AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಟೈಗರ್ಸ್​ಗೆ ಸೋಲುಣಿಸಿದ ಗುಲ್ಬರ್ಗ ಮಿಸ್ಟಿಕ್ಸ್

Hubli Tigers vs Gulbarga Mystics: ಕೃಷ್ಣನ್ ಶ್ರೀಜಿತ್ 38 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 65 ರನ್​ ಚಚ್ಚಿದರು. ಹಾಗೆಯೇ ನಾಯಕ ಮನೀಶ್ ಪಾಂಡೆ 32 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಅಜೇಯ 48 ರನ್ ಬಾರಿಸಿದರು.

ಹುಬ್ಬಳ್ಳಿ ಟೈಗರ್ಸ್​ಗೆ ಸೋಲುಣಿಸಿದ ಗುಲ್ಬರ್ಗ ಮಿಸ್ಟಿಕ್ಸ್
Gulbarga Mystics
TV9 Web
| Edited By: |

Updated on: Aug 23, 2023 | 5:21 PM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ 21ನೇ ಪಂದ್ಯದಲ್ಲಿ ಬಲಿಷ್ಠ ಹುಬ್ಬಳ್ಳಿ ಟೈಗರ್ಸ್​ ವಿರುದ್ಧ ಗುಲ್ಬರ್ಗ ಮಿಸ್ಟಿಕ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಲ್ಬರ್ಗ ಮಿಸ್ಟಿಕ್ಸ್ ತಂಡದ ನಾಯಕ ವಿಜಯಕುಮಾರ್ ವೈಶಾಕ್ ಬೌಲಿಂಗ್ ಆಯ್ದುಕೊಂಡರು.

ಅತ್ತ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಹುಬ್ಬಳ್ಳಿ ಟೈಗರ್ಸ್ ತಂಡವು ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕರಾದ ಲವ್ನೀತ್ ಸಿಸೋಡಿಯಾ 6 ರನ್​ಗಳಿಸಿ ಔಟಾದರೆ, ಮೊಹಮ್ಮದ್ ತಾಹ 12 ರನ್​ಗಳಿಗೆ ಇನಿಂಗ್ಸ್ ಅಂತ್ಯಗೊಳಿಸಿದರು.

ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೃಷ್ಣನ್ ಶ್ರೀಜಿತ್ 38 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 65 ರನ್​ ಚಚ್ಚಿದರು. ಹಾಗೆಯೇ ನಾಯಕ ಮನೀಶ್ ಪಾಂಡೆ 32 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಅಜೇಯ 48 ರನ್ ಬಾರಿಸಿದರು. ಪರಿಣಾಮ 20 ಓವರ್​ಗಳ ಮುಕ್ತಾಯದ ವೇಳೆ 6 ವಿಕೆಟ್ ಕಳೆದುಕೊಂಡು ಹುಬ್ಬಳ್ಳಿ ಟೈಗರ್ಸ್ 164 ರನ್​ಗಳ ಕಲೆಹಾಕಿತು.

165 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಗುಲ್ಬರ್ಗ ಮಿಸ್ಟಿಕ್ಸ್​ ತಂಡ ಆರಂಭಿಕ ವೈಫಲ್ಯಕ್ಕೆ ಒಳಗಾಯಿತು. ಎಲ್​ಆರ್ ಚೇತನ್ (12) ಹಾಗೂ ಆದರ್ಶ್ ಪ್ರಜ್ವಲ್ (14) ಬೇಗನೆ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಜೊತೆಗೂಡಿದ ಮ್ಯಾಕ್ನೀಲ್ ಹ್ಯಾಡ್ಲಿ ನೊರೊನ್ಹಾ ಹಾಗೂ ಸ್ಮರಣ್ ಅದ್ಭುತ ಜೊತೆಯಾಟವಾಡಿದರು. 38 ಎಸೆತಗಳನ್ನು ಎದುರಿಸಿದ ಸ್ಮರಣ್ 2 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 56 ರನ್​ ಬಾರಿಸಿದರು.

ಇನ್ನು ಮ್ಯಾಕ್ನೀಲ್ ಹ್ಯಾಡ್ಲಿ 50 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 65 ರನ್ ಬಾರಿಸುವ ಮೂಲಕ 18.4 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಇದರೊಂದಿಗೆ ಗುಲ್ಬರ್ಗ ಮಿಸ್ಟಿಕ್ಸ್ ತಂಡವು 7 ವಿಕೆಟ್​​ಗಳ ಜಯ ಸಾಧಿಸಿತು.

ಹುಬ್ಬಳ್ಳಿ ಟೈಗರ್ಸ್​ ಪ್ಲೇಯಿಂಗ್ 11: ಲವ್ನಿತ್ ಸಿಸೋಡಿಯಾ , ಮೊಹಮ್ಮದ್ ತಾಹ , ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್) , ಮನ್ವಂತ್ ಕುಮಾರ್ ಎಲ್ , ಮನೀಶ್ ಪಾಂಡೆ (ನಾಯಕ) , ಪ್ರವೀಣ್ ದುಬೆ , ಮಲ್ಲಿಕ್ಸಾಬ್ ಸಿರೂರ್ , ಎಂಬಿ ದರ್ಶನ್ , ಕೆಸಿ ಕಾರ್ಯಪ್ಪ, ಕ್ಲೆಮೆಂಟ್ ರಾಜಮೋಹನ್ , ವಿಧ್ವತ್ ಕಾವೇರಪ್ಪ.

ಇದನ್ನೂ ಓದಿ: RCB ಯಿಂದ ಇಬ್ಬರು, CSK ಯಿಂದ ಒಬ್ಬರು: ತಂಡದಲ್ಲಿ ಮುಂಬೈ ಅವರದ್ದೇ ದರ್ಬಾರು..!

ಗುಲ್ಬರ್ಗ ಮಿಸ್ಟಿಕ್ಸ್ ಪ್ಲೇಯಿಂಗ್ 11: ಎಲ್ ಆರ್ ಚೇತನ್ , ಮ್ಯಾಕ್ನೀಲ್ ಹ್ಯಾಡ್ಲಿ ನೊರೊನ್ಹಾ , ಅನೀಶ್ ಕೆ ವಿ , ಸ್ಮರಣ್ ಆರ್ , ಅಮಿತ್ ವರ್ಮಾ , ಅವಿನಾಶ್ ಡಿ , ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್) , ವಿಜಯ್ ಕುಮಾರ್ ವೈಶಾಕ್ (ನಾಯಕ) , ಹಾರ್ದಿಕ್ ರಾಜ್ , ಅಭಿಲಾಷ್ ಶೆಟ್ಟಿ , ಶರಣ್ ಗೌಡ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ