AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಫಾರ್ಮ್​ ಕಳೆದುಕೊಂಡಿಲ್ಲ, ರನ್​ ಗಳಿಸುತ್ತಿಲ್ಲ ಅಷ್ಟೇ..!

Suryakumar Yadav: ಸೂರ್ಯಕುಮಾರ್ ಯಾದವ್ ಕಳಪೆ ಫಾರ್ಮ್​​ನಿಂದ ಬಳಲುತ್ತಿದ್ದಾರೆ. ಇದಕ್ಕೆ ಸಾಕ್ಷಿ ಅವರು ಕಳೆದ 20 ಇನಿಂಗ್ಸ್​ಗಳಿಂದ ಕಲೆಹಾಕಿರುವುದು ಕೇವಲ 218 ರನ್​ಗಳು ಮಾತ್ರ. ಅದರಲ್ಲೂ 2025 ರಲ್ಲಿ ಟೀಮ್ ಇಂಡಿಯಾ ನಾಯಕನ ಬ್ಯಾಟ್​ನಿಂದ ಒಂದೇ ಒಂದು ಅರ್ಧಶತಕ ಮೂಡಿಬಂದಿಲ್ಲ. ಹೀಗಾಗಿಯೇ ಇದೀಗ ಸೂರ್ಯಕುಮಾರ್ ಯಾದವ್ ಅವರ ಫಾರ್ಮ್​ ಬಗ್ಗೆ ಪ್ರಶ್ನೆಗಳೆದ್ದಿವೆ.

ನಾನು ಫಾರ್ಮ್​ ಕಳೆದುಕೊಂಡಿಲ್ಲ, ರನ್​ ಗಳಿಸುತ್ತಿಲ್ಲ ಅಷ್ಟೇ..!
Suryakumar Yadav
ಝಾಹಿರ್ ಯೂಸುಫ್
|

Updated on:Dec 15, 2025 | 8:56 AM

Share

ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮುಗ್ಗರಿಸಿದ್ದಾರೆ. ಮೊದಲ ಮ್ಯಾಚ್​ನಲ್ಲಿ 12 ರನ್ ಬಾರಿಸಿದ್ದ ಸೂರ್ಯ, ದ್ವಿತೀಯ ಪಂದ್ಯದಲ್ಲಿ 5 ರನ್​ಗಳಿಸಿ ಔಟಾಗಿದ್ದರು. ಇದೀಗ ಮೂರನೇ ಪಂದ್ಯದಲ್ಲಿ ಮತ್ತೊಮ್ಮೆ 12 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಅಷ್ಟೇ ಅಲ್ಲದೆ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ಅರ್ಧಶತಕ ಬಾರಿಸಿ ವರ್ಷಗಳೇ ಕಳೆದಿವೆ. ಹೀಗಾಗಿಯೇ ಟೀಮ್ ಇಂಡಿಯಾ ನಾಯಕನ ಫಾರ್ಮ್​ ಬಗ್ಗೆ ಪ್ರಶ್ನೆಗಳೆದ್ದಿವೆ.

ಇದೇ ಪ್ರಶ್ನೆಯನ್ನು ಮೂರನೇ ಪಂದ್ಯದ ಮುಕ್ತಾಯದ ಬಳಿಕ ಸೂರ್ಯಕುಮಾರ್ ಯಾದವ್ ಮುಂದಿಡಲಾಗಿದೆ. ಈ ವೇಳೆ ಅವರು ನೀಡಿದ ಉತ್ತರದಿಂದ ಇದೀಗ ಟ್ರೋಲ್​ಗೆ ಒಳಗಾಗಿದ್ದಾರೆ.

ಸೌತ್ ಆಫ್ರಿಕಾ ವಿರುದ್ಧ ಪಂದ್ಯ ಗೆದ್ದ ಬಳಿಕ ಮಾತನಾಡಿದ ಸೂರ್ಯಕುಮಾರ್ ಯಾದವ್ ಅವರಿಗೆ, ಬ್ಯಾಟಿಂಗ್ ಲಯ ಕಳೆದುಕೊಂಡಿರುವ ಬಗ್ಗೆ ಪ್ರಶ್ನಿಸಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಸೂರ್ಯ, ನಾನು ಫಾರ್ಮ್ ಕಳೆದುಕೊಂಡಿಲ್ಲ. ನೆಟ್ಸ್​ನಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡುತ್ತಿದ್ದೇನೆ.

ನನ್ನ ನಿಯಂತ್ರಣದಲ್ಲಿರುವ ಎಲ್ಲವನ್ನೂ ನಾನು ಪ್ರಯತ್ನಿಸುತ್ತಿದ್ದೇನೆ.  ರನ್‌ಗಳು ಬರಬೇಕಾದಾಗ ಸಂದರ್ಭದಲ್ಲಿ ಖಂಡಿತವಾಗಿಯೂ ರನ್ ಬರುತ್ತವೆ. ಸದ್ಯ ನಾನು ಫಾರ್ಮ್ ಕಳೆದುಕೊಂಡಿಲ್ಲ. ರನ್​ಗಳಿಸುತ್ತಿಲ್ಲ ಅಷ್ಟೇ ಎಂದಿದ್ದಾರೆ.

ಟೀಮ್ ಇಂಡಿಯಾ ನಾಯಕನ ಈ ಹೇಳಿಕೆಯು ಇದೀಗ ಟ್ರೋಲ್ ಆಗಿದೆ. ಏಕೆಂದರೆ ಅಭ್ಯಾಸದ ವೇಳೆ ರನ್​ಗಳಿಸಿ ಪ್ರಯೋಜನವೇನು? ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ ಕಳೆದೊಂದು ವರ್ಷದಿಂದ ಒಂದೇ ಒಂದು ಅರ್ಧಶತಕ ಬಾರಿಸದೇ ಫಾರ್ಮ್​ ಕಳೆದುಕೊಂಡಿಲ್ಲ ಎಂದು ಹೇಳುವುದರಲ್ಲಿ ಅರ್ಥವೇ ಇಲ್ಲ ಎಂದು ಅನೇಕರು ಟೀಕಿಸಿದ್ದಾರೆ.

ಇನ್ನು ಸೂರ್ಯಕುಮಾರ್ ಯಾದವ್ ಅವರ ಕಳೆದ 20 ಇನಿಂಗ್ಸ್​ಗಳ ಒಟ್ಟು ಸ್ಕೋರ್ 218 ರನ್​ಗಳು ಮಾತ್ರ. ಈ 218 ರನ್​ಗಳಿಸಲು ಅವರು ಬರೋಬ್ಬರಿ 183 ಎಸೆತಗಳನ್ನು ತೆಗೆದುಕೊಂಡಿದ್ದರು. ಅಂದರೆ 119ರ ಸ್ಟ್ರೈಕ್​ ರೇಟ್​ನಲ್ಲಿ 12.82 ಸರಾಸರಿಯಲ್ಲಿ ಮಾತ್ರ ರನ್​ ಗಳಿಸಿದ್ದಾರೆ.

ಇದನ್ನೂ ಓದಿ: ಬರೋಬ್ಬರಿ 5.41 ಕೋಟಿ ರೂ: ಹೊಸ ತಂಡಕ್ಕೆ ಫಿಲ್ ಸಾಲ್ಟ್ ಎಂಟ್ರಿ

ಅಷ್ಟೇ ಅಲ್ಲದೆ 2024ರ ಟಿ20 ವಿಶ್ವಕಪ್​ ಬಳಿಕ ಸೂರ್ಯಕುಮಾರ್ ಯಾದವ್ ಅವರ ಬ್ಯಾಟ್​ನಿಂದ ಮೂಡಿಬಂದಿರುವುದು ಕೇವಲ 2 ಅರ್ಧಶತಕಗಳು ಮಾತ್ರ. ಅಲ್ಲದೆ ಒಂದು ವರ್ಷದಿಂದ ಹಾಫ್ ಸೆಂಚುರಿಯನ್ನು ಸಹ ಬಾರಿಸಲು ಸಾಧ್ಯವಾಗಿಲ್ಲ. ಹೀಗಾಗಿಯೇ ಸೂರ್ಯಕುಮಾರ್ ಯಾದವ್ ಅವರ ಫಾರ್ಮ್​ ಬಗ್ಗೆ ಪ್ರಶ್ನೆಗಳೆದ್ದಿವೆ. ಆದರೆ ಸೂರ್ಯಕುಮಾರ್ ಯಾದವ್ ಪ್ರಕಾರ ಫಾರ್ಮ್​ ಕಳೆದುಕೊಂಡಿಲ್ಲ, ಬದಲಾಗಿ ರನ್​ಗಳಿಸುತ್ತಿಲ್ಲ ಅಷ್ಟೇ…!

Published On - 8:54 am, Mon, 15 December 25

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ