AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಸರಣಿಯಲ್ಲಿ 175 ರನ್; ಆಕಸ್ಮಿಕವಾಗಿ ಅವಕಾಶ ಪಡೆದು ಅಬ್ಬರಿಸಿದ ಅಯ್ಯರ್

Shreyas Iyer's ODI Success: ವಿರಾಟ್ ಕೊಹ್ಲಿ ಗಾಯಗೊಂಡ ಕಾರಣದಿಂದಾಗಿ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದ ಶ್ರೇಯಸ್ ಅಯ್ಯರ್, ಇಡೀ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸರಣಿಯಲ್ಲಿ 175 ರನ್ ಗಳಿಸಿ 87.50ರ ಸರಾಸರಿ ಹಾಗೂ 122 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್ ಕಾಯ್ದುಕೊಂಡಿದ್ದಾರೆ. ವಿಶೇಷವಾಗಿ 4ನೇ ಕ್ರಮಾಂಕದಲ್ಲಿ ಅವರ ಬ್ಯಾಟಿಂಗ್ ಅದ್ಭುತವಾಗಿದೆ.

IND vs ENG: ಸರಣಿಯಲ್ಲಿ 175 ರನ್; ಆಕಸ್ಮಿಕವಾಗಿ ಅವಕಾಶ ಪಡೆದು ಅಬ್ಬರಿಸಿದ ಅಯ್ಯರ್
Shreyas Iyer
ಪೃಥ್ವಿಶಂಕರ
|

Updated on:Feb 12, 2025 | 6:30 PM

Share

ಆಕಸ್ಮಿಕವಾಗಿ ಭಾರತ ಏಕದಿನ ತಂಡದಲ್ಲಿ ಅವಕಾಶ ಪಡೆದಿದ್ದ ಶ್ರೇಯಸ್ ಅಯ್ಯರ್, ಇದೀಗ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ವಿರಾಟ್ ಕೊಹ್ಲಿ ಇಂಜುರಿಗೊಂಡ ಕಾರಣದಿಂದಾಗಿ ಮೊದಲ ಏಕದಿನ ಪಂದ್ಯದಲ್ಲಿ ಆಡುವ ಅವಕಾಶ ಪಡೆದ ಶ್ರೇಯಸ್ ಮೊದಲ ಪಂದ್ಯದಲ್ಲೇ ಅರ್ಧಶತಕದ ಇನ್ನಿಂಗ್ಸ್ ಆಡಿ ಮಧ್ಯಮ ಕ್ರಮಾಂಕದಲ್ಲಿ ತಾನು ಎಂತಹ ಬ್ಯಾಟ್ಸ್‌ಮನ್ ಎಂಬುದನ್ನು ಮತ್ತೊಮ್ಮೆ ಸಾಭಿತುಪಡಿಸಿದ್ದರು. ಹೀಗಾಗಿ ಅಯ್ಯರ್​ಗೆ ಉಳಿದೆರಡು ಪಂದ್ಯಗಳಲ್ಲೂ ಆಡುವ ಅವಕಾಶ ಲಭಿಸಿತು. ಈ ಎರಡೂ ಪಂದ್ಯಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಅಯ್ಯರ್ ಇದೀಗ ಮೂರನೇ ಏಕದಿನ ಪಂದ್ಯದಲ್ಲಿ 64 ಎಸೆತಗಳನ್ನು ಎದುರಿಸಿದ ಅಯ್ಯರ್ 2 ಸಿಕ್ಸರ್ ಮತ್ತು 8 ಬೌಂಡರಿಗಳ ಸಹಾಯದಿಂದ 78 ರನ್ ಕಲೆಹಾಕಿದ್ದಾರೆ.

ಸರಣಿಯಲ್ಲಿ 175 ರನ್

ಅಹಮದಾಬಾದ್‌ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಅರ್ಧಶತಕ ಗಳಿಸಿ, ಏಕದಿನ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಸರಣಿಯಲ್ಲಿ 87.50 ಸರಾಸರಿಯಲ್ಲಿ 175 ರನ್ ಕಲೆಹಾಕಿರುವ ಅಯ್ಯರ್ ಅವರ ಸ್ಟ್ರೈಕ್ ರೇಟ್ 122 ಕ್ಕಿಂತ ಹೆಚ್ಚಾಗಿದೆ. ದೊಡ್ಡ ವಿಷಯವೆಂದರೆ ಅಯ್ಯರ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಈ ಸ್ಟ್ರೈಕ್ ರೇಟ್ ಅನ್ನು ಕಾಯ್ದುಕೊಂಡಿರುವುದು ನಿಜಕ್ಕೂ ಅದ್ಭುತವಾಗಿದೆ.

4ನೇ ಕ್ರಮಾಂಕದಲ್ಲಿ ಅತ್ಯುತ್ತಮ ಬ್ಯಾಟ್ಸ್‌ಮನ್

2019 ರ ವಿಶ್ವಕಪ್ ನಂತರ ಭಾರತ ಪರ 4 ನೇ ಕ್ರಮಾಂಕದಲ್ಲಿ ಅಮೋಘ ಪ್ರದರ್ಶನ ನೀಡಿದ ಆಟಗಾರನೆಂದರೆ ಅದು ಶ್ರೇಯಸ್ ಅಯ್ಯರ್. ಇಷ್ಟೇ ಅಲ್ಲ, 4 ನೇ ಕ್ರಮಾಂಕದಲ್ಲಿ ಉತ್ತಮ ಸರಾಸರಿ ಹೊಂದಿರುವ ಆಟಗಾರರ ಪಟ್ಟಿಯಲ್ಲಿ ಶೈ ಹೋಪ್ ನಂತರದ ಸ್ಥಾನ ಅಯ್ಯರ್​ಗೆ ಲಭಿಸಿದೆ. 2019 ರ ವಿಶ್ವಕಪ್ ನಂತರ ಅಯ್ಯರ್ 4 ನೇ ಸ್ಥಾನದಲ್ಲಿ 103.3 ರ ಅತ್ಯಧಿಕ ಸ್ಟ್ರೈಕ್ ರೇಟ್ ಹಾಗೂ 53.4 ರ ಸರಾಸರಿ 1550 ಕ್ಕೂ ಹೆಚ್ಚು ರನ್ ಕಲೆಹಾಕಿದ್ದಾರೆ. ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲೂ ಅಯ್ಯರ್ ಇದೇ ರೀತಿಯ ಪ್ರದರ್ಶನವನ್ನು ಮುಂದುವರಿಸಿ ತಂಡವನ್ನು ಚಾಂಪಿಯನ್ ಮಾಡುವಲ್ಲಿ ನೆರವಾಗಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:20 pm, Wed, 12 February 25

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ