AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗಾದ್ರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್​ಗೇರಲಿದೆ..!

Womens T20 World Cup 2026: ಮಹಿಳಾ ಟಿ20 ವಿಶ್ವಕಪ್‌ನ ನಿಯಮಾವಳಿಗಳ ಪ್ರಕಾರ ಲೀಗ್ ಹಂತದ ಮುಕ್ತಾಯದ ವೇಳೆಗೆ ಪ್ರತಿ ಗ್ರೂಪ್‌ನಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ಮಾತ್ರ ನೇರವಾಗಿ ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ. ಪ್ರಸ್ತುತ ಗ್ರೂಪ್ ‘ಎ’ ಪಾಯಿಂಟ್ಸ್ ಟೇಬಲ್‌ನಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದೆ.

ಹೀಗಾದ್ರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್​ಗೇರಲಿದೆ..!
Team India Image Credit source: BCCI
ಝಾಹಿರ್ ಯೂಸುಫ್
|

Updated on: Jun 28, 2026 | 7:57 AM

Share

ಮಹಿಳಾ ಟಿ20 ವಿಶ್ವಕಪ್​ ಟೂರ್ನಿಯ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಸೆಮಿಫೈನಲ್​ಗೇರಿದರೆ, ಇತ್ತ ಆಸ್ಟ್ರೇಲಿಯಾ, ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳ ನಡುವೆ ಸೆಮಿಫೈನಲ್ ರೇಸ್ ಮುಂದುವರೆದಿದೆ. ಇದರಲ್ಲಿ ಆಸ್ಟ್ರೇಲಿಯಾ ತಂಡವು ಸೆಮಿಫೈನಲ್​ ಆಡುವುದು ಬಹುತೇಕ ಖಚಿತ.

ಆದರೆ ಅತ್ತ ಟೀಮ್ ಇಂಡಿಯಾ ಸೆಮಿಫೈನಲ್​ಗೇರಬೇಕಿದ್ದರೆ ಆಸ್ಟ್ರೇಲಿಯಾ ವಿರುದ್ಧ ಗೆಲ್ಲಲೇಬೇಕು. ಒಂದು ವೇಳೆ ಸೋತರೆ ಸೌತ್ ಆಫ್ರಿಕಾ ತಂಡದ ಫಲಿತಾಂಶವನ್ನು ಎದುರು ನೋಡಬೇಕಾದ ಪರಿಸ್ಥಿತಿ ಎದುರಾಗಲಿದೆ. ಹಾಗಿದ್ರೆ ಟೀಮ್ ಇಂಡಿಯಾಗೆ ಸೆಮಿಫೈನಲ್​ಗೇರಲು ಇರುವ ಹಾದಿಗಳಾವುವು ಎಂದು ನೋಡುವುದಾದರೆ…

ಆಸ್ಟ್ರೇಲಿಯಾ ವಿರುದ್ಧ ನೇರ ಗೆಲುವು:

ಭಾರತ ಇಂದು ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿದರೆ ನೇರವಾಗಿ 8 ಅಂಕಗಳನ್ನು ಪಡೆಯುತ್ತದೆ.ಇದೇ ದಿನ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಬಾಂಗ್ಲಾದೇಶ್ ವಿರುದ್ಧ ಸೋತರೆ, ಭಾರತ ತಂಡದ ಸೆಮಿಫೈನಲ್​ ಎಂಟ್ರಿ ಅಧಿಕೃತವಾಗಲಿದೆ.

ಒಂದು ವೇಳೆ ಸೌತ್ ಆಫ್ರಿಕಾ ಕೂಡ ಗೆದ್ದರೆ, ಭಾರತ, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ಮೂರೂ ತಂಡಗಳು ತಲಾ 8 ಅಂಕಗಳನ್ನು ಹೊಂದಲಿವೆ. ಆಗ ಉತ್ತಮ ನೆಟ್ ರನ್ ರೇಟ್ (NRR) ಹೊಂದಿರುವ ಎರಡು ತಂಡಗಳು ಮುಂದೆ ಹೋಗಲಿವೆ. ಪ್ರಸ್ತುತ ಭಾರತ (+2.268) ತಂಡದ ನೆಟ್​ ರನ್ ರೇಟ್ ಸೌತ್​ ಆಫ್ರಿಕಾ (+0.734) ಕ್ಕಿಂತ ಉತ್ತಮ ಸ್ಥಿತಿಯಲ್ಲಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧ ಗೆಲ್ಲುವ ಮೂಲಕ ಟೀಮ್ ಇಂಡಿಯಾ ತನ್ನ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳಬಹುದು.

ಆಸ್ಟ್ರೇಲಿಯಾ ವಿರುದ್ಧ ಸೋತರೆ ಏನಾಗುತ್ತೆ?

ಒಂದು ವೇಳೆ ಟೀಮ್ ಇಂಡಿಯಾ ಇಂದು ಆಸ್ಟ್ರೇಲಿಯಾ ವಿರುದ್ಧ ಸೋತರೆ 6 ಅಂಕಗಳಲ್ಲೇ ಉಳಿಯಲಿವೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ತಂಡವು ಸೌತ್ ಆಫ್ರಿಕಾ ತಂಡದ ಸೋಲನ್ನು ಎದುರು ನೋಡಬೇಕಾಗುತ್ತದೆ. ಅಂದರೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸೋತರೆ, ಬಾಂಗ್ಲಾದೇಶ್ ತಂಡ ಸೌತ್ ಆಫ್ರಿಕಾ ವಿರುದ್ಧ ಗೆಲ್ಲುವುದನ್ನು ಎದುರು ನೋಡಬೇಕು.

ಇನ್ನು ಸರಳವಾಗಿ ಹೇಳಬೇಕೆಂದರೆ ಭಾರತ ತಂಡವು ಇಂದು ಸೋತರೆ, ಸೌತ್ ಆಫ್ರಿಕಾ ತಂಡ ಕೂಡ ಇಂದು ಸೋಲುವುದನ್ನು ನಿರೀಕ್ಷಿಸಬೇಕು. ಆಗ ಭಾರತ ಮತ್ತು ಸೌತ್ ಆಫ್ರಿಕಾ ಎರಡೂ 6 ಅಂಕಗಳಲ್ಲಿ ಸಮಬಲ ಸಾಧಿಸುವುದರಿಂದ, ರನ್ ರೇಟ್ ಆಧಾರದ ಮೇಲೆ ಭಾರತ ಸೆಮಿಗೆ ಲಗ್ಗೆ ಇಡಬಹುದು. ಒಂದು ವೇಳೆ ಭಾರತ ಸೋತು, ಸೌತ್ ಆಫ್ರಿಕಾ ತಂಡ ಗೆದ್ದರೆ ಟೀಮ್ ಇಂಡಿಯಾ ಟೂರ್ನಿಯಿಂದ ಹೊರಬೀಳಲಿದೆ.

ಪಂದ್ಯ ಮಳೆಯಿಂದ ರದ್ದಾದರೆ?

ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಈ ಪಂದ್ಯವು ಮಳೆಯಿಂದಾಗಿ ರದ್ದಾದರೆ, ಎರಡೂ ತಂಡಗಳಿಗೆ ತಲಾ 1 ಅಂಕ ಸಿಗಲಿದೆ. ಇದರಿಂದ ಭಾರತ ತಂಡದ ಅಂಕಗಳು 7 ಕ್ಕೆ  ತಲುಪಲಿದೆ. ಈ ಹಂತದಲ್ಲೂ ಭಾರತ ತಂಡ ಸೆಮಿಫೈನಲ್​ಗೇರಬೇಕಿದ್ದರೆ ಬಾಂಗ್ಲಾದೇಶ್ ತಂಡ ಸೌತ್ ಆಫ್ರಿಕಾವನ್ನು ಸೋಲಿಸಲೇಬೇಕು.

ಭಾರತ ಮತ್ತು ಆಸ್ಟ್ರೇಲಿಯಾ ಪಂದ್ಯ ರದ್ದಾಗಿ, ಸೌತ್ ಆಫ್ರಿಕಾ ಗೆದ್ದರೆ 8 ಅಂಕಗಳೊಂದಿಗೆ ಟೀಮ್ ಇಂಡಿಯಾವನ್ನು ಹಿಂದಿಕ್ಕಿ  ಸೆಮಿಫೈನಲ್ ಏರಲಿದೆ.

ಇದನ್ನೂ ಓದಿ: ಫಿಫಾ ವಿಶ್ವಕಪ್ 2026 ನಾಕೌಟ್ ವೇಳಾಪಟ್ಟಿ ಪ್ರಕಟ

ಹೀಗಾಗಿ ಭಾರತ ತಂಡವು ನೇರವಾಗಿ ಸೆಮಿಫೈನಲ್​ಗೇರಬೇಕಿದ್ದರೆ ಆಸ್ಟ್ರೇಲಿಯಾ ವಿರುದ್ಧ ಕನಿಷ್ಠ 1 ರನ್​ನ ಗೆಲುವು ಸಾಧಿಸಿದರೂ ಸಾಕು. ಈ ಮೂಲಕ ಈ ಬಾರಿಯ ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡುವುದನ್ನು ಖಚಿತಪಡಿಸಿಕೊಳ್ಳಬಹುದು.

Follow Us
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!