AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಕೃಪಾಕಟಾಕ್ಷ ದೊರೆತರಷ್ಟೇ ಪಾಕ್ ತಂಡಕ್ಕೆ ಏಷ್ಯಾಕಪ್ ಫೈನಲ್ ಟಿಕೆಟ್..!

Asia Cup 2023: ವಾಸ್ತವವಾಗಿ ಟೀಂ ಇಂಡಿಯಾ ಎದುರು 228 ರನ್​ಗಳ ಬೃಹತ್ ಸೋಲು ಅನುಭವಿಸಿರುವ ಪಾಕಿಸ್ತಾನ ಏಷ್ಯಾಕಪ್ ಸೂಪರ್ 4 ಸುತ್ತಿನ ಪಾಯಿಂಟ್​ ಪಟ್ಟಿಯಲ್ಲಿ ಮೊದಲ ಸ್ಥಾನದಿಂದ 3ನೇ ಸ್ಥಾನಕ್ಕೆ ಕುಸಿದಿದೆ. ಅಲ್ಲದೆ ತಂಡದ ನೆಟ್​ ರನ್​ರೇಟ್​ ಕೂಡ ಮೈನಸ್ -1.892 ಕ್ಕೆ ಇಳಿದಿದೆ.

ಭಾರತದ ಕೃಪಾಕಟಾಕ್ಷ ದೊರೆತರಷ್ಟೇ ಪಾಕ್ ತಂಡಕ್ಕೆ ಏಷ್ಯಾಕಪ್ ಫೈನಲ್ ಟಿಕೆಟ್..!
ಭಾರತ- ಪಾಕಿಸ್ತಾನ
ಪೃಥ್ವಿಶಂಕರ
|

Updated on:Sep 12, 2023 | 8:41 AM

Share

ಭಾರತದೆದುರಿನ ಏಕೈಕ ಸೋಲು ಪಾಕಿಸ್ತಾನ (India vs Pakistan) ತಂಡದ ಲೆಕ್ಕಾಚಾರವನ್ನು ಸಂಪೂರ್ಣ ಬುಡಮೇಲು ಮಾಡಿದೆ. ರೋಹಿತ್ (Rohit Sharma) ಪಡೆಯ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಯಿಂಟ್ ಟೇಬಲ್ ಸೇರಿದಂತೆ ಪ್ರದರ್ಶನದಲ್ಲೂ ಅಗ್ರಸ್ಥಾನವನ್ನು ಕಾಪಾಡಿಕೊಂಡಿದ್ದ ಬಾಬರ್ ಪಡೆ, ಟೀಂ ಇಂಡಿಯಾ (Team India) ನೀಡಿದ ಒಂದೇ ಒಂದು ಸೋಲಿನ ಶಾಕ್​ಗೆ ಚೇತರಿಸಿಕೊಳ್ಳಲಾಗದಷ್ಟು ಹಿನ್ನಡೆ ಅನುಭವಿಸಿದೆ. ವಾಸ್ತವವಾಗಿ ಟೀಂ ಇಂಡಿಯಾ ಎದುರು 228 ರನ್​ಗಳ ಬೃಹತ್ ಸೋಲು ಅನುಭವಿಸಿರುವ ಪಾಕಿಸ್ತಾನ ಏಷ್ಯಾಕಪ್ (Asia Cup 2023) ಸೂಪರ್ 4 ಸುತ್ತಿನ ಪಾಯಿಂಟ್​ ಪಟ್ಟಿಯಲ್ಲಿ ಮೊದಲ ಸ್ಥಾನದಿಂದ 3ನೇ ಸ್ಥಾನಕ್ಕೆ ಕುಸಿದಿದೆ. ಅಲ್ಲದೆ ತಂಡದ ನೆಟ್​ ರನ್​ರೇಟ್​ ಕೂಡ ಮೈನಸ್ -1.892 ಕ್ಕೆ ಇಳಿದಿದೆ. ಇದು ಪಾಕ್ ಪಡೆಯ ಫೈನಲ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದೆ. ಹೀಗಾಗಿ ಪಾಕಿಸ್ತಾನ ತಂಡ ಈ ಕಾಂಟಿನೆಂಟಲ್ ಈವೆಂಟ್​ನ ಫೈನಲ್ ಸುತ್ತಿಗೆ ಪ್ರವೇಶ ಪಡೆಯಬೇಕೆಂದರೆ ಭಾರತದ ಕೃಪಾಕಟಾಕ್ಷ ದೊರೆಯಲೇಬೇಕಾಗಿದೆ.

ಈ ಉಭಯ ತಂಡಗಳ ಕದನದ ಬಳಿಕ ಏಷ್ಯಾಕಪ್ ಸೂಪರ್ 4 ಸುತ್ತಿನ ಪಾಯಿಂಟ್ ಪಟ್ಟಿಯಲ್ಲಿ ಭಾರಿ ಬದಲಾವಣೆ ಕಂಡು ಬಂದಿದೆ. ಈ ಮೊದಲು ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಭಾರತ, ಏಕೈಕ ಗೆಲುವಿನೊಂದಿಗೆ ಮೊದಲ ಸ್ಥಾನವನ್ನು ಆಕ್ರಮಿಸಿಕೊಂಡಿದೆ. ಇತ್ತ ಮೊದಲ ಸ್ಥಾನದಲ್ಲಿದ್ದ ಪಾಕಿಸ್ತಾನ ಏಕಾಏಕಿ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ. ಪಾಕ್ ವಿರುದ್ಧ 228 ರನ್​ಗಳ ಬೃಹತ್ ಜಯ ಸಾಧಿಸಿದ ಭಾರತ +4.560 ನೆಟ್​ ರನ್​ರೇಟ್​ನೊಂದಿಗೆ ಪಾಯಿಂಟ್​ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಭಾರತದೆದುರು ಹೀನಾಯ ಸೋಲು ಅನುಭವಿಸಿದ ಪಾಕಿಸ್ತಾನ -1.892 ನೆಟ್​ ರನ್​ರೇಟ್​ನೊಂದಿಗೆ ಮೂರನೇ ಸ್ಥಾನಕ್ಕೆ ಜಾರಿದೆ. ಇನ್ನು ಎರಡನೇ ಸ್ಥಾನದಲ್ಲಿಯೇ ಮುಂದುವರೆದಿರುವ ಶ್ರೀಲಂಕಾ +0.420ನೆಟ್ ರನ್​ರೇಟ್ ಹೊಂದಿದೆ.

228 ರನ್‌ಗಳ ದಾಖಲೆಯ ಗೆಲುವಿನೊಂದಿಗೆ ಅಗ್ರಸ್ಥಾನಕ್ಕೇರಿದ ಭಾರತ! ಮೂರನೇ ಸ್ಥಾನಕ್ಕೆ ಜಾರಿದ ಪಾಕ್

ಪಾಯಿಂಟ್ ಪಟ್ಟಿ ಹೇಗಿದೆ?

ಮಂಗಳವಾರ ನಡೆಯಲಿರುವ ತನ್ನ ಎರಡನೇ ಸೂಪರ್ 4 ಪಂದ್ಯದಲ್ಲಿ ಭಾರತ ಹಾಲಿ ಏಷ್ಯಾಕಪ್ ಚಾಂಪಿಯನ್ ಶ್ರೀಲಂಕಾವನ್ನು ಎದುರಿಸಲಿದೆ. ಪಂದ್ಯಾವಳಿಯ ಸೂಪರ್ 4 ಹಂತದಲ್ಲಿ ಭಾರತವನ್ನು ಎದುರಿಸುವ ಮೊದಲು ಬಾಬರ್‌ ಪಡೆ ಬಾಂಗ್ಲಾದೇಶ ತಂಡವನ್ನು ಮಣಿಸಿತ್ತು. ಈ ಮೂಲಕ 2 ಅಂಕಗಳನ್ನು ಬುಟ್ಟಿಗೆ ಹಾಕಿಕೊಂಡಿತ್ತು. ಇದೀಗ ಈ ಸುತ್ತಿನಲ್ಲಿ ಪಾಕ್ ತಂಡಕ್ಕೆ ಕೇವಲ ಒಂದು ಪಂದ್ಯ ಮಾತ್ರ ಬಾಕಿ ಉಳಿದಿದ್ದು, ಗ್ರೀನ್ ಆರ್ಮಿ ತನ್ನ ಅಂತಿಮ ಸೂಪರ್ 4 ಪಂದ್ಯದಲ್ಲಿ ಶ್ರೀಲಂಕಾವನ್ನು ಎದುರಿಸಲಿದೆ. ಪಾಕಿಸ್ತಾನವು ಸೂಪರ್ 4 ಅಂಕಪಟ್ಟಿಯಲ್ಲಿ ಶ್ರೀಲಂಕಾಕ್ಕಿಂತ ಹಿಂದಿದ್ದು, ಬಾಂಗ್ಲಾದೇಶ ಕೊನೆಯ ಸ್ಥಾನ ಪಡೆಯುವುದರೊಂದಿಗೆ ಫೈನಲ್‌ ರೇಸ್​ನಿಂದ ಈಗಾಗಲೇ ಹೊರಗುಳಿದಿದೆ.

ಪಾಕ್ ಫೈನಲ್ ತಲುಪಲು ಏನು ಮಾಡಬೇಕು?

ಸೂಪರ್ 4 ಪಾಯಿಂಟ್‌ಗಳ ಪಟ್ಟಿಯಲ್ಲಿರುವಂತೆ, ಶ್ರೀಲಂಕಾ (+0.420) ಪಾಕಿಸ್ತಾನಕ್ಕಿಂತ (-1.892) ಉತ್ತಮ ನಿವ್ವಳ ರನ್ ರೇಟ್ ಅನ್ನು ಹೊಂದಿದೆ. ಹೀಗಾಗಿ ಅರ್ಹತಾ ರೇಸ್‌ನಲ್ಲಿ ಜೀವಂತವಾಗಿರಲು ಪಾಕಿಸ್ತಾನ ತನ್ನ ಅಂತಿಮ ಸೂಪರ್ 4 ಪಂದ್ಯದಲ್ಲಿ ಶ್ರೀಲಂಕಾವನ್ನು ಸೋಲಿಸಲೇಬೇಕಾಗಿದೆ. ಹಾಗೆಯೇ ಟೀಂ ಇಂಡಿಯಾ ತನ್ನ ಉಳಿದ ಎರಡು ಸೂಪರ್ ಪಂದ್ಯಗಳನ್ನು (ಶ್ರೀಲಂಕಾ ಮತ್ತು ಬಾಂಗ್ಲಾದೇಶ ವಿರುದ್ಧ) ಗೆದ್ದರೆ, ಸುಲಭವಾಗಿ ಫೈನಲ್‌ ಪ್ರವೇಶಿಸಲಿದೆ.

ಭಾರತದ ಕೈಲಿದ ಪಾಕಿಸ್ತಾನದ ಭವಿಷ್ಯ

ಒಂದು ವೇಳೆ ಶ್ರೀಲಂಕಾ ಸೂಪರ್ 4 ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನದ ವಿರುದ್ಧ ಮೇಲುಗೈ ಸಾಧಿಸಿದರೆ ಅಂದರೆ, ಗೆಲುವು ಸಾಧಿಸಿದರೆ ಹಾಲಿ ಚಾಂಪಿಯನ್‌ಗಳು ಏಷ್ಯಾಕಪ್ ಫೈನಲ್‌ಗೆ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದ್ದಾರೆ. ಹೀಗಾಗಿ ಬಾಬರ್ ಪಡೆ ಫೈನಲ್ ತಲುಪಬೇಕೆಂದರೆ ಭಾರತವು ಬಾಂಗ್ಲಾದೇಶದ ಎದುರು ಸೋಲನ್ನು ಅನುಭವಿಸಿದರೆ ಮಾತ್ರ ಅವರಿಗೊಂದು ಅವಕಾಶವಿರಲ್ಲಿದೆ. ಇದರ ಹೊರತಾಗಿ ಮಂಗಳವಾರ ನಡೆಯುವ ಭಾರತ ಮತ್ತು ಶ್ರೀಲಂಕಾ ನಡುವಿನ ಪಂದ್ಯದಲ್ಲಿ ಶ್ರೀಲಂಕಾ ತಂಡ ಭಾರತದೆದುರು ಸೋತರೆ ಪಾಕಿಸ್ತಾನಕ್ಕೆ ಫೈನಲ್‌ಗೆ ಅರ್ಹತೆ ಪಡೆಯುವ ಅವಕಾಶ ಸಿಗಲಿದೆ. ಆದರೆ ಶ್ರೀಲಂಕಾ ವಿರುದ್ಧದ ಮತ್ತೊಂದು ಪಂದ್ಯದಲ್ಲಿ ಪಾಕಿಸ್ತಾನ ಗೆಲುವು ಸಾಧಿಸುವುದು ಕೂಡ ಅಗತ್ಯವಾಗಿರಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:39 am, Tue, 12 September 23

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್