ್ಠ 80 ರನ್​ಗಳ ಅಂತರದಿಂದ ಗುಜರಾತ್ ಟೈಟನ್ಸ್ ವಿರುದ್ದ ಗೆದ್ದರೆ ಆರ್​ಸಿಬಿ ಮತ್ತೆ ಪಾಯಿಂಟ್ಸ್​ ಟೇಬಲ್​ನಲ್ಲಿ ನಾಲ್ಕನೇ ಸ್ಥಾನಕ್ಕೇರಬಹುದು. ಈ ಮೂಲಕ ನೆಟ್ ರನ್ ರೇಟ್​ ಸಹಾಯದಿಂದ ಪ್ಲೇಆಫ್​ ಪ್ರವೇಶಿಸಬಹುದು.

2- ಲಕ್ನೋ ತಂಡದ ಸೋಲು: ಕೆಕೆಆರ್ ವಿರುದ್ದದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 80 ರನ್​ಗಳ ಅಂತರದಿಂದ ಸೋತರೆ ನೆಟ್ ರನ್ ರೇಟ್ ಕುಸಿಯಲಿದೆ. ಅಷ್ಟೇ ಅಲ್ಲದೆ ಪಾಯಿಂಟ್ಸ್​ ಟೇಬಲ್​ನಲ್ಲಿ ಲಕ್ನೋ ನಾಲ್ಕನೇ ಸ್ಥಾನಕ್ಕೆ ಇಳಿಯಬಹುದು. ಮತ್ತೊಂದೆಡೆ ಗುಜರಾತ್ ಟೈಟನ್ಸ್ ವಿರುದ್ದ ಆರ್​ಸಿಬಿ ತಂಡವು 80 ರನ್​ಗಳಿಗಿಂತ ಹೆಚ್ಚಿನ ರನ್​ಗಳ ಅಂತರದಿಂದ ಗೆಲ್ಲುವ ಮೂಲಕ ಲಕ್ನೋ ತಂಡವನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನ ಅಲಂಕರಿಸಬಹುದು. ಹೀಗಾದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ದ ಗೆದ್ದರೂ ಅದು ಆರ್​ಸಿಬಿ ಮೇಲೆ ಪರಿಣಾಮ ಬೀರುವುದಿಲ್ಲ. ಆದರೆ ಇಲ್ಲಿ ಲಕ್ನೋ ಸೂಪರ್ ಜೈಂಟ್ಸ್ 80 ರನ್​ಗಳ ಅಂತರದಿಂದ ಕೆಕೆಆರ್ ವಿರುದ್ದ ಸೋಲಲಿದೆಯಾ ಎಂಬುದೇ ದೊಡ್ಡ ಪ್ರಶ್ನೆ.

ಇದನ್ನೂ ಓದಿ
Image
IPL 2022: ಎಬಿಡಿ, ಕ್ರಿಸ್ ಗೇಲ್​ಗೆ RCB ಯ ಹಾಲ್ ಆಫ್ ಫೇಮ್ ಗೌರವ
Image
IPL 2022: ಇಬ್ಬರು ಯುವ ಆಟಗಾರರ ಪ್ರದರ್ಶನಕ್ಕೆ ಗಂಗೂಲಿ ಫಿದಾ..!
Image
Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ
Image
IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!

3- ಡೆಲ್ಲಿ, ಆರ್​ಸಿಬಿ ತಂಡಗಳ ಸೋಲು: ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ ಪಂದ್ಯಗಳಲ್ಲಿ ಸೋತರೂ ಬೆಂಗಳೂರು ತಂಡ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಇಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ದ ಭಾರೀ ಅಂತರದಿಂದ ಸೋಲಬೇಕಾಗುತ್ತದೆ. ಅಷ್ಟೇ ಅಲ್ಲದೆ ಆರ್​ಸಿಬಿ ಗುಜರಾತ್ ಟೈಟನ್ಸ್​ ವಿರುದ್ದ ಕಡಿಮೆ ಅಂತರದಿಂದ ಸೋಲಬೇಕು. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್ ರನ್ ರೇಟ್ ಕಡಿಮೆಯಾಗಿ, ಆರ್​ಸಿಬಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಮೇಲೇರಬಹುದು. ಇಲ್ಲಿ 14 ಪಾಯಿಂಟ್ಸ್ ಲೆಕ್ಕಾಚಾರದಲ್ಲಿ ಉತ್ತಮ ನೆಟ್ ರನ್ ರೇಟ್ ಹೊಂದಿದ್ದರೆ ಆರ್​ಸಿಬಿ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು.

ಆದರೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ತಂಡಗಳು ಮುಂದಿನ ಪಂದ್ಯಗಳನ್ನು ಸೋತರೆ, ಕೆಕೆಆರ್​, ಪಂಜಾಬ್ ಕಿಂಗ್ಸ್ ಹಾಗೂ ಎಸ್​ಆರ್​ಹೆಚ್​ ತಂಡಗಳಿಗೆ ಪ್ಲೇಆಫ್​ಗೆ ಚಾನ್ಸ್ ಇರಲಿದೆ. ಏಕೆಂದರೆ ಈ ತಂಡಗಳು 12 ಪಾಯಿಂಟ್ಸ್ ಕಲೆಹಾಕಿದ್ದು, ತಮ್ಮ ಕೊನೆಯ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ತಂಡವನ್ನು ನೆಟ್ ರನ್​ ರೇಟ್​ ಮೂಲಕ ಹಿಂದಿಕ್ಕಿ ಪ್ಲೇಆಫ್​ ಪ್ರವೇಶಿಸುವ ಅವಕಾಶ ಇರಲಿದೆ. ಹೀಗಾಗಿ ಆರ್​ಸಿಬಿ ತಂಡವು ಗುಜರಾತ್ ಟೈಟನ್ಸ್​ ವಿರುದ್ದ ಭಾರೀ ಅಂತರದಿಂದ ಗೆಲ್ಲುವ ಮೂಲಕ ನೆಟ್​ ರನ್​ ರೇಟ್ ಸಹಾಯದಿಂದ ಪ್ಲೇಆಫ್ ಪ್ರವೇಶಿಸುವುದೊಂದೇ ಉತ್ತಮ ಮಾರ್ಗ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:24 pm, Wed, 18 May 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?