AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammed Siraj: ಆಯ್ಕೆ ಮಾಡದಿದ್ದಾಗ ನಿಜಕ್ಕೂ ತುಂಬಾ ನೋವಾಗಿತ್ತು: ಸಿರಾಜ್ ಬೇಸರ

IPL 2025 SRH vs GT: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ 19ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡ 20 ಓವರ್​ಗಳಲ್ಲಿ 152 ರನ್ ಕಲೆಹಾಕಿತು. ಈ ಗುರಿಯನ್ನು ಗುಜರಾತ್ ಟೈಟಾನ್ಸ್ ತಂಡ 16.4 ಓವರ್​ಗಳಲ್ಲಿ ಚೇಸ್ ಮಾಡಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

Mohammed Siraj: ಆಯ್ಕೆ ಮಾಡದಿದ್ದಾಗ ನಿಜಕ್ಕೂ ತುಂಬಾ ನೋವಾಗಿತ್ತು: ಸಿರಾಜ್ ಬೇಸರ
Mohammed Siraj
Zahir Yusuf
|

Updated on: Apr 07, 2025 | 8:33 AM

Share

IPL 2025: ಐಪಿಎಲ್​ನ 19ನೇ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ (Mohammed Siraj) ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಹೈದಾರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಪಂದ್ಯದಲ್ಲಿ ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದ ಸಿರಾಜ್ 4 ಓವರ್​ಗಳಲ್ಲಿ ಕೇವಲ 17 ರನ್ ನೀಡಿ 4 ವಿಕೆಟ್ ಕಬಳಿಸಿದರು. ಈ ಅದ್ಭುತ ಪ್ರದರ್ಶನದ ಫಲವಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಹ ಪಡೆದರು.

ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಮೊಹಮ್ಮದ್ ಸಿರಾಜ್, ತವರು ಮೈದಾನದಲ್ಲಿ ಉತ್ತಮ ಪ್ರದರ್ಶನ ನೀಡಿರುವುದು ಖುಷಿ ನೀಡಿದೆ. ಏಕೆಂದರೆ ಇಂದಿನ ಪಂದ್ಯ ವೀಕ್ಷಿಸಲು ನನ್ನ ಕುಟುಂಬಸ್ಥರು ಸ್ಟೇಡಿಯಂಗೆ ಆಗಮಿಸಿದ್ದರು. ಹೀಗಾಗಿ ಅವರ ಮುಂದೆ ಉತ್ತಮ ಪ್ರದರ್ಶನ ನೀಡಿರುವುದು ವಿಶೇಷ ಅನುಭವ ಎಂದರು.

ಇನ್ನು ನಾನು 7 ವರ್ಷಗಳ ಕಾಲ ಆರ್​ಸಿಬಿ ಪರ ಆಡಿದ್ದೇನೆ. ಈ ವೇಳೆ ನನ್ನ ಬೌಲಿಂಗ್​ ಉತ್ತಮಗೊಳಿಸಲು ಮತ್ತು ಮನಸ್ಥಿತಿ ಬದಲಿಸಲು ಶ್ರಮ ಹಾಕಿರುವೆ. ಅದು ಈಗ ನಿಜವಾಗಿಯೂ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂದು ಖುಷಿ ವ್ಯಕ್ತಪಡಿಸಿದರು.

ಇದನ್ನೂ ಓದಿ
Image
ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Image
VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Image
11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ
Image
MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

ಇದೇ ವೇಳೆ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಆಯ್ಕೆಯಾಗದಿರುವ ಬಗ್ಗೆ ಕೇಳಿದಾಗ, ನಿಜಕ್ಕೂ ನಾನು ಭಾರತ ತಂಡಕ್ಕೆ ಆಯ್ಕೆಯಾಗಿಲ್ಲ ಎಂಬುದನ್ನು  ಜೀರ್ಣಿಸಿಕೊಳ್ಳಲು ಸಾಧ್ಯವಾಗಲಿಲ್ಲ. ನಿಜವಾಗಲೂ ತುಂಬಾ ನೋವಾಗಿತ್ತು. ಇದಾಗ್ಯೂ ನಾನು ನನ್ನ ಉತ್ಸಾಹವನ್ನು ಉಳಿಸಿಕೊಂಡು ನನ್ನ ಫಿಟ್‌ನೆಸ್ ಮತ್ತು ಆಟದತ್ತ ಗಮನ ಹರಿಸಿದೆ.

ನನ್ನ ಬೌಲಿಂಗ್​ನಲ್ಲಿ ಉಂಟಾಗುತ್ತಿದ್ದ ತಪ್ಪುಗಳನ್ನು ಸರಿಪಡಿಸುವತ್ತ ಚಿತ್ತ ನೆಟ್ಟಿದ್ದೇನೆ. ಅಲ್ಲದೆ ಅವುಗಳನ್ನು ಸರಿಪಡಿಸಲು ಕಾರ್ಯ ನಿರ್ವಹಿಸುತ್ತಿದ್ದೇನೆ. ಇದೀಗ ನನ್ನ ಬೌಲಿಂಗ್ ಅನ್ನು ಆನಂದಿಸುತ್ತಿದ್ದೇನೆ. ಒಬ್ಬ ವೃತ್ತಿಪರನಾಗಿ, ನೀವು ಭಾರತ ತಂಡದೊಂದಿಗೆ ಸ್ಥಿರವಾಗಿ ಇರುವಾಗ, ಸಡನ್ ಆಗಿ ನಿಮ್ಮನ್ನು ಕೈ ಬಿಟ್ಟಾಗ ನಮ್ಮ ಮೇಲೆಯೇ ಸಂದೇಹಗಳು ಮೂಡುತ್ತವೆ.

ಇದನ್ನೂ ಓದಿ: ಡಾಟ್​ ಬಾಲ್​ನಲ್ಲೇ ಅರ್ಧಶತಕ: ಸರ್ವಶ್ರೇಷ್ಠ ಪ್ರದರ್ಶನ ನೀಡಿದ ಮೊಹಮ್ಮದ್ ಸಿರಾಜ್

ಆದರೆ ಟೀಮ್ ಇಂಡಿಯಾದಿಂದ ನನ್ನನ್ನು ಕೈ ಬಿಟ್ಟಾಗ, ನೋವಾಗಿದ್ದರೂ ನಾನು ನನ್ನನ್ನು ಹುರಿದುಂಬಿಸಿಕೊಂಡೆ. ಐಪಿಎಲ್‌ಗಾಗಿ ತಯಾರಿಗಳನ್ನು ಆರಂಭಿಸಿದ್ದೆ. ಇದೀಗ ಅದರ ಪ್ರತಿಫಲ ಸಿಗುತ್ತಿದೆ. ನೀವು ನಿಮ್ಮ ಯೋಜನೆಗಳನ್ನು ಕಾರ್ಯಗತಗೊಳಿಸಿದಾಗ, ಯಾವಾಗಲೂ ಉನ್ನತ ಸ್ಥಾನದಲ್ಲಿರುತ್ತೀರಿ. ಇದೀಗ ನಾನು ಸಹ ಉತ್ತಮ ಪ್ರದರ್ಶನದೊಂದಿಗೆ ನನ್ನ ಯಶಸ್ಸನ್ನು ಎಂಜಾಯ್ ಮಾಡುತ್ತಿದ್ದೇನೆ ಎಂದು ಮೊಹಮ್ಮದ್ ಸಿರಾಜ್ ಹೇಳಿದ್ದಾರೆ.

ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು