Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಕಪ್ ಗೆಲ್ಲಬಾರದು: ಅಂಬಾಟಿ ರಾಯುಡು ಉವಾಚ

IPL 2025 RCB: ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮೂರು ಬಾರಿ ಫೈನಲ್​ಗೆ ಪ್ರವೇಶಿಸಿದೆ. 2009, 2011 ಮತ್ತು 2016 ರಲ್ಲಿ ಫೈನಲ್ ಆಡಿದ್ದ ಆರ್​ಸಿಬಿ ತಂಡವು ಮೂರು ಬಾರಿ ಕೂಡ ಟ್ರೋಫಿ ಎತ್ತಿ ಹಿಡಿಯುವಲ್ಲಿ ವಿಫಲವಾಗಿತ್ತು. ಇದೀಗ 18ನೇ ಸೀಸನ್​ನಲ್ಲಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ.

RCB ಕಪ್ ಗೆಲ್ಲಬಾರದು: ಅಂಬಾಟಿ ರಾಯುಡು ಉವಾಚ
Rcb - Ambati Rayudu
Follow us
ಝಾಹಿರ್ ಯೂಸುಫ್
|

Updated on: Mar 29, 2025 | 11:30 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 17 ವರ್ಷಗಳು ಕಳೆದಿವೆ. ಈ ಹದಿನೇಳು ವರ್ಷಗಳಲ್ಲಿ ಟ್ರೋಫಿ ಎತ್ತಿ ಹಿಡಿಯದ ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಕೂಡ ಒಂದು. ಇದೀಗ ಹೊಸ ಸೀಸನ್​ನಲ್ಲಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿದಿರುವ ಆರ್​ಸಿಬಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವ ಹುಮ್ಮಸ್ಸಿನಲ್ಲಿದೆ. ಆದರೆ ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆಲ್ಲಬಾರದು ಎಂದು ಆಶಿಸಿದ್ದಾರೆ ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು.

ಎಸ್ ಬ್ರದಿನಾಥ್ ನಡೆಸಿದ ಚಿಟ್​ ಚಾಟ್​ನಲ್ಲಿ ಕಾಣಿಸಿಕೊಂಡ ಅಂಬಾಟಿ ರಾಯುಡುಗೆ ಈ ಬಾರಿಯಾದರೂ ಆರ್​ಸಿಬಿ ತಂಡದ ಕಾಯುವಿಕೆ ಕೊನೆಗೊಳ್ಳಲಿದೆಯಾ ಎಂದು ಪ್ರಶ್ನಿಸಲಾಗಿತ್ತು. ಇದಕ್ಕೆ ನಗುತ್ತಾ ಉತ್ತರಿಸಿದ ರಾಯುಡು, ಈ ಸಲ ನನಗೆ ಆರ್​ಸಿಬಿ ತಂಡ ಕಪ್ ಗೆಲ್ಲೋದು ಇಷ್ಟವಿಲ್ಲ ಎಂದು ಬಹಿರಂಗವಾಗಿಯೇ ಎಂದಿದ್ದಾರೆ.

ರಾಯಲ್ ಚಾಲೆಂಜರ್ಸ್​ ಬೆಂಗಳೂರುನಂತಹ ತಂಡ ಇರಬೇಕು. ಏಕೆಂದರೆ ನಿರೀಕ್ಷೆಗಳನ್ನು ಹೆಚ್ಚಿಸಿ ಅದನ್ನು ಪೂರೈಸಲು ವಿಫಲವಾಗುವ ತಂಡ ಇದ್ದರೇನೇ ಮನರಂಜನೆ ಸಿಗೋದು. ಹೀಗಾಗಿ ಆರ್​ಸಿಬಿಯಂತಹ ತಂಡ ಐಪಿಎಲ್​ನಲ್ಲಿ ಇರಬೇಕೆಂದು ನಾನು ಬಯಸುತ್ತೇನೆ.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ಅಲ್ಲದೆ ಆರ್‌ಸಿಬಿ ತಂಡವು ಗೆಲ್ಲಲು ಹೆಣಗಾಡುವುದನ್ನು ನೋಡಿ ನಾನು ಸದಾ ಆನಂದಿಸುತ್ತೇನೆ. ಇದಾಗ್ಯೂ ಅವರು ಟ್ರೋಫಿ ಗೆಲ್ಲಲಿ ಎಂದು ಬಯಸುತ್ತೇನೆ. ಆದರೆ ಈ ಬಾರಿ ಅವರು ಕಪ್ ಗೆಲ್ಲಬಾರದು. ಮುಂದೊಂದು ದಿನ ಯಾವತ್ತಾದರು ಗೆಲ್ಲಲಿ. ಈ ಸಲ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟ್ರೋಫಿ ಎತ್ತಿ ಹಿಡಿಯಬೇಕು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಇದೀಗ ಅಂಬಾಟಿ ರಾಯುಡು ಅವರ ಈ ಹೇಳಿಕೆಯು ವೈರಲ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆಗಳು ಶುರುವಾಗಿದೆ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲ್ಲುತ್ತಿದ್ದಂತೆ ಆರ್​ಸಿಬಿ ಅಭಿಮಾನಿಗಳು ರಾಯುಡು ಅವರನ್ನು ಟ್ರೋಲ್ ಮಾಡಲಾರಂಭಿಸಿದ್ದಾರೆ.

ಅಂದಹಾಗೆ ಅಂಬಾಟಿ ರಾಯುಡು ಇಂತಹ ಹೇಳಿಕೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಪೋಡ್​ ಕಾಸ್ಟ್​ವೊಂದರಲ್ಲಿ ಮಾತನಾಡಿದ್ದ ರಾಯುಡು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಂದು ದಿನ ಕಪ್ ಗೆಲ್ಲಬಹುದು ಎಂದು ನಾನು ಭಾವಿಸುತ್ತೇನೆ. ಆದರೆ ಈ ವರ್ಷ ಅವರು ಕಪ್ ಗೆಲ್ಲದಿರಲಿ ಎಂದು ನಾನು ಆಶಿಸುತ್ತೇನೆ ಹಾಗೂ ಪ್ರಾರ್ಥಿಸುತ್ತೇನೆ ಎಂದು ಬಹಿರಂಗವಾಗಿಯೇ ಹೇಳಿದ್ದರು.

ಇದನ್ನೂ ಓದಿ: 2 ವರ್ಷ ಬ್ಯಾನ್… CSKಯನ್ನು ಗೇಲಿ ಮಾಡಿದ್ರಾ ವಿರಾಟ್ ಕೊಹ್ಲಿ?

ಇದೀಗ ಮತ್ತೊಮ್ಮೆ ಅಂಬಾಟಿ ರಾಯುಡು ಆರ್​ಸಿಬಿಯನ್ನು ಹೀಯಾಳಿಸಿ ಮಾತನಾಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಾಯಲ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ