AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಸೆಮಿ ಫೈನಲ್​ಗೇರಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು? ಇಲ್ಲಿದೆ ಮಾಹಿತಿ

ICC World Cup 2023: ಈ ಬಾರಿಯ ವಿಶ್ವಕಪ್ ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯುತ್ತಿದೆ. ಇಲ್ಲಿ ಪ್ರತಿ ತಂಡಗಳು 9 ಪಂದ್ಯಗಳನ್ನಾಡಲಿದೆ. ಹೀಗಾಗಿ ನೇರವಾಗಿ ಸೆಮಿಫೈನಲ್​ಗೇರುವುದನ್ನು ಖಚಿತಪಡಿಸಿಕೊಳ್ಳಲು 7 ಪಂದ್ಯಗಳನ್ನು ಗೆಲ್ಲಲೇಬೇಕು.

ಟೀಮ್ ಇಂಡಿಯಾ ಸೆಮಿ ಫೈನಲ್​ಗೇರಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು? ಇಲ್ಲಿದೆ ಮಾಹಿತಿ
Team India
TV9 Web
| Edited By: |

Updated on:Oct 29, 2023 | 10:47 PM

Share

ಏಕದಿನ ವಿಶ್ವಕಪ್​ನ 29ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಭಾರತ ತಂಡ 100 ರನ್​ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲೂ ಅಗ್ರಸ್ಥಾನ ಅಲಂಕರಿಸಿದೆ.

ಇದಾಗ್ಯೂ ಸೆಮಿಫೈನಲ್​ ಎಂಟ್ರಿಯನ್ನು ಖಚಿತಪಡಿಸಿಕೊಂಡಿಲ್ಲ. ಅಂದರೆ ಈ ಬಾರಿಯ ವಿಶ್ವಕಪ್ ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯುತ್ತಿದೆ. ಇಲ್ಲಿ ಪ್ರತಿ ತಂಡಗಳು 9 ಪಂದ್ಯಗಳನ್ನಾಡಲಿದೆ. ಹೀಗಾಗಿ ನೇರವಾಗಿ ಸೆಮಿಫೈನಲ್​ಗೇರುವುದನ್ನು ಖಚಿತಪಡಿಸಿಕೊಳ್ಳಲು 7 ಪಂದ್ಯಗಳನ್ನು ಗೆಲ್ಲಲೇಬೇಕು.

ಇತ್ತ ಟೀಮ್ ಇಂಡಿಯಾದ ಮುಂದಿನ ಎದುರಾಳಿಗಳು ಶ್ರೀಲಂಕಾ, ಸೌತ್ ಆಫ್ರಿಕಾ ಮತ್ತು ನೆದರ್​ಲೆಂಡ್ಸ್​ ತಂಡಗಳು. ಈ ಮೂರು ತಂಡಗಳೂ ಕೂಡ ಸೆಮಿಫೈನಲ್ ರೇಸ್​ನಲ್ಲಿದೆ. ಹೀಗಾಗಿ ಈ ಮೂರು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಒಂದು ಪಂದ್ಯವನ್ನು ಗೆದ್ದುಕೊಂಡರೆ ಸೆಮಿಫೈನಲ್​ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

ಅಂದರೆ 7 ಗೆಲುವುಗಳ ಮೂಲಕ ಟೀಮ್ ಇಂಡಿಯಾ 14 ಅಂಕಗಳನ್ನು ಪಡೆದರೆ ಸೆಮಿಫೈನಲ್ ಆಡುವ ನಾಲ್ಕು ತಂಡಗಳಲ್ಲಿ ಸ್ಥಾನ ಪಡೆಯುವುದು ಖಚಿತ. ಏಕೆಂದರೆ ಬಹುತೇಕ ತಂಡಗಳ 6 ಪಂದ್ಯಗಳು ಮುಗಿದಿದ್ದು, ಟೀಮ್ ಇಂಡಿಯಾವನ್ನು ಹೊರತುಪಡಿಸಿ ಯಾವುದೇ ತಂಡ 12 ಅಂಕಗಳನ್ನು ಸಂಪಾದಿಸಿಲ್ಲ.

ಇಲ್ಲಿ 6 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಸೌತ್ ಆಫ್ರಿಕಾ 10 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, 6 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ನ್ಯೂಝಿಲೆಂಡ್ 3ನೇ ಸ್ಥಾನದಲ್ಲಿದೆ. ಇನ್ನು ಆಸ್ಟ್ರೇಲಿಯಾ 6 ಪಂದ್ಯಗಳಲ್ಲಿ 4 ಜಯ ಸಾಧಿಸಿ 4ನೇ ಸ್ಥಾನದಲ್ಲಿದೆ. ಹೀಗಾಗಿ ಮುಂದಿನ ಮೂರು ಪಂದ್ಯಗಳಲ್ಲಿ ಭಾರತ ತಂಡವು ಒಂದು ಗೆಲುವು ಸಾಧಿಸಿದರೆ ಸಾಕು, ಟಾಪ್-4 ನಲ್ಲಿ ಸ್ಥಾನ ಪಡೆದು  ಸೆಮಿಫೈನಲ್ ಆಡುವುದು ಕನ್​ಫರ್ಮ್​ ಆಗಲಿದೆ.

ರೇಸ್​ನಲ್ಲಿ ಶ್ರೀಲಂಕಾ-ಅಫ್ಘಾನ್:

ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ್ ತಂಡಗಳು ಇದುವರೆಗೆ 5 ಪಂದ್ಯಗಳನ್ನು ಮಾತ್ರ ಆಡಿದೆ. ಹೀಗಾಗಿ ಈ ಎರಡು ತಂಡಗಳಲ್ಲಿ ಒಂದು ತಂಡಕ್ಕೆ ಮುಂದಿನ ಎಲ್ಲಾ ಪಂದ್ಯಗಳನ್ನು ಗೆದ್ದು 12 ಅಂಕಗಳನ್ನು ಸಂಪಾದಿಸುವ ಅವಕಾಶವಿದೆ. ಇದೇ ಕಾರಣದಿಂದಾಗಿ 6 ಪಂದ್ಯ ಗೆದ್ದರೂ ಟೀಮ್ ಇಂಡಿಯಾ ಸೆಮಿಫೈನಲ್ ಸ್ಥಾನ​ ಕನ್​ಫರ್ಮ್ ಆಗಿಲ್ಲ. ಒಂದು ವೇಳೆ ಅಫ್ಘಾನಿಸ್ತಾನ್ ಹಾಗೂ ಶ್ರೀಲಂಕಾ ತಂಡಗಳು ಮುಂದಿನ 4 ಪಂದ್ಯಗಳಲ್ಲಿ ಒಂದೊಂದು ಮ್ಯಾಚ್​ಗಳನ್ನು ಸೋತರೆ ಭಾರತ ತಂಡ ಸೆಮಿಫೈನಲ್ ​ ಆಡುವುದು ಖಚಿತವಾಗಲಿದೆ.

ಭಾರತ ತಂಡ ಮುಂದಿನ ಪಂದ್ಯಗಳ ವೇಳಾಪಟ್ಟಿ:

  • ನವೆಂಬರ್ 2: ಭಾರತ vs ಶ್ರೀಲಂಕಾ (ಮುಂಬೈ)
  • ನವೆಂಬರ್ 5: ಭಾರತ vs  ಸೌತ್ ಆಫ್ರಿಕಾ (ಕೊಲ್ಕತ್ತಾ)
  • ನವೆಂಬರ್ 12: ಭಾರತ vs ನೆದರ್​ಲೆಂಡ್ಸ್​ (ಬೆಂಗಳೂರು)

ಇದನ್ನೂ ಓದಿ: Virat Kohli: ಒಂದೇ ಒಂದು ರನ್ ​ಗಳಿಸದೇ ದಾಖಲೆ ಬರೆದ ವಿರಾಟ್ ಕೊಹ್ಲಿ..!

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

Published On - 10:03 pm, Sun, 29 October 23

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ