AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ದಿನೇಶ್ ಕಾರ್ತಿಕ್​ರನ್ನು ಉಳಿಸಿಕೊಂಡಿದ್ದೇ ಪರಮಾಶ್ಚರ್ಯ: ಎಬಿ ಡಿವಿಲಿಯರ್ಸ್​

IPL 2024: ಐಪಿಎಲ್ 2022 ರಲ್ಲಿ ದಿನೇಶ್ ಕಾರ್ತಿಕ್ 13 ಪಂದ್ಯಗಳಲ್ಲಿ 11.66 ಸರಾಸರಿಯಲ್ಲಿ 140 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಇದಾಗ್ಯೂ 37 ವರ್ಷದ ದಿನೇಶ್ ಕಾರ್ತಿಕ್ ಅವರನ್ನು ಈ ಬಾರಿಯ ಐಪಿಎಲ್​ಗಾಗಿ ರಿಟೈನ್ ಮಾಡಿಕೊಂಡಿದೆ.

RCB ದಿನೇಶ್ ಕಾರ್ತಿಕ್​ರನ್ನು ಉಳಿಸಿಕೊಂಡಿದ್ದೇ ಪರಮಾಶ್ಚರ್ಯ: ಎಬಿ ಡಿವಿಲಿಯರ್ಸ್​
AB de Villiers
TV9 Web
| Updated By: ಝಾಹಿರ್ ಯೂಸುಫ್|

Updated on: Dec 03, 2023 | 6:46 PM

Share

ಈ ಬಾರಿಯ ಐಪಿಎಲ್ (IPL 2024) ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು  (RCB) ತಂಡವು ಒಟ್ಟು 19 ಆಟಗಾರರನ್ನು ಉಳಿಸಿಕೊಂಡಿದೆ. ಈ ಪಟ್ಟಿಯಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ದಿನೇಶ್ ಕಾರ್ತಿಕ್ ಇರುವುದು ನನಗೆ ಪರಮಾಶ್ಚರ್ಯವನ್ನುಂಟು ಮಾಡಿದ ಎಂದಿದ್ದಾರೆ ಮಾಜಿ ಆರ್​ಸಿಬಿ ಆಟಗಾರ ಎಬಿ ಡಿವಿಲಿಯರ್ಸ್​.

ಕಳೆದ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿದ ಹೊರತಾಗಿಯೂ ಆರ್​ಸಿಬಿ ತಂಡ ದಿನೇಶ್ ಕಾರ್ತಿಕ್ ಅವರನ್ನು ಉಳಿಸಿಕೊಳ್ಳುವ ನಿರ್ಧಾರ ಮಾಡಿದೆ. ಇದೇ ವೇಳೆ ಉತ್ತಮ ವೇಗದ ಬೌಲರ್​ ಜೋಶ್ ಹ್ಯಾಝಲ್​ವುಡ್ ಅವರನ್ನು ಕೈ ಬಿಟ್ಟಿದೆ. ಆರ್​ಸಿಬಿ ತಂಡದ ಈ ನಡೆ ನನಗೆ ಆಶ್ಚರ್ಯವನ್ನು ಉಂಟು ಮಾಡಿತು ಎಂದು ಎಬಿ ಡಿವಿಲಿಯರ್ಸ್ ತಿಳಿಸಿದ್ದಾರೆ.

ಐಪಿಎಲ್ 2022 ರಲ್ಲಿ ದಿನೇಶ್ ಕಾರ್ತಿಕ್ 13 ಪಂದ್ಯಗಳಲ್ಲಿ 11.66 ಸರಾಸರಿಯಲ್ಲಿ 140 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಇದಾಗ್ಯೂ 37 ವರ್ಷದ ದಿನೇಶ್ ಕಾರ್ತಿಕ್ ಅವರನ್ನು ಈ ಬಾರಿಯ ಐಪಿಎಲ್​ಗಾಗಿ ರಿಟೈನ್ ಮಾಡಿಕೊಂಡಿದೆ.

ಈ ಬಗ್ಗೆ ಮಾತನಾಡಿದ ಎಬಿಡಿ, ದಿನೇಶ್ ಕಾರ್ತಿಕ್ ಅವರನ್ನು ಉಳಿಸಿಕೊಂಡಿರುವುದು ನನಗೆ ಆಶ್ಚರ್ಯ ತಂದಿದೆ. ಕಳೆದ ಸೀಸನ್​ನಲ್ಲಿ ಅವರು ರನ್​ಗಳಿಸಿಲ್ಲ. ಅವರು ಇನ್ನೂ ಎರಡು ವರ್ಷಗಳ ಕಾಲ ಆಡಬಹುದು ಮತ್ತು ಅದ್ಭುತ ಕ್ರಿಕೆಟಿಗ ಎಂದು ನಾನು ಭಾವಿಸುತ್ತೇನೆ.

ಇದಾಗ್ಯೂ ಆರ್‌ಸಿಬಿ ತಮ್ಮ ಪರ್ಸ್ ಮೊತ್ತವನ್ನು ಹೆಚ್ಚಿಸಲು ಯುವ ವಿಕೆಟ್ ಕೀಪರ್​ ಆಯ್ಕೆಗೆ ಮುಂದಾಗಬಹುದು ಎಂದು ಭಾವಿಸಿದ್ದೆ. ಆದರೆ ದಿನೇಶ್ ಕಾರ್ತಿಕ್ ಅವರನ್ನೇ ವಿಕೆಟ್ ಕೀಪರ್ ಬ್ಯಾಟರ್​ ಆಗಿ ಉಳಿಸಿಕೊಂಡಿರುವುದು ಅಚ್ಚರಿ ಮೂಡಿಸಿತ್ತು ಎಂದು ಎಬಿಡಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಾಜಿ RCB ಆಟಗಾರನಿಗೆ ವಿಶೇಷ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ

ಇನ್ನು ವನಿಂದು ಹಸರಂಗ, ಹರ್ಷಲ್ ಪಟೇಲ್ ಮತ್ತು ಜೋಶ್ ಹ್ಯಾಝಲ್‌ವುಡ್ ಬಿಡುಗಡೆ ಮಾಡಿದ್ದಾರೆ. ಈ ಮೂವರು ತಂಡಕ್ಕೆ ಹಲವು ಪಂದ್ಯಗಳನ್ನು ಗೆದ್ದುಕೊಟ್ಟಿದ್ದಾರೆ. ವಿಶೇಷವಾಗಿ, ಹ್ಯಾಝಲ್​ವುಡ್ ಉತ್ತಮ ಬೌಲರ್, ಅವರು RCB ಬೌಲಿಂಗ್ ಲೈನ್-ಅಪ್ ಅನ್ನು ಬಲಿಷ್ಠಗೊಳಿಸುತ್ತಿದ್ದರು. ಇದಾಗ್ಯೂ ಅವರನ್ನು ಉಳಿಸದೇ ರಿಲೀಸ್ ಮಾಡಿರುವುದು ಮತ್ತೊಂದು ಆಶ್ಚರ್ಯಕರ ನಡೆ ಎಂದು ಎಬಿಡಿ ಹೇಳಿದರು.

RCB ಉಳಿಸಿಕೊಂಡಿರುವ ಆಟಗಾರರ ಪಟ್ಟಿ: ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನೂಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ಡಗಾರ್, ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ