AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಹೀಗೆ ಗೆದ್ದರೆ ಮಾತ್ರ ಭಾರತ vs ಪಾಕಿಸ್ತಾನ್ ಮತ್ತೆ ಮುಖಾಮುಖಿ

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 8 ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದರೆ, 12 ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಅದರಂತೆ ಸೂಪರ್-8 ಸುತ್ತಿನಲ್ಲಿ ಭಾರತ, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಝಿಂಬಾಬ್ವೆ, ಪಾಕಿಸ್ತಾನ್, ವೆಸ್ಟ್ ಇಂಡೀಸ್, ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಕಣಕ್ಕಿಳಿಯಲಿವೆ.

IND vs PAK: ಹೀಗೆ ಗೆದ್ದರೆ ಮಾತ್ರ ಭಾರತ vs ಪಾಕಿಸ್ತಾನ್ ಮತ್ತೆ ಮುಖಾಮುಖಿ
Ind Vs Pak
ಝಾಹಿರ್ ಯೂಸುಫ್
|

Updated on:Feb 19, 2026 | 10:37 AM

Share

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನಿಂದ 8 ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಈ ಎಂಟು ತಂಡಗಳಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳಿರುವುದು ವಿಶೇಷ. ಅಂದರೆ ಗ್ರೂಪ್-ಎ ಯಿಂದ ಉಭಯ ತಂಡಗಳು ಸೂಪರ್-8 ಸುತ್ತಿಗೆ ಪ್ರವೇಶಿಸಿದೆ. ಇದಾಗ್ಯೂ ಸೂಪರ್-8 ಸುತ್ತಿನಲ್ಲಿ ಭಾರತ ಮತ್ತು ಪಾಕ್ ಮುಖಾಮುಖಿಯಾಗುವುದಿಲ್ಲ.

ಏಕೆಂದರೆ ಉಭಯ ತಂಡಗಳು ಬೇರೆ ಬೇರೆ ಗ್ರೂಪ್​ಗಳಲ್ಲಿ ಸ್ಥಾನ ಪಡೆದಿದೆ. ಅಂದರೆ ಸೂಪರ್-8 ಸುತ್ತಿನಲ್ಲಿ ಎಂಟು ತಂಡಗಳನ್ನು 2 ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಆ ಗ್ರೂಪ್​ಗಳಲ್ಲಿರುವ ತಂಡಗಳು…

  • ಗ್ರೂಪ್ 1: ಭಾರತ, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ.
  • ಗ್ರೂಪ್ 2: ಇಂಗ್ಲೆಂಡ್, ನ್ಯೂಝಿಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ.

ಸೂಪರ್-8 ಪಂದ್ಯಗಳು ನಡೆಯುವುದು ಗ್ರೂಪ್​ಗಳಲ್ಲಿರುವ ತಂಡಗಳ ನಡುವೆ. ಅಂದರೆ ಭಾರತ ತಂಡವು ತನ್ನ ಗ್ರೂಪ್​ನಲ್ಲಿರುವ ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ವಿರುದ್ಧ ತಲಾ ಒಂದೊಂದು ಪಂದ್ಯಗಳನ್ನಾಡಲಿದೆ.

ಅತ್ತ ಗ್ರೂಪ್-2 ನಲ್ಲಿರುವ ಪಾಕಿಸ್ತಾನ್ ತಂಡವು ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಶ್ರೀಲಂಕಾ ತಂಡಗಳನ್ನು ಎದುರಿಸಲಿದೆ. ಹೀಗಾಗಿ ಸೂಪರ್-8 ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ್​ ಮುಖಾಮುಖಿಗೆ ಯಾವುದೇ ಅವಕಾಶವಿಲ್ಲ. ಇದಾಗ್ಯೂ ಮುಂದಿನ ಹಂತಗಳಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಎದುರಾಗಬಹುದು.

ನಾಕೌಟ್​ನಲ್ಲಿ ಮುಖಾಮುಖಿ:

ಸೂಪರ್-8 ಸುತ್ತಿನಲ್ಲಿ ಎರಡು ಗ್ರೂಪ್​ಗಳಿಗೂ ಪ್ರತ್ಯೇಕ ಪಾಯಿಂಟ್ಸ್ ಟೇಬಲ್​ ಇರಲಿದೆ. ಈ ಅಂಕ ಪಟ್ಟಿಗಳಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಟಾಪ್-2 ನಲ್ಲಿ ಕಾಣಿಸಿಕೊಂಡರೆ ಮಾತ್ರ ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಅದರಂತೆ ಉಭಯ ತಂಡಗಳು ಸೆಮಿಫೈನಲ್​ನಲ್ಲಿ ಮುಖಾಮುಖಿಯಾಗಬಹುದು.

ಆದರೆ ಇಲ್ಲಿ ಸೆಮಿಫೈನಲ್​ನಲ್ಲಿ ಮುಖಾಮುಖಿಯಾಗಬೇಕಿದ್ದರೆ ಪಾಯಿಂಟ್ಸ್ ಟೇಬಲ್​ನಲ್ಲಿ ಉಭಯ ತಂಡಗಳ ಸ್ಥಾನಗಳು ಬದಲಾಗಬೇಕು. ಅದರ ವಿವರಗಳು ಈ ಕೆಳಗಿನಂತಿದೆ…

  •  ಸೂಪರ್-8 ಸುತ್ತಿನಲ್ಲಿ ಗ್ರೂಪ್-1 ರ ಅಂಕ ಪಟ್ಟಿಯಲ್ಲಿ ಭಾರತ ತಂಡವು ಮೊದಲ ಸ್ಥಾನ ಪಡೆದರೆ, ಗ್ರೂಪ್-2 ಅಂಕ ಪಟ್ಟಿಯಲ್ಲಿ ಪಾಕಿಸ್ತಾನ್ ದ್ವಿತೀಯ ಸ್ಥಾನ ಪಡೆಯಬೇಕು. ಹೀಗಾದಲ್ಲಿ ಮಾತ್ರ ಉಭಯ ತಂಡಗಳು ಸೆಮಿಫೈನಲ್​ನಲ್ಲಿ ಮುಖಾಮುಖಿಯಾಗಲಿದೆ.
  • ಸೂಪರ್-8 ಸುತ್ತಿನಲ್ಲಿ ಗ್ರೂಪ್-2ರ ಪಾಯಿಂಟ್ಸ್​​ ಟೇಬಲ್​ನಲ್ಲಿ ಪಾಕಿಸ್ತಾನ್ ತಂಡ ಮೊದಲ ಸ್ಥಾನ ಪಡೆದರೆ, ಗ್ರೂಪ್-2 ಅಂಕ ಪಟ್ಟಿಯಲ್ಲಿ ಭಾರತ ದ್ವಿತೀಯ ಸ್ಥಾನ ಪಡೆದರೂ ಸಹ ಉಭಯ ತಂಡಗಳು ಸೆಮಿಫೈನಲ್​ನಲ್ಲಿ ಎದುರು ಬದುರಾಗಲಿದೆ.

ಫೈನಲ್​ನಲ್ಲಿ ಮುಖಾಮುಖಿ:

ಭಾರತ ಮತ್ತು ಪಾಕಿಸ್ತಾನ್ ಸೂಪರ್-8 ಸುತ್ತಿನ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಗಳನ್ನು ಅಥವಾ ಎರಡನೇ ಸ್ಥಾನಗಳನ್ನು ಪಡೆದರೆ ಸೆಮಿಫೈನಲ್​ನಲ್ಲಿ ಮುಖಾಮುಖಿಯಾಗಲು ಸಾಧ್ಯವಿಲ್ಲ. ಇದಾಗ್ಯೂ ಉಭಯ ತಂಡಗಳು ಸೆಮಿಫೈನಲ್​ನಲ್ಲಿ ಗೆದ್ದರೆ ಫೈನಲ್​ನಲ್ಲಿ ಮುಖಾಮುಖಿಯಾಗಲಿದೆ.

ಇದನ್ನೂ ಓದಿ: T20 World Cup 2026: ಸೂಪರ್-8 ಸುತ್ತಿನ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಅಂದರೆ ಉಭಯ ತಂಡಗಳು ಸೂಪರ್-8 ಸುತ್ತಿನ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದರೆ ಅಥವಾ ದ್ವಿತೀಯ ಸ್ಥಾನಗಳನ್ನು ಪಡೆದುಕೊಂಡರೆ ಸೆಮಿಫೈನಲ್​ನಲ್ಲಿ ಬೇರೆ ತಂಡಗಳ ವಿರುದ್ಧ ಸೆಣಸಲಿದೆ. ಈ ಪಂದ್ಯಗಳಲ್ಲಿ ಜಯ ಸಾಧಿಸಿ ಭಾರತ ಮತ್ತು ಪಾಕಿಸ್ತಾನ್ ಫೈನಲ್​ಗೇರಿದರೆ ಮಾತ್ರ ಮತ್ತೊಮ್ಮೆ ಇಂಡೊ-ಪಾಕ್ ಕ್ರಿಕೆಟ್ ಕದನ ವೀಕ್ಷಿಸುವ ಅವಕಾಶ ಪ್ರೇಕ್ಷಕರಿಗೆ ದೊರೆಯಲಿದೆ.

Published On - 10:31 am, Thu, 19 February 26

Follow Us
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ