
ಹುಬ್ಬಳ್ಳಿ, ಫೆಬ್ರವರಿ 20: ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ನಡುವೆ ರಣಜಿ ಪೈನಲ್ ಪಂದ್ಯ ರಾಜ್ಯದಲ್ಲಿ ನಡೆಯಲಿದ್ದು, ಫೆ. 24ರಂದು ಹುಬ್ಬಳ್ಳಿ ನಗರದ ರಾಜ್ ನಗರದಲ್ಲಿರೋ KSCA ಮೈದಾನದಲ್ಲಿ ಉಭಯ ತಂಡಗಳು ಸೆಣೆಸಾಡಲಿವೆ. ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಮಾದರಿಯಲ್ಲೇ ಹುಬ್ಬಳ್ಳಿ ನಗರದ ರಾಜ್ ನಗರದಲ್ಲಿ ಕೆಎಸ್ಸಿಎ ಅಂತಾರಾಷ್ಟ್ರೀಯ ಮಟ್ಟದ ಸ್ಟೇಡಿಯಂ ಹೊಂದಿದ್ದು, 2012ರಲ್ಲಿ ಇದರ ಉದ್ಘಾಟನೆ ಆಗಿದೆ. ಜಹೀರ್ ಖಾನ್, ಚೇತೇಶ್ವರ ಪೂಜಾರ್ ಸೇರಿದಂತೆ ಅನೇಕ ಆಟಗಾರರು ಈ ಮೈದಾನದಲ್ಲಿ ಆಟವಾಡಿದ್ದಾರೆ.
ಇಲ್ಲಿವರಗೆ ಒಂಭತ್ತು ರಣಜಿ ಪಂದ್ಯಗಳು ಹುಬ್ಬಳ್ಳಿಯಲ್ಲಿ ನಡೆದಿದ್ದು, ಮೂರು ಲಿಸ್ಟ್ ‘ಎ’ ಪಂದ್ಯಗಳು ನಡೆದಿವೆ. ಭಾರತ್-ಶ್ರೀಲಂಕಾ, ಭಾರತ – ವೆಸ್ಟ್ ಇಂಡೀಸ್, ಭಾರತ-ನ್ಯೂಜಿಲೆಂಡ್ ತಂಡಗಳ ಸೆಣೆಸಾಟಕ್ಕೆ ಈ ಮೈದಾನ ಸಾಕ್ಷಿಯಾಗಿದೆ. ಆದರೆ ಇದೇ ಮೊದಲ ಬಾರಿಗೆ ರಣಜಿ ಫೈನಲ್ ಪಂದ್ಯ ಇಲ್ಲಿ ನಡೆಯುತ್ತಿದೆ.
ಇದನ್ನೂ ಓದಿ: ಕ್ಯಾಚ್ ಹಿಡಿದು, ವಿಕೆಟ್ ಪಡೆದು ವಿಶ್ವ ದಾಖಲೆ ಬರೆದ ಶಮರ್ ಜೋಸೆಫ್
ಎಂಟು ಮುಖ್ಯ ಪಿಚ್, ಹತ್ತು ಅಭ್ಯಾಸ ಪಿಚ್ ಮತ್ತು ಎರಡು ಕಾಂಕ್ರೀಟ್ ಪಿಚ್ಗಳನ್ನು ಹೊಂದಿರುವ ಈ ಸ್ಟೇಡಿಯಂ 16.5 ಎಕರೆ ವಿಸ್ತೀರ್ಣದಲ್ಲಿದೆ. ಸಾವಿರಾರು ಜನರು ಕೂತು ಪಂದ್ಯ ವೀಕ್ಷಣೆ ಮಾಡುವ ಉದ್ದೇಶದಿಂದ ಸ್ಟ್ಯಾಂಡ್ ಗಳ ನಿರ್ಮಾಣವಾಗಿದ್ದರೂ ಅವು ಬಳಕೆಯಲ್ಲಿಲ್ಲ. ಸ್ಟ್ಯಾಂಡ್ ಮೇಲೆ ನೆರಳಿನ ವ್ಯವಸ್ಥೆ ಇಲ್ಲದೇ ಇರುವ ಕಾರಣ ಪ್ರತಿಬಾರಿ ಮ್ಯಾಚ್ ನಡೆದಾಗ ಪೆಂಡಾಲ್ ಹಾಕಿ ನೆರಳಿನ ವ್ಯವಸ್ಥೆ ಮಾಡಲಾಗುತ್ತದೆ. ತಾತ್ಕಾಲಿಕ ಸ್ಟ್ಯಾಂಡ್ಗಳನ್ನು ಕೂಡಾ ನಿರ್ಮಿಸಲಾಗುತ್ತೆ.
ಇನ್ನು ರಣಜಿ ಪೈನಲ್ ಪಂದ್ಯ ಹುಬ್ಬಳ್ಳಿಯಲ್ಲಿ ನಡೆಯುವುದು ಪಿಕ್ಸ್ ಆಗಿರುವ ಕಾರಣ ಈಗಾಗಲೇ ಹತ್ತಕ್ಕೂ ಹೆಚ್ಚು ಸಿಬ್ಬಂದಿ ಪಿಚ್ ಸಿದ್ದೊಗೊಳಿಸುವ ಕಾರ್ಯದಲ್ಲಿ ನಿರತವಾಗಿದ್ದು, ಕಳೆದ ಒಂದು ವಾರದಿಂದ ಈ ಸಂಬಂಧಿತ ಕೆಲಸಗಳು ನಡೆಯುತ್ತಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿರುವ KSCA ಕೂಡ ಮೈದಾನವನ್ನು ಪರಿಶೀಲನೆ ನಡೆಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:39 pm, Fri, 20 February 26