AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಸೆಹ್ವಾಗ್-ಗಂಭೀರ್ ದಾಖಲೆ ಮುರಿದ ಕೆಎಲ್ ರಾಹುಲ್-ರೋಹಿತ್ ಶರ್ಮಾ

KL Rahul-Rohit Sharma: ಈ ಎಲ್ಲಾ ದಾಖಲೆಯನ್ನು ಮುರಿದು ಇದೀಗ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಜೋಡಿ 140 ರನ್​ಗಳ ಜೊತೆಯಾಟವಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿ ಇತಿಹಾಸ ಬರೆದಿದ್ದಾರೆ.

T20 World Cup 2021: ಸೆಹ್ವಾಗ್-ಗಂಭೀರ್ ದಾಖಲೆ ಮುರಿದ ಕೆಎಲ್ ರಾಹುಲ್-ರೋಹಿತ್ ಶರ್ಮಾ
Rohit Sharma-KL Rahul
TV9 Web
| Updated By: ಝಾಹಿರ್ ಯೂಸುಫ್|

Updated on: Nov 03, 2021 | 11:14 PM

Share

ಅಫ್ಘಾನಿಸ್ತಾನ್ ವಿರುದ್ದದ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಹೊಸ ದಾಖಲೆ ಬರೆದಿದ್ದಾರೆ. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್-ರಾಹುಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದ ಹಿಟ್​ಮ್ಯಾನ್ 47 ಎಸೆತಗಳಲ್ಲಿ 3 ಸಿಕ್ಸ್​ ಹಾಗೂ 8 ಬೌಂಡರಿಗಳೊಂದಿಗೆ 74 ರನ್ ಬಾರಿಸಿದ್ದರು. ಮತ್ತೊಂದೆಡೆ 2 ಸಿಕ್ಸ್ ಹಾಗೂ 6 ಬೌಂಡರಿಗಳೊಂದಿಗೆ 48 ಎಸೆತಗಳಲ್ಲಿ ಕೆಎಲ್ ರಾಹುಲ್ 69 ಬಾರಿಸಿ ಟೀಮ್ ಇಂಡಿಯಾಗೆ ಭರ್ಜರಿ ಆರಂಭ ಒದಗಿಸಿದ್ದರು.

ಅಷ್ಟೇ ಅಲ್ಲದೆ ಮೊದಲ ವಿಕೆಟ್​ಗೆ 140 ರನ್​ಗಳ ಜೊತೆಯಾಟವಾಡುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯುತ್ತಮ ಜೊತೆಯಾಟವಾಡಿದ ಜೋಡಿ ಎನಿಸಿಕೊಂಡರು. ಈ ಹಿಂದೆ ಈ ದಾಖಲೆ ವೀರೇಂದ್ರ ಸೆಹ್ವಾಗ್ ಹಾಗೂ ಗೌತಮ್ ಗಂಭೀರ್ ಹೆಸರಿನಲ್ಲಿತ್ತು. 2007ರಲ್ಲಿ ಸೆಹ್ವಾಗ್-ಗೌತಿ ಜೋಡಿ 136 ರನ್​ಗಳ ಜೊತೆಯಾಟವಾಡುವ ಮೂಲಕ ದಾಖಲೆ ನಿರ್ಮಿಸಿದ್ದರು.

ಇದೀಗ 140 ರನ್​ಗಳ ಜೊತೆಯಾಟದೊಂದಿಗೆ 14 ವರ್ಷಗಳ ಹಿಂದಿನ ದಾಖಲೆಯನ್ನು ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಮುರಿದಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಮೂರನೇ ಅತ್ಯುತ್ತಮ ಶತಕದ ಜೊತೆಯಾಟದ ಜೋಡಿಯಾಗಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇದ್ದಾರೆ. ಕೊಹ್ಲಿ ಹಾಗೂ ಹಿಟ್​ಮ್ಯಾನ್ 2014 ರಲ್ಲಿ ವೆಸ್ಟ್ ಇಂಡೀಸ್ ವಿರುದ್ದದ ಟಿ20 ಪಂದ್ಯದಲ್ಲಿ 106 ರನ್​ಗಳ ಜೊತೆಯಾಟವಾಡಿದ್ದರು. ಹಾಗೆಯೇ 2014 ರಲ್ಲಿ ಬಾಂಗ್ಲಾದೇಶ ವಿರುದ್ದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ 100 ರನ್​ಗಳ ಜೊತೆಗಾರಿಕೆ ಪ್ರದರ್ಶಿಸಿದ್ದರು.

ಈ ಎಲ್ಲಾ ದಾಖಲೆಯನ್ನು ಮುರಿದು ಇದೀಗ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಜೋಡಿ 140 ರನ್​ಗಳ ಜೊತೆಯಾಟವಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿ ಇತಿಹಾಸ ಬರೆದಿದ್ದಾರೆ.

ಇದನ್ನೂ ಓದಿ: ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಎಲ್ಲರನ್ನು ಹಿಂದಿಕ್ಕಿದ ಬಾಬರ್

ಇದನ್ನೂ ಓದಿ: IPL 2022: RCB ಈ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು..!

ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ

(Highest partnerships for India in T20 WCs)

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?