AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಕೊನೆಗೂ ಡಿಪಿ ಬದಲಿಸಿ ವಿಶೇಷ ಫೋಟೋ ಹಾಕಿದ ಧೋನಿ

MS Dhoni: ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್, ಕ್ಯಾಪ್ಟನ್ ಮತ್ತು ಫಿನಿಶರ್ ಆಗಿ ಗುರುತಿಸಿಕೊಂಡಿದ್ದ ಧೋನಿ, ಕ್ರಿಕೆಟ್ ಇತಿಹಾಸದಲ್ಲಿ ಎಲ್ಲಾ ಮೂರು ಐಸಿಸಿ ಟ್ರೋಫಿಗಳನ್ನು ಗೆದ್ದ ಏಕೈಕ ನಾಯಕ ದಾಖಲೆಯ ಒಡೆಯ ಎಂಬುದು ವಿಶೇಷ.

MS Dhoni: ಕೊನೆಗೂ ಡಿಪಿ ಬದಲಿಸಿ ವಿಶೇಷ ಫೋಟೋ ಹಾಕಿದ ಧೋನಿ
MS Dhoni
TV9 Web
| Updated By: ಝಾಹಿರ್ ಯೂಸುಫ್|

Updated on: Aug 13, 2022 | 2:08 PM

Share

ಭಾರತವು ಸ್ವಾತಂತ್ರ್ಯದ ಅಮೃತ ಮಹೋತ್ಸವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಎಲ್ಲರೂ ತಮ್ಮ ಸೋಷಿಯಲ್ ಮೀಡಿಯಾ ಡಿಸ್​ಪ್ಲೇ ಅನ್ನು ತ್ರಿವರ್ಣವಾಗಿ ಬದಲಿಸುವಂತೆ ಪ್ರಧಾನಿ ಮೋದಿ ಇತ್ತೀಚೆಗೆ ಮನವಿ ಮಾಡಿದ್ದರು. ಅದರಂತೆ ಇದೀಗ ಬಹುತೇಕ ಮಂದಿ ತಮ್ಮ ಡಿಪಿಗಳನ್ನು ಬದಲಿಸಿದ್ದಾರೆ. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ (MS Dhoni) ಧೋನಿ ಕೂಡ ಇರುವುದು ವಿಶೇಷ. ಧೋನಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಡಿಸ್​ಪ್ಲೇ ಫೋಟೋವನ್ನು ಬದಲಿಸುವ ಮೂಲಕ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.

ವಿಶೇಷ ಎಂದರೆ ಮಹೇಂದ್ರ ಸಿಂಗ್ ಧೋನಿ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಸಕ್ರಿಯವಾಗಿಲ್ಲ. ಆದರೆ 75ನೇ ವರ್ಷ ಸ್ವಾತಂತ್ರ್ಯದ ಸಂಭ್ರಮಕ್ಕಾಗಿ ಇದೀಗ ಎರಡು ವರ್ಷಗಳ ನಂತರ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದಾರೆ. ಹೌದು, ವರ್ಷಗಳ ಬಳಿಕ ಇನ್​ಸ್ಟಾಗ್ರಾಮ್​ನಲ್ಲಿ ಕಾಣಿಸಿಕೊಂಡಿರುವ ಧೋನಿ ತಮ್ಮ ಪ್ರೊಫೈಲ್ ಚಿತ್ರವನ್ನು ಬದಲಾಯಿಸಿದ್ದಾರೆ. ಅಲ್ಲದೆ ಭಾರತದ ಧ್ವಜ ಹೊಂದಿರುವ ಫೋಟೋವನ್ನು ಪ್ರೊಫೈಲ್ ಚಿತ್ರವಾಗಿ ಅಪ್​ಡೇಟ್ ಮಾಡಿದ್ದಾರೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇನ್ನು ಈ ಫೋಟೋದಲ್ಲಿ- ನಾನು ಭಾರತೀಯನಾಗಲು ಪುಣ್ಯ ಮಾಡಿದ್ದೇನೆ ಎಂಬ ಬರೆದಿರುವುದು ವಿಶೇಷ. ಸದ್ಯ ಧೋನಿ ಹಾಕಿಕೊಂಡಿರುವ ಈ ವಿಶೇಷ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಅಭಿಮಾನಿಗಳು ಕೂಡ ಧೋನಿಯ ಡಿಪಿಯನ್ನು ಕಾಪಿ ಮಾಡಿಕೊಂಡಿದ್ದಾರೆ.

ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್, ಕ್ಯಾಪ್ಟನ್ ಮತ್ತು ಫಿನಿಶರ್ ಆಗಿ ಗುರುತಿಸಿಕೊಂಡಿದ್ದ ಧೋನಿ, ಕ್ರಿಕೆಟ್ ಇತಿಹಾಸದಲ್ಲಿ ಎಲ್ಲಾ ಮೂರು ಐಸಿಸಿ ಟ್ರೋಫಿಗಳನ್ನು ಗೆದ್ದ ಏಕೈಕ ನಾಯಕ ದಾಖಲೆಯ ಒಡೆಯ ಎಂಬುದು ವಿಶೇಷ. ಅಂದರೆ ಧೋನಿ ನಾಯಕತ್ವದಲ್ಲಿ ಭಾರತ ಟಿ20 ವಿಶ್ವಕಪ್-2007, ಏಕದಿನ ವಿಶ್ವಕಪ್- 2011 ಮತ್ತು ಚಾಂಪಿಯನ್ಸ್ ಟ್ರೋಫಿ- 2013 ಗೆದ್ದಿದೆ.

ಇಷ್ಟೇ ಅಲ್ಲ, ಅಂತರಾಷ್ಟ್ರೀಯ ಕ್ರಿಕೆಟಿಗನಾಗಿ ಸಕ್ರಿಯವಾಗಿರುವ ದಿನಗಳಲ್ಲಿ ಧೋನಿ ತನ್ನ ಜೀವನದಲ್ಲಿ ಎಲ್ಲಕ್ಕಿಂತ ಹೆಚ್ಚಾಗಿ ರಾಷ್ಟ್ರೀಯ ಕರ್ತವ್ಯವನ್ನು ಪರಿಗಣಿಸಿದ್ದರು. ಅಂದರೆ ಧೋನಿ ವಿವಿಧ ಸಂದರ್ಭಗಳಲ್ಲಿ ಭಾರತೀಯ ಸೇನೆಯೊಂದಿಗೆ ಕಾಣಿಸಿಕೊಂಡಿದ್ದರು. 41 ವರ್ಷದ ಧೋನಿ ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವ ಹೊಂದಿದ್ದಾರೆ ಮತ್ತು ಅರ್ಹ ಪ್ಯಾರಾಟ್ರೂಪರ್ ಕೂಡ ಆಗಿದ್ದಾರೆ. ಅಲ್ಲದೆ ಹಲವು ಬಾರಿ ಸೇನಾ ತರಬೇತಿಯಲ್ಲೂ ಕಾಣಿಸಿಕೊಂಡಿದ್ದಾರೆ. ಇಲ್ಲಿ ವಿಶೇಷ ಎಂದರೆ ಲೆಫ್ಟಿನೆಂಟ್ ಕರ್ನಲ್ ಆಗಿರುವ ಮಹೇಂದ್ರ ಸಿಂಗ್ ಧೋನಿ ಯುದ್ಧದ ಸಂದರ್ಭಗಳಲ್ಲಿ ಭಾರತೀಯ ಸೇನೆಯಲ್ಲಿ ತೊಡಗಿಸಿಕೊಳ್ಳಬಹುದು.

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್