AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದು ಹೇಗೆ? ಹೀಗಿದೆ ಲೆಕ್ಕಾಚಾರ

ICC Women's T20 World Cup 2026: ವುಮೆನ್ಸ್ ಟಿ20 ವಿಶ್ವಕಪ್​ನ ಸೆಮಿಫೈನಲ್​ ರೇಸ್​ನಲ್ಲಿ ಭರ್ಜರಿ ಪೈಪೋಟಿ ಏರ್ಪಟ್ಟಿದೆ. ಗ್ರೂಪ್-ಎ ನಲ್ಲಿ ಕಣಕ್ಕಿಳಿಯುತ್ತಿರುವ ಭಾರತ, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ನಡುವಣ ನಾಕೌಟ್ ಹಂತಕ್ಕೇರಲು ನೇರ ಪೈಪೋಟಿ ಏರ್ಪಟ್ಟಿದ್ದು, ಈ ಮೂರು ತಂಡಗಳಿಗೆ ಮುಂದಿನ ಪಂದ್ಯಗಳು ನಿರ್ಣಾಯಕವಾಗಿ ಮಾರ್ಪಟ್ಟಿದೆ.

ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದು ಹೇಗೆ? ಹೀಗಿದೆ ಲೆಕ್ಕಾಚಾರ
Team India Image Credit source: GettyImages
ಝಾಹಿರ್ ಯೂಸುಫ್
|

Updated on:Jun 22, 2026 | 8:22 AM

Share

ಮಹಿಳಾ ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿದೆ. ಮ್ಯಾಚೆಂಸ್ಟರ್​ನ ಓಲ್ಡ್​ ಟ್ರಾಫೋರ್ಡ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 158 ರನ್​ಗಳು ಮಾತ್ರ. ಈ ಗುರಿಯನ್ನು ಸೌತ್ ಆಫ್ರಿಕಾ ತಂಡ 19.1 ಓವರ್​ಗಳಲ್ಲಿ ಚೇಸ್ ಮಾಡಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನೊಂದಿಗೆ ಟೀಮ್ ಇಂಡಿಯಾದ ಸೆಮಿಫೈನಲ್​ ಹಾದಿ ತುಸು ಕಷ್ಟಕರವಾಗಿದೆ.

ಏಕೆಂದರೆ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಗ್ರೂಪ್ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಸೆಮಿಫೈನಲ್​ಗೇರಲಿದೆ. ಇದೀಗ ಸೌತ್ ಆಫ್ರಿಕಾ ವಿರುದ್ಧದ ಸೋಲಿನೊಂದಿಗೆ ಭಾರತ ತಂಡದ ಅಂಕ 4 ರಲ್ಲೇ ಉಳಿದಿದೆ. ಅತ್ತ ಟೀಮ್ ಇಂಡಿಯಾ ವಿರುದ್ಧ ಗೆದ್ದಿರುವ ಸೌತ್ ಆಫ್ರಿಕಾ ಒಟ್ಟು 4 ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೇರಿದೆ. ಇನ್ನು ಆರು ಅಂಕಗಳನ್ನು ಹೊಂದಿರುವ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ. ಈ ಮೂರು ತಂಡಗಳಿಗೂ ಇನ್ನೂ ತಲಾ ಎರಡೆರಡು ಪಂದ್ಯಗಳಿದ್ದು, ಈ ಮ್ಯಾಚ್​ಗಳು ನಿರ್ಣಾಯಕ.

ಈ ನಿರ್ಣಾಯಕ ಪಂದ್ಯಗಳ ಮೂಲಕ ಟೀಮ್ ಇಂಡಿಯಾ ಹೇಗೆ ಸೆಮಿಫೈನಲ್​ಗೇರಲಿದೆ ಎಂದು ನೋಡುವುದಾದರೆ…

  •  ನೇರ ಎಂಟ್ರಿ ಲೆಕ್ಕಾಚಾರ: ಭಾರತ ತಂಡವು ಮುಂದಿನ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಯಾವುದೇ ನೆಟ್ ರನ್ ರೇಟ್ ಲೆಕ್ಕಾಚಾರವಿಲ್ಲದೆ ನೇರವಾಗಿ ಸೆಮಿಫೈನಲ್​ಗೇರುವುದನ್ನು ಎದುರು ನೋಡಬಹುದು.
  • ನೆಟ್ ರನ್ ರೇಟ್ ಲೆಕ್ಕಾಚಾರ:  ಒಂದು ವೇಳೆ ಭಾರತ ತಂಡ ಮುಂದಿನ ಎರಡು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆದ್ದರೆ, ಇತರೆ ತಂಡಗಳ ಫಲಿತಾಂಶವನ್ನು ಅವಲಂಭಿಸಬೇಕಾಗುತ್ತದೆ.

ಭಾರತ ತಂಡವು ಜೂನ್ 25 ರಂದು ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಗೆಲುವನ್ನು ನಿರೀಕ್ಷಿಸಬಹುದು. ಆದರೆ ಜೂನ್ 28 ರಂದು ನಡೆಯಲಿರುವ ತನ್ನ ಕೊನೆಯ ಪಂದ್ಯದಲ್ಲಿ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಎದುರಿಸಬೇಕಿದೆ. ಈ ಪಂದ್ಯವೇ ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ.

ಏಕೆಂದರೆ ಸೌತ್ ಆಫ್ರಿಕಾ ತಂಡವು ತನ್ನ ಮುಂದಿನ ಪಂದ್ಯಗಳನ್ನು ಆಡಲಿರುವುದು ದುರ್ಬಲ ನೆದರ್​ಲ್ಯಾಂಡ್ಸ್ ಹಾಗೂ ಬಾಂಗ್ಲಾದೇಶ್ ವಿರುದ್ಧ. ಒಂದು ವೇಳೆ ಸೌತ್ ಆಫ್ರಿಕಾ ತಂಡವು ತನ್ನ ಕೊನೆಯ ಎರಡು ಮ್ಯಾಚ್​ಗಳಲ್ಲೂ ಜಯ ಸಾಧಿಸಿದರೆ ಒಟ್ಟು 8 ಅಂಕಗಳನ್ನು ಪಡೆಯಲಿದೆ.

ಇದಾಗ್ಯೂ ಇಲ್ಲಿ ಟೀಮ್ ಇಂಡಿಯಾ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿರುವುದು ತನ್ನ ನೆಟ್​ ರನ್ ರೇಟ್. ಭಾರತ ತಂಡವು ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ +2.511 ನೆಟ್ ರನ್ ರೇಟ್ ಹೊಂದಿದೆ. ಇದೇ ವೇಳೆ ಸೌತ್ ಆಫ್ರಿಕಾ ತಂಡದ ನೆಟ್​ ರನ್ ರೇಟ್ -0.546 ನಲ್ಲಿದೆ.

ಅಂದರೆ ಸೌತ್ ಆಫ್ರಿಕಾ ತಂಡವು ತನ್ನ ಮುಂದಿನ ಎರಡು ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೂ ಟೀಮ್ ಇಂಡಿಯಾ ಸೆಮಿಫೈನಲ್​ಗೇರಬಹುದು. ಇದಕ್ಕಾಗಿ ಭಾರತ ತಂಡವು ತನ್ನ ನೆಟ್ ರನ್ ರೇಟ್ ಕಡಿಮೆಯಾಗದಂತೆ ಮುಂದಿನ ಎರಡು ಪಂದ್ಯಗಳಲ್ಲೂ  ಜಯ ಸಾಧಿಸಬೇಕು. ಅಂದರೆ ಆಸ್ಟ್ರೇಲಿಯಾ ವಿರುದ್ಧ ಜಯ ಸಾಧಿಸಿದರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದನ್ನು ಎದುರು ನೋಡಬಹುದು.

ಭಾರತ ತಂಡದ ಕೊನೆಯ ಎರಡು ಪಂದ್ಯಗಳ ವೇಳಾಪಟ್ಟಿ:

  • ಜೂನ್ 25: ಭಾರತ  vs ಬಾಂಗ್ಲಾದೇಶ್ (ಓಲ್ಡ್ ಟ್ರಾಫೋರ್ಡ್)
  • ಜೂನ್ 28: ಭಾರತ  vs ಆಸ್ಟ್ರೇಲಿಯಾ (ಲಾರ್ಡ್ಸ್)

ಈ ಎರಡು ಪಂದ್ಯಗಳನ್ನು ಗೆದ್ದರೆ ಟೀಮ್ ಇಂಡಿಯಾದ ಒಟ್ಟು ಅಂಕಗಳು ಎಂಟಕ್ಕೇರಲಿದೆ. ಒಂದು ವೇಳೆ ಸೌತ್ ಆಫ್ರಿಕಾ ತಂಡವು ತನ್ನ ಮುಂದಿನ ಮ್ಯಾಚ್​ನಲ್ಲಿ ಗೆದ್ದರೆ ಟೀಮ್ ಇಂಡಿಯಾ ಅವರ ಕೊನೆಯ ಪಂದ್ಯವನ್ನೂ ಕೂಡ ಎದುರು ನೋಡಬೇಕಾಗುತ್ತದೆ.

ಇದನ್ನೂ ಓದಿ: ಟೀಮ್ ಇಂಡಿಯಾದಿಂದ 6 ಆಟಗಾರರು ಔಟ್..!

ಏಕೆಂದರೆ ಜೂನ್ 29 ರಂದು ನಡೆಯಲಿರುವ ಕೊನೆಯ ಲೀಗ್​ ಪಂದ್ಯದಲ್ಲಿ ಸೌತ್ ಆಫ್ರಿಕಾ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದೆ. ಅಂದರೆ ಭಾರತ ತಂಡ ಇತ್ತ 8 ಅಂಕಗಳನ್ನು ಪಡೆದರೂ ನೆಟ್ ರನ್ ರೇಟ್​ ಮೂಲಕ ಟೀಮ್ ಇಂಡಿಯಾವನ್ನು ಹಿಂದಿಕ್ಕಲು ಸೌತ್ ಆಫ್ರಿಕಾ ತಂಡ ಕೊನೆಯ ಮ್ಯಾಚ್​ನಲ್ಲಿ ಭರ್ಜರಿ ಪ್ಲ್ಯಾನ್ ರೂಪಿಸಲಿದ್ದಾರೆ. ಅದರಂತೆ ಈ ಬಾರಿಯ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಗ್ರೂಪ್-ಎ ಯಿಂದ ಸೆಮಿಫೈನಲ್​ಗೇರುವ ತಂಡಗಳಾವುವು ಎಂದು ತಿಳಿಯಲು ಜೂನ್ 29 ರವರೆಗೆ ಕಾಯಲೇಬೇಕು.

Published On - 8:21 am, Mon, 22 June 26

Follow Us
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ