AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ-ಡಿಕೆಯ ಫೋಟೋ ಬಳಸಿ ಹೆಲ್ಮೆಟ್ ಜಾಗೃತಿ ಮೂಡಿಸಿದ ಟ್ರಾಫಿಕ್ ಪೊಲೀಸ್

Rohit Sharma - Dinesh Karthik: ಹೈದರಾಬಾದ್ ಸಿಟಿ ಪೊಲೀಸ್ ಟೀಮ್ ಇಂಡಿಯಾ ಆಟಗಾರರ ಫೋಟೋಗಳನ್ನು ಬಳಸಿ ರಸ್ತೆ ಸುರಕ್ಷತೆಯ ಬಗ್ಗೆ ಮೂಡಿಸಿರುವ ಜಾಗೃತಿ ಬಗ್ಗೆ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ರೋಹಿತ್ ಶರ್ಮಾ-ಡಿಕೆಯ ಫೋಟೋ ಬಳಸಿ ಹೆಲ್ಮೆಟ್ ಜಾಗೃತಿ ಮೂಡಿಸಿದ ಟ್ರಾಫಿಕ್ ಪೊಲೀಸ್
Rohit Sharma - Dinesh Karthik
TV9 Web
| Updated By: ಝಾಹಿರ್ ಯೂಸುಫ್|

Updated on: Sep 27, 2022 | 5:55 PM

Share

ಭಾರತದಲ್ಲಿ ಕ್ರಿಕೆಟ್ ಪ್ರೇಮಿಗಳಿಗೇನು ಬರವಿಲ್ಲ. ಅದರಲ್ಲೂ ದೇಶದ ಯುವ ಸಮೂಹದ ನೆಚ್ಚಿನ ಕ್ರೀಡೆಯಾಗಿ ಕ್ರಿಕೆಟ್ ಮಾರ್ಪಟ್ಟಿದೆ. ಇಂತಹದೊಂದು ಅಚ್ಚುಮೆಚ್ಚಿನ ಕ್ರೀಡೆಯ ಸನ್ನಿವೇಶವನ್ನೇ ಬಳಸಿ ಜನರಿಗೆ ಜಾಗೃತಿ ಮೂಡಿಸಿದರೆ ಬೇಗನೆ ತಲುಪುದರಲ್ಲಿ ಸಂದೇಹವೇ ಇಲ್ಲ. ಅದನ್ನೇ ಈಗ ಹೈದರಾಬಾದ್ ಸಿಟಿ ಪೊಲೀಸ್ ಮಾಡಿ ತೋರಿಸಿದ್ದಾರೆ. ರಸ್ತೆ ಸುರಕ್ಷತೆಯ ಕುರಿತಾಗಿ ಜಾಗೃತಿ ಮೂಡಿಸಲು ಹೈದರಾಬಾದ್ ಸಿಟಿ ಪೊಲೀಸ್ ರೋಹಿತ್ ಶರ್ಮಾ ಹಾಗೂ ದಿನೇಶ್ ಕಾರ್ತಿಕ್ ಅವರ ಫೋಟೋಗಳನ್ನು ಬಳಸಿದ್ದಾರೆ.

ಈ ಫೋಟೋಗಳು ಭಾರತ-ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯ ವೇಳೆ ಕಂಡು ಬಂದ ದೃಶ್ಯಗಳು ಎಂಬುದು ವಿಶೇಷ. ಅಂದರೆ ಆಸೀಸ್ ವಿರುದ್ಧದ 2ನೇ ಪಂದ್ಯದ ವೇಳೆ ಮೈದಾನದಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮಾಷೆಗೆ ದಿನೇಶ್ ಕಾರ್ತಿಕ್ ಅವರ ಕುತ್ತಿಗೆಗೆ ಕೈ ಹಾಕಿದ್ದರು. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದಾದ ಬಳಿಕ 3ನೇ ಪಂದ್ಯದಲ್ಲೂ ಹಿಟ್​ಮ್ಯಾನ್ ಹಾಗೂ ಡಿಕೆ ನಡುವೆ ಕೆಲ ಬ್ರೋಮನ್ಸ್ ಸನ್ನಿವೇಶ ಕಂಡು ಬಂತು. ಈ ವೇಳೆ ರೋಹಿತ್ ಶರ್ಮಾ ದಿನೇಶ್ ಕಾರ್ತಿಕ್ ಅವರ ತಲೆ ಮುತ್ತಿಕ್ಕಿದ್ದರು. ಈ ಎರಡು ಸನ್ನಿವೇಶಗಳ ಫೋಟೋಗಳನ್ನು ಬಳಸಿ ಇದೀಗ ಹೈದರಾಬಾದ್ ಪೊಲೀಸ್ ರಸ್ತೆ ಸುರಕ್ಷತಾ ಜಾಗೃತಿಗೆ ಮುಂದಾಗಿದ್ದಾರೆ.

ವಿಶೇಷ ಎಂದರೆ ರೋಹಿತ್ ಶರ್ಮಾ ದಿನೇಶ್ ಕಾರ್ತಿಕ್ ಅವರ ಕುತ್ತಿಗೆಗೆ ಕೈಹಾಕಿದ್ದಾಗ ಡಿಕೆ ಹೆಲ್ಮೆಟ್ ಧರಿಸಿರಲಿಲ್ಲ. ಹಾಗೆಯೇ ಮುತ್ತಿಕ್ಕಿದಾಗ ದಿನೇಶ್ ಕಾರ್ತಿಕ್ ವಿಕೆಟ್ ಕೀಪಿಂಗ್ ಹೆಲ್ಮೆಂಟ್ ಧರಿಸಿದ್ದರು. ಈ ಫೋಟೋಗಳನ್ನು ಬಳಸಿ ಹೆಲ್ಮೆಟ್ ಧರಿಸದಿದ್ದಾಗ ವರ್ತನೆ ಹೇಗಿರುತ್ತೆ, ಹೆಲ್ಮೆಟ್ ಧರಿಸಿದಾಗ ವರ್ತನೆ ಹೇಗಿರುತ್ತೆ ಎಂಬುದನ್ನು ಸೂಚಿಸಿದ್ದಾರೆ.

ಅಂದರೆ ಬೈಕ್ ಸವಾರರು ಹೆಲ್ಮೆಟ್ ಧರಿಸದಿದ್ದಾಗ ವರ್ತನೆ ಹಾಗೂ ಧರಿಸಿದಾಗ ಪೊಲೀಸರ ವರ್ತನೆಗಳು ಹೇಗಿರುತ್ತದೆ ಎಂಬುದನ್ನು ಸೂಚಕವಾಗಿ ಈ ಫೋಟೋಗಳನ್ನು ಹೈದರಾಬಾದ್ ಸಿಟಿ ಪೊಲೀಸ್ ಬಳಸಿದ್ದಾರೆ. ಈ ಮೂಲಕ ಹೆಲ್ಮೆಟ್ ಧರಿಸಿ ಜೀವ ಉಳಿಸಿ ಎಂಬ ಸಂದೇಶವನ್ನು ಸಾರಿದಿದ್ದಾರೆ.

ಇದೀಗ ಹೈದರಾಬಾದ್ ಸಿಟಿ ಪೊಲೀಸ್ ಟೀಮ್ ಇಂಡಿಯಾ ಆಟಗಾರರ ಫೋಟೋಗಳನ್ನು ಬಳಸಿ ರಸ್ತೆ ಸುರಕ್ಷತೆಯ ಬಗ್ಗೆ ಮೂಡಿಸಿರುವ ಜಾಗೃತಿ ಬಗ್ಗೆ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಒಟ್ಟಿನಲ್ಲಿ ಬಹುತೇಕ ಭಾರತೀಯರ ಅಚ್ಚುಮೆಚ್ಚಿನ ಕ್ರೀಡೆಯಾಗಿರುವ ಕ್ರಿಕೆಟ್ ಮೂಲಕವೇ ಹೆಲ್ಮೆಟ್ ಕುರಿತಾದ ಜಾಗೃತಿ ಮೂಡಿಸುವಲ್ಲಿ ಹೈದರಾಬಾದ್ ಸಿಟಿ ಪೊಲೀಸ್ ಯಶಸ್ವಿಯಾಗಿದೆ ಎಂದೇ ಹೇಳಬಹುದು.

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?