AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಪರ ಆಡಲು ನಾನು ಅರ್ಹನಲ್ಲ: ರಿಯಾನ್ ಪರಾಗ್ ಅಚ್ಚರಿಯ ಹೇಳಿಕೆ

Riyan Parag: ದೇಶೀಯ ಕ್ರಿಕೆಟ್​ನಲ್ಲಿ ಅಸ್ಸಾಂ ಪರ ಆಡುತ್ತಿರುವ ರಿಯಾನ್ ಪರಾಗ್, ಈ ಬಾರಿಯ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ 183 ರನ್​ ಕಲೆಹಾಕಿದ್ದರು.

ಟೀಮ್ ಇಂಡಿಯಾ ಪರ ಆಡಲು ನಾನು ಅರ್ಹನಲ್ಲ: ರಿಯಾನ್ ಪರಾಗ್ ಅಚ್ಚರಿಯ ಹೇಳಿಕೆ
Riyan Parag
TV9 Web
| Edited By: |

Updated on: Jun 14, 2022 | 3:42 PM

Share

ಭಾರತ ಕ್ರಿಕೆಟ್ ತಂಡ ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯನ್ನು ಆಡುತ್ತಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಸೇರಿದಂತೆ ಅನೇಕ ಪ್ರಮುಖ ಆಟಗಾರರು ಈ ಸರಣಿಯ ಭಾಗವಾಗಿಲ್ಲ. ಹೀಗಾಗಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಹಾಗೆಯೇ ಐಪಿಎಲ್ ಮಿಂಚಿದ ಅನೇಕ ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ಲಭಿಸಿದೆ. ಇದಾಗ್ಯೂ ರಾಜಸ್ಥಾನ್ ರಾಯಲ್ಸ್‌ನ ಆಲ್ ರೌಂಡರ್ ರಿಯಾನ್ ಪರಾಗ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಈ ಬಗ್ಗೆ ಮಾತನಾಡಿರುವ ರಿಯಾನ್ ಪರಾಗ್, ನಾನು ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಲು ಅರ್ಹನಲ್ಲ ಎಂದು ಹೇಳಿದ್ದಾರೆ.

ರಿಯಾನ್ ಪರಾಗ್ ಐಪಿಎಲ್​ 15ನೇ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದರು. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್​ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ ಫೈನಲ್​ನಲ್ಲಿ ಸೋಲನುಭವಿಸಬೇಕಾಯಿತು. ಆದರೆ ಇಡೀ ಟೂರ್ನಿ ಆಡಿದ ಆಟಗಾರರಲ್ಲಿ ರಿಯಾನ್ ಕೂಡ ಒಬ್ಬರು. ತಂಡದಲ್ಲಿ ಆಲ್​ರೌಂಡರ್ ಆಗಿ ಕಾಣಿಸಿಕೊಂಡಿದ್ದ ರಿಯಾನ್ ಪರಾಗ್ ಅದ್ಭುತ ಫೀಲ್ಡಿಂಗ್ ಮೂಲಕ ಗಮನ ಸೆಳೆದಿದ್ದರು. ಅಲ್ಲದೆ ಈ ಸೀಸನ್​ನಲ್ಲಿ 17 ಕ್ಯಾಚ್​ಗಳನ್ನು ಹಿಡಿದು ಮಿಂಚಿದ್ದರು. ಅಲ್ಲದೆ ನಾನು ಕೂಡ ಟೀಮ್ ಇಂಡಿಯಾ ಪರ ಆಡಬಲ್ಲ ಆಲ್​ರೌಂಡರ್ ಎಂಬ ಹೇಳಿಕೆಯನ್ನು ಕೂಡ ಪರಾಗ್ ನೀಡಿದ್ದರು.

ಆದರೆ ಇದೀಗ ತಮ್ಮ ಹೇಳಿಕೆಯನ್ನು ಬದಲಿಸಿಕೊಂಡಿದ್ದಾರೆ. ಸಂವಾದವೊಂದರಲ್ಲಿ ಮಾತನಾಡಿದ ಪರಾಗ್, ‘ಪಂದ್ಯವನ್ನು ಗೆಲ್ಲುವುದು ತಂಡಕ್ಕೆ ಮುಖ್ಯವಾಗಿದೆ. ನಾನು ಅದನ್ನು ಕೆಲವು ಪಂದ್ಯಗಳಲ್ಲಿ ಮಾಡಿದ್ದೇನೆ. ಆದರೆ ಅದು ಮಾತ್ರ ಸಾಕಾಗುವುದಿಲ್ಲ. ಪಂದ್ಯಾವಳಿಯಲ್ಲಿ ನನ್ನ ತಂಡಕ್ಕಾಗಿ ನಾನು 6-7 ಪಂದ್ಯಗಳನ್ನು ಗೆಲ್ಲಿಸಲು ಸಾಧ್ಯವಾದರೆ ಮಾತ್ರ ನಾನು ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳುತ್ತೇನೆ. ಹೀಗಾಗಿ ಭಾರತ ತಂಡದ ಸಂಭಾವ್ಯ ಪಟ್ಟಿಯಲ್ಲಿ ನನ್ನ ಹೆಸರು ಬಂದರೂ ನನಗೆ ಇಷ್ಟವಾಗುವುದಿಲ್ಲ. ಏಕೆಂದರೆ ಟೀಮ್ ಇಂಡಿಯಾ ಪರ ಆಡಲು ಈಗ ಅರ್ಹನಲ್ಲ. ಮುಂಬರುವ ಸೀಸನ್​ನಲ್ಲಿ ನನ್ನ ತಂಡವನ್ನು ಇನ್ನಷ್ಟು ಗೆಲುವಿನತ್ತ ಮುನ್ನಡೆಸಿದರೆ ನನ್ನ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಈ ಮೂಲಕ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆಯಬೇಕೆಂದಿರುವೆ ಎಂದು ರಿಯಾನ್ ಪರಾಗ್ ಹೇಳಿದ್ದಾರೆ.

ಇದನ್ನೂ ಓದಿ
Image
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Image
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ದೇಶೀಯ ಕ್ರಿಕೆಟ್​ನಲ್ಲಿ ಅಸ್ಸಾಂ ಪರ ಆಡುತ್ತಿರುವ ರಿಯಾನ್ ಪರಾಗ್, ಈ ಬಾರಿಯ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ 183 ರನ್​ ಕಲೆಹಾಕಿದ್ದರು. ಅಷ್ಟೇ ಅಲ್ಲದೆ 17 ಕ್ಯಾಚ್​ಗಳನ್ನು ಹಿಡಿಯುವ ಮೂಲಕ ಈ ಸೀಸನ್​ನಲ್ಲಿ ಅತ್ಯುತ್ತಮ ಫೀಲ್ಡರ್ ಎನಿಸಿಕೊಂಡಿದ್ದರು.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?