Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಸೆಮಿ ಫೈನಲ್​ಗೇರಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು? ಇಲ್ಲಿದೆ ಮಾಹಿತಿ

ICC World Cup 2023: ಈ ಬಾರಿಯ ವಿಶ್ವಕಪ್ ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯುತ್ತಿದೆ. ಇಲ್ಲಿ ಪ್ರತಿ ತಂಡಗಳು 9 ಪಂದ್ಯಗಳನ್ನಾಡಲಿದೆ. ಹೀಗಾಗಿ ನೇರವಾಗಿ ಸೆಮಿಫೈನಲ್​ಗೇರುವುದನ್ನು ಖಚಿತಪಡಿಸಿಕೊಳ್ಳಲು 7 ಪಂದ್ಯಗಳನ್ನು ಗೆಲ್ಲಲೇಬೇಕು.

ಟೀಮ್ ಇಂಡಿಯಾ ಸೆಮಿ ಫೈನಲ್​ಗೇರಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು? ಇಲ್ಲಿದೆ ಮಾಹಿತಿ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Oct 29, 2023 | 10:47 PM

ಏಕದಿನ ವಿಶ್ವಕಪ್​ನ 29ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಭಾರತ ತಂಡ 100 ರನ್​ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲೂ ಅಗ್ರಸ್ಥಾನ ಅಲಂಕರಿಸಿದೆ.

ಇದಾಗ್ಯೂ ಸೆಮಿಫೈನಲ್​ ಎಂಟ್ರಿಯನ್ನು ಖಚಿತಪಡಿಸಿಕೊಂಡಿಲ್ಲ. ಅಂದರೆ ಈ ಬಾರಿಯ ವಿಶ್ವಕಪ್ ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯುತ್ತಿದೆ. ಇಲ್ಲಿ ಪ್ರತಿ ತಂಡಗಳು 9 ಪಂದ್ಯಗಳನ್ನಾಡಲಿದೆ. ಹೀಗಾಗಿ ನೇರವಾಗಿ ಸೆಮಿಫೈನಲ್​ಗೇರುವುದನ್ನು ಖಚಿತಪಡಿಸಿಕೊಳ್ಳಲು 7 ಪಂದ್ಯಗಳನ್ನು ಗೆಲ್ಲಲೇಬೇಕು.

ಇತ್ತ ಟೀಮ್ ಇಂಡಿಯಾದ ಮುಂದಿನ ಎದುರಾಳಿಗಳು ಶ್ರೀಲಂಕಾ, ಸೌತ್ ಆಫ್ರಿಕಾ ಮತ್ತು ನೆದರ್​ಲೆಂಡ್ಸ್​ ತಂಡಗಳು. ಈ ಮೂರು ತಂಡಗಳೂ ಕೂಡ ಸೆಮಿಫೈನಲ್ ರೇಸ್​ನಲ್ಲಿದೆ. ಹೀಗಾಗಿ ಈ ಮೂರು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಒಂದು ಪಂದ್ಯವನ್ನು ಗೆದ್ದುಕೊಂಡರೆ ಸೆಮಿಫೈನಲ್​ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

ಅಂದರೆ 7 ಗೆಲುವುಗಳ ಮೂಲಕ ಟೀಮ್ ಇಂಡಿಯಾ 14 ಅಂಕಗಳನ್ನು ಪಡೆದರೆ ಸೆಮಿಫೈನಲ್ ಆಡುವ ನಾಲ್ಕು ತಂಡಗಳಲ್ಲಿ ಸ್ಥಾನ ಪಡೆಯುವುದು ಖಚಿತ. ಏಕೆಂದರೆ ಬಹುತೇಕ ತಂಡಗಳ 6 ಪಂದ್ಯಗಳು ಮುಗಿದಿದ್ದು, ಟೀಮ್ ಇಂಡಿಯಾವನ್ನು ಹೊರತುಪಡಿಸಿ ಯಾವುದೇ ತಂಡ 12 ಅಂಕಗಳನ್ನು ಸಂಪಾದಿಸಿಲ್ಲ.

ಇಲ್ಲಿ 6 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಸೌತ್ ಆಫ್ರಿಕಾ 10 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, 6 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ನ್ಯೂಝಿಲೆಂಡ್ 3ನೇ ಸ್ಥಾನದಲ್ಲಿದೆ. ಇನ್ನು ಆಸ್ಟ್ರೇಲಿಯಾ 6 ಪಂದ್ಯಗಳಲ್ಲಿ 4 ಜಯ ಸಾಧಿಸಿ 4ನೇ ಸ್ಥಾನದಲ್ಲಿದೆ. ಹೀಗಾಗಿ ಮುಂದಿನ ಮೂರು ಪಂದ್ಯಗಳಲ್ಲಿ ಭಾರತ ತಂಡವು ಒಂದು ಗೆಲುವು ಸಾಧಿಸಿದರೆ ಸಾಕು, ಟಾಪ್-4 ನಲ್ಲಿ ಸ್ಥಾನ ಪಡೆದು  ಸೆಮಿಫೈನಲ್ ಆಡುವುದು ಕನ್​ಫರ್ಮ್​ ಆಗಲಿದೆ.

ರೇಸ್​ನಲ್ಲಿ ಶ್ರೀಲಂಕಾ-ಅಫ್ಘಾನ್:

ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ್ ತಂಡಗಳು ಇದುವರೆಗೆ 5 ಪಂದ್ಯಗಳನ್ನು ಮಾತ್ರ ಆಡಿದೆ. ಹೀಗಾಗಿ ಈ ಎರಡು ತಂಡಗಳಲ್ಲಿ ಒಂದು ತಂಡಕ್ಕೆ ಮುಂದಿನ ಎಲ್ಲಾ ಪಂದ್ಯಗಳನ್ನು ಗೆದ್ದು 12 ಅಂಕಗಳನ್ನು ಸಂಪಾದಿಸುವ ಅವಕಾಶವಿದೆ. ಇದೇ ಕಾರಣದಿಂದಾಗಿ 6 ಪಂದ್ಯ ಗೆದ್ದರೂ ಟೀಮ್ ಇಂಡಿಯಾ ಸೆಮಿಫೈನಲ್ ಸ್ಥಾನ​ ಕನ್​ಫರ್ಮ್ ಆಗಿಲ್ಲ. ಒಂದು ವೇಳೆ ಅಫ್ಘಾನಿಸ್ತಾನ್ ಹಾಗೂ ಶ್ರೀಲಂಕಾ ತಂಡಗಳು ಮುಂದಿನ 4 ಪಂದ್ಯಗಳಲ್ಲಿ ಒಂದೊಂದು ಮ್ಯಾಚ್​ಗಳನ್ನು ಸೋತರೆ ಭಾರತ ತಂಡ ಸೆಮಿಫೈನಲ್ ​ ಆಡುವುದು ಖಚಿತವಾಗಲಿದೆ.

ಭಾರತ ತಂಡ ಮುಂದಿನ ಪಂದ್ಯಗಳ ವೇಳಾಪಟ್ಟಿ:

  • ನವೆಂಬರ್ 2: ಭಾರತ vs ಶ್ರೀಲಂಕಾ (ಮುಂಬೈ)
  • ನವೆಂಬರ್ 5: ಭಾರತ vs  ಸೌತ್ ಆಫ್ರಿಕಾ (ಕೊಲ್ಕತ್ತಾ)
  • ನವೆಂಬರ್ 12: ಭಾರತ vs ನೆದರ್​ಲೆಂಡ್ಸ್​ (ಬೆಂಗಳೂರು)

ಇದನ್ನೂ ಓದಿ: Virat Kohli: ಒಂದೇ ಒಂದು ರನ್ ​ಗಳಿಸದೇ ದಾಖಲೆ ಬರೆದ ವಿರಾಟ್ ಕೊಹ್ಲಿ..!

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

Published On - 10:03 pm, Sun, 29 October 23

ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ