AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಟೈಗರ್ಸ್​ಗೆ ಸೋಲುಣಿಸಿದ ಗುಲ್ಬರ್ಗ ಮಿಸ್ಟಿಕ್ಸ್

Hubli Tigers vs Gulbarga Mystics: ಕೃಷ್ಣನ್ ಶ್ರೀಜಿತ್ 38 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 65 ರನ್​ ಚಚ್ಚಿದರು. ಹಾಗೆಯೇ ನಾಯಕ ಮನೀಶ್ ಪಾಂಡೆ 32 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಅಜೇಯ 48 ರನ್ ಬಾರಿಸಿದರು.

ಹುಬ್ಬಳ್ಳಿ ಟೈಗರ್ಸ್​ಗೆ ಸೋಲುಣಿಸಿದ ಗುಲ್ಬರ್ಗ ಮಿಸ್ಟಿಕ್ಸ್
Gulbarga Mystics
TV9 Web
| Edited By: |

Updated on: Aug 23, 2023 | 5:21 PM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ 21ನೇ ಪಂದ್ಯದಲ್ಲಿ ಬಲಿಷ್ಠ ಹುಬ್ಬಳ್ಳಿ ಟೈಗರ್ಸ್​ ವಿರುದ್ಧ ಗುಲ್ಬರ್ಗ ಮಿಸ್ಟಿಕ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಲ್ಬರ್ಗ ಮಿಸ್ಟಿಕ್ಸ್ ತಂಡದ ನಾಯಕ ವಿಜಯಕುಮಾರ್ ವೈಶಾಕ್ ಬೌಲಿಂಗ್ ಆಯ್ದುಕೊಂಡರು.

ಅತ್ತ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಹುಬ್ಬಳ್ಳಿ ಟೈಗರ್ಸ್ ತಂಡವು ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕರಾದ ಲವ್ನೀತ್ ಸಿಸೋಡಿಯಾ 6 ರನ್​ಗಳಿಸಿ ಔಟಾದರೆ, ಮೊಹಮ್ಮದ್ ತಾಹ 12 ರನ್​ಗಳಿಗೆ ಇನಿಂಗ್ಸ್ ಅಂತ್ಯಗೊಳಿಸಿದರು.

ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೃಷ್ಣನ್ ಶ್ರೀಜಿತ್ 38 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 65 ರನ್​ ಚಚ್ಚಿದರು. ಹಾಗೆಯೇ ನಾಯಕ ಮನೀಶ್ ಪಾಂಡೆ 32 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಅಜೇಯ 48 ರನ್ ಬಾರಿಸಿದರು. ಪರಿಣಾಮ 20 ಓವರ್​ಗಳ ಮುಕ್ತಾಯದ ವೇಳೆ 6 ವಿಕೆಟ್ ಕಳೆದುಕೊಂಡು ಹುಬ್ಬಳ್ಳಿ ಟೈಗರ್ಸ್ 164 ರನ್​ಗಳ ಕಲೆಹಾಕಿತು.

165 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಗುಲ್ಬರ್ಗ ಮಿಸ್ಟಿಕ್ಸ್​ ತಂಡ ಆರಂಭಿಕ ವೈಫಲ್ಯಕ್ಕೆ ಒಳಗಾಯಿತು. ಎಲ್​ಆರ್ ಚೇತನ್ (12) ಹಾಗೂ ಆದರ್ಶ್ ಪ್ರಜ್ವಲ್ (14) ಬೇಗನೆ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಜೊತೆಗೂಡಿದ ಮ್ಯಾಕ್ನೀಲ್ ಹ್ಯಾಡ್ಲಿ ನೊರೊನ್ಹಾ ಹಾಗೂ ಸ್ಮರಣ್ ಅದ್ಭುತ ಜೊತೆಯಾಟವಾಡಿದರು. 38 ಎಸೆತಗಳನ್ನು ಎದುರಿಸಿದ ಸ್ಮರಣ್ 2 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 56 ರನ್​ ಬಾರಿಸಿದರು.

ಇನ್ನು ಮ್ಯಾಕ್ನೀಲ್ ಹ್ಯಾಡ್ಲಿ 50 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 65 ರನ್ ಬಾರಿಸುವ ಮೂಲಕ 18.4 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಇದರೊಂದಿಗೆ ಗುಲ್ಬರ್ಗ ಮಿಸ್ಟಿಕ್ಸ್ ತಂಡವು 7 ವಿಕೆಟ್​​ಗಳ ಜಯ ಸಾಧಿಸಿತು.

ಹುಬ್ಬಳ್ಳಿ ಟೈಗರ್ಸ್​ ಪ್ಲೇಯಿಂಗ್ 11: ಲವ್ನಿತ್ ಸಿಸೋಡಿಯಾ , ಮೊಹಮ್ಮದ್ ತಾಹ , ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್) , ಮನ್ವಂತ್ ಕುಮಾರ್ ಎಲ್ , ಮನೀಶ್ ಪಾಂಡೆ (ನಾಯಕ) , ಪ್ರವೀಣ್ ದುಬೆ , ಮಲ್ಲಿಕ್ಸಾಬ್ ಸಿರೂರ್ , ಎಂಬಿ ದರ್ಶನ್ , ಕೆಸಿ ಕಾರ್ಯಪ್ಪ, ಕ್ಲೆಮೆಂಟ್ ರಾಜಮೋಹನ್ , ವಿಧ್ವತ್ ಕಾವೇರಪ್ಪ.

ಇದನ್ನೂ ಓದಿ: RCB ಯಿಂದ ಇಬ್ಬರು, CSK ಯಿಂದ ಒಬ್ಬರು: ತಂಡದಲ್ಲಿ ಮುಂಬೈ ಅವರದ್ದೇ ದರ್ಬಾರು..!

ಗುಲ್ಬರ್ಗ ಮಿಸ್ಟಿಕ್ಸ್ ಪ್ಲೇಯಿಂಗ್ 11: ಎಲ್ ಆರ್ ಚೇತನ್ , ಮ್ಯಾಕ್ನೀಲ್ ಹ್ಯಾಡ್ಲಿ ನೊರೊನ್ಹಾ , ಅನೀಶ್ ಕೆ ವಿ , ಸ್ಮರಣ್ ಆರ್ , ಅಮಿತ್ ವರ್ಮಾ , ಅವಿನಾಶ್ ಡಿ , ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್) , ವಿಜಯ್ ಕುಮಾರ್ ವೈಶಾಕ್ (ನಾಯಕ) , ಹಾರ್ದಿಕ್ ರಾಜ್ , ಅಭಿಲಾಷ್ ಶೆಟ್ಟಿ , ಶರಣ್ ಗೌಡ.

Follow Us
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!