AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2025-26: ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​​ ಪಂದ್ಯ; ರಾಜ್ ನಗರ ಸ್ಟೇಡಿಯಂ ಬಗ್ಗೆ ನಿಮಗೆಷ್ಟು ಗೊತ್ತು?

ಫೆಬ್ರವರಿ 24ರಂದು ಹುಬ್ಬಳ್ಳಿಯ ರಾಜ್ ನಗರ KSCA ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ತಂಡಗಳ ನಡುವೆ ಐತಿಹಾಸಿಕ ರಣಜಿ ಫೈನಲ್ ಪಂದ್ಯ ನಡೆಯಲಿದೆ. ಅಂತಾರಾಷ್ಟ್ರೀಯ ಗುಣಮಟ್ಟದ ಈ ಕ್ರೀಡಾಂಗಣದಲ್ಲಿ ರಣಜಿ ಫೈನಲ್ ನಡೆಯುತ್ತಿರುವುದು ಇದೇ ಮೊದಲು. 16.5 ಎಕರೆ ವಿಸ್ತೀರ್ಣದ ಈ ಮೈದಾನದಲ್ಲಿ ಪಿಚ್ ಸಿದ್ಧತೆ ಕಾರ್ಯ ಭರದಿಂದ ಸಾಗಿದ್ದು, ಕ್ರಿಕೆಟ್ ಪ್ರೇಮಿಗಳಲ್ಲಿ ಉತ್ಸಾಹ ಮನೆ ಮಾಡಿದೆ.

Ranji Trophy 2025-26: ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​​ ಪಂದ್ಯ; ರಾಜ್ ನಗರ ಸ್ಟೇಡಿಯಂ ಬಗ್ಗೆ ನಿಮಗೆಷ್ಟು ಗೊತ್ತು?
ರಣಜಿ ಫೈನಲ್​​ ಪಂದ್ಯಕ್ಕೆ ನಡೆಯುತ್ತಿರುವ ತಯಾರಿImage Credit source: Tv9 Kannada
ಸಂಜಯ್ಯಾ ಚಿಕ್ಕಮಠ
| Edited By: |

Updated on:Feb 20, 2026 | 12:44 PM

Share

ಹುಬ್ಬಳ್ಳಿ, ಫೆಬ್ರವರಿ 20: ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ನಡುವೆ ರಣಜಿ ಪೈನಲ್ ಪಂದ್ಯ ರಾಜ್ಯದಲ್ಲಿ ನಡೆಯಲಿದ್ದು, ಫೆ. 24ರಂದು ಹುಬ್ಬಳ್ಳಿ ನಗರದ ರಾಜ್ ನಗರದಲ್ಲಿರೋ KSCA ಮೈದಾನದಲ್ಲಿ ಉಭಯ ತಂಡಗಳು ಸೆಣೆಸಾಡಲಿವೆ. ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಮಾದರಿಯಲ್ಲೇ ಹುಬ್ಬಳ್ಳಿ ನಗರದ ರಾಜ್ ನಗರದಲ್ಲಿ ಕೆಎಸ್​​ಸಿಎ ಅಂತಾರಾಷ್ಟ್ರೀಯ ಮಟ್ಟದ ಸ್ಟೇಡಿಯಂ ಹೊಂದಿದ್ದು, 2012ರಲ್ಲಿ ಇದರ ಉದ್ಘಾಟನೆ ಆಗಿದೆ. ಜಹೀರ್ ಖಾನ್, ಚೇತೇಶ್ವರ ಪೂಜಾರ್ ಸೇರಿದಂತೆ ಅನೇಕ ಆಟಗಾರರು ಈ ಮೈದಾನದಲ್ಲಿ ಆಟವಾಡಿದ್ದಾರೆ.

ಮೊದಲ ಬಾರಿಗೆ ರಣಜಿ ಫೈನಲ್ ಪಂದ್ಯ

ಇಲ್ಲಿವರಗೆ ಒಂಭತ್ತು ರಣಜಿ ಪಂದ್ಯಗಳು ಹುಬ್ಬಳ್ಳಿಯಲ್ಲಿ ನಡೆದಿದ್ದು, ಮೂರು ಲಿಸ್ಟ್ ‘ಎ’ ಪಂದ್ಯಗಳು ನಡೆದಿವೆ. ಭಾರತ್-ಶ್ರೀಲಂಕಾ, ಭಾರತ‌ – ವೆಸ್ಟ್ ಇಂಡೀಸ್, ಭಾರತ-ನ್ಯೂಜಿಲೆಂಡ್ ತಂಡಗಳ ಸೆಣೆಸಾಟಕ್ಕೆ ಈ ಮೈದಾನ ಸಾಕ್ಷಿಯಾಗಿದೆ. ಆದರೆ ಇದೇ ಮೊದಲ ಬಾರಿಗೆ ರಣಜಿ ಫೈನಲ್ ಪಂದ್ಯ ಇಲ್ಲಿ ನಡೆಯುತ್ತಿದೆ.

ಇದನ್ನೂ ಓದಿ: ಕ್ಯಾಚ್ ಹಿಡಿದು, ವಿಕೆಟ್ ಪಡೆದು ವಿಶ್ವ ದಾಖಲೆ ಬರೆದ ಶಮರ್ ಜೋಸೆಫ್

16.5 ಎಕರೆ ವಿಸ್ತೀರ್ಣದಲ್ಲಿರುವ ಸ್ಟೇಡಿಯಂ

ಎಂಟು ಮುಖ್ಯ ಪಿಚ್, ಹತ್ತು ಅಭ್ಯಾಸ ಪಿಚ್ ಮತ್ತು ಎರಡು ಕಾಂಕ್ರೀಟ್​ ಪಿಚ್‌ಗಳನ್ನು ಹೊಂದಿರುವ ಈ ಸ್ಟೇಡಿಯಂ 16.5 ಎಕರೆ ವಿಸ್ತೀರ್ಣದಲ್ಲಿದೆ. ಸಾವಿರಾರು ಜನರು ಕೂತು ಪಂದ್ಯ ವೀಕ್ಷಣೆ ಮಾಡುವ ಉದ್ದೇಶದಿಂದ ಸ್ಟ್ಯಾಂಡ್ ಗಳ ನಿರ್ಮಾಣವಾಗಿದ್ದರೂ ಅವು ಬಳಕೆಯಲ್ಲಿಲ್ಲ. ಸ್ಟ್ಯಾಂಡ್ ಮೇಲೆ ನೆರಳಿನ ವ್ಯವಸ್ಥೆ ಇಲ್ಲದೇ ಇರುವ ಕಾರಣ ಪ್ರತಿಬಾರಿ ಮ್ಯಾಚ್ ನಡೆದಾಗ ಪೆಂಡಾಲ್ ಹಾಕಿ ನೆರಳಿನ ವ್ಯವಸ್ಥೆ ಮಾಡಲಾಗುತ್ತದೆ. ತಾತ್ಕಾಲಿಕ ಸ್ಟ್ಯಾಂಡ್​​ಗಳನ್ನು ಕೂಡಾ ನಿರ್ಮಿಸಲಾಗುತ್ತೆ.

ಇನ್ನು ರಣಜಿ ಪೈನಲ್ ಪಂದ್ಯ ಹುಬ್ಬಳ್ಳಿಯಲ್ಲಿ ನಡೆಯುವುದು ಪಿಕ್ಸ್ ಆಗಿರುವ ಕಾರಣ ಈಗಾಗಲೇ ಹತ್ತಕ್ಕೂ ಹೆಚ್ಚು ಸಿಬ್ಬಂದಿ ‌ಪಿಚ್‌ ಸಿದ್ದೊಗೊಳಿಸುವ ಕಾರ್ಯದಲ್ಲಿ ನಿರತವಾಗಿದ್ದು, ಕಳೆದ ಒಂದು ವಾರದಿಂದ ಈ ಸಂಬಂಧಿತ ಕೆಲಸಗಳು ನಡೆಯುತ್ತಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿರುವ KSCA ಕೂಡ ಮೈದಾನವನ್ನು ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:39 pm, Fri, 20 February 26

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ