AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಕಪ್ ಗೆಲ್ಲಬಾರದು: ಅಂಬಾಟಿ ರಾಯುಡು ಉವಾಚ

IPL 2025 RCB: ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮೂರು ಬಾರಿ ಫೈನಲ್​ಗೆ ಪ್ರವೇಶಿಸಿದೆ. 2009, 2011 ಮತ್ತು 2016 ರಲ್ಲಿ ಫೈನಲ್ ಆಡಿದ್ದ ಆರ್​ಸಿಬಿ ತಂಡವು ಮೂರು ಬಾರಿ ಕೂಡ ಟ್ರೋಫಿ ಎತ್ತಿ ಹಿಡಿಯುವಲ್ಲಿ ವಿಫಲವಾಗಿತ್ತು. ಇದೀಗ 18ನೇ ಸೀಸನ್​ನಲ್ಲಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ.

RCB ಕಪ್ ಗೆಲ್ಲಬಾರದು: ಅಂಬಾಟಿ ರಾಯುಡು ಉವಾಚ
Rcb - Ambati Rayudu
ಝಾಹಿರ್ ಯೂಸುಫ್
|

Updated on: Mar 29, 2025 | 11:30 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 17 ವರ್ಷಗಳು ಕಳೆದಿವೆ. ಈ ಹದಿನೇಳು ವರ್ಷಗಳಲ್ಲಿ ಟ್ರೋಫಿ ಎತ್ತಿ ಹಿಡಿಯದ ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಕೂಡ ಒಂದು. ಇದೀಗ ಹೊಸ ಸೀಸನ್​ನಲ್ಲಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿದಿರುವ ಆರ್​ಸಿಬಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವ ಹುಮ್ಮಸ್ಸಿನಲ್ಲಿದೆ. ಆದರೆ ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆಲ್ಲಬಾರದು ಎಂದು ಆಶಿಸಿದ್ದಾರೆ ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು.

ಎಸ್ ಬ್ರದಿನಾಥ್ ನಡೆಸಿದ ಚಿಟ್​ ಚಾಟ್​ನಲ್ಲಿ ಕಾಣಿಸಿಕೊಂಡ ಅಂಬಾಟಿ ರಾಯುಡುಗೆ ಈ ಬಾರಿಯಾದರೂ ಆರ್​ಸಿಬಿ ತಂಡದ ಕಾಯುವಿಕೆ ಕೊನೆಗೊಳ್ಳಲಿದೆಯಾ ಎಂದು ಪ್ರಶ್ನಿಸಲಾಗಿತ್ತು. ಇದಕ್ಕೆ ನಗುತ್ತಾ ಉತ್ತರಿಸಿದ ರಾಯುಡು, ಈ ಸಲ ನನಗೆ ಆರ್​ಸಿಬಿ ತಂಡ ಕಪ್ ಗೆಲ್ಲೋದು ಇಷ್ಟವಿಲ್ಲ ಎಂದು ಬಹಿರಂಗವಾಗಿಯೇ ಎಂದಿದ್ದಾರೆ.

ರಾಯಲ್ ಚಾಲೆಂಜರ್ಸ್​ ಬೆಂಗಳೂರುನಂತಹ ತಂಡ ಇರಬೇಕು. ಏಕೆಂದರೆ ನಿರೀಕ್ಷೆಗಳನ್ನು ಹೆಚ್ಚಿಸಿ ಅದನ್ನು ಪೂರೈಸಲು ವಿಫಲವಾಗುವ ತಂಡ ಇದ್ದರೇನೇ ಮನರಂಜನೆ ಸಿಗೋದು. ಹೀಗಾಗಿ ಆರ್​ಸಿಬಿಯಂತಹ ತಂಡ ಐಪಿಎಲ್​ನಲ್ಲಿ ಇರಬೇಕೆಂದು ನಾನು ಬಯಸುತ್ತೇನೆ.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ಅಲ್ಲದೆ ಆರ್‌ಸಿಬಿ ತಂಡವು ಗೆಲ್ಲಲು ಹೆಣಗಾಡುವುದನ್ನು ನೋಡಿ ನಾನು ಸದಾ ಆನಂದಿಸುತ್ತೇನೆ. ಇದಾಗ್ಯೂ ಅವರು ಟ್ರೋಫಿ ಗೆಲ್ಲಲಿ ಎಂದು ಬಯಸುತ್ತೇನೆ. ಆದರೆ ಈ ಬಾರಿ ಅವರು ಕಪ್ ಗೆಲ್ಲಬಾರದು. ಮುಂದೊಂದು ದಿನ ಯಾವತ್ತಾದರು ಗೆಲ್ಲಲಿ. ಈ ಸಲ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟ್ರೋಫಿ ಎತ್ತಿ ಹಿಡಿಯಬೇಕು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಇದೀಗ ಅಂಬಾಟಿ ರಾಯುಡು ಅವರ ಈ ಹೇಳಿಕೆಯು ವೈರಲ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆಗಳು ಶುರುವಾಗಿದೆ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲ್ಲುತ್ತಿದ್ದಂತೆ ಆರ್​ಸಿಬಿ ಅಭಿಮಾನಿಗಳು ರಾಯುಡು ಅವರನ್ನು ಟ್ರೋಲ್ ಮಾಡಲಾರಂಭಿಸಿದ್ದಾರೆ.

ಅಂದಹಾಗೆ ಅಂಬಾಟಿ ರಾಯುಡು ಇಂತಹ ಹೇಳಿಕೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಪೋಡ್​ ಕಾಸ್ಟ್​ವೊಂದರಲ್ಲಿ ಮಾತನಾಡಿದ್ದ ರಾಯುಡು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಂದು ದಿನ ಕಪ್ ಗೆಲ್ಲಬಹುದು ಎಂದು ನಾನು ಭಾವಿಸುತ್ತೇನೆ. ಆದರೆ ಈ ವರ್ಷ ಅವರು ಕಪ್ ಗೆಲ್ಲದಿರಲಿ ಎಂದು ನಾನು ಆಶಿಸುತ್ತೇನೆ ಹಾಗೂ ಪ್ರಾರ್ಥಿಸುತ್ತೇನೆ ಎಂದು ಬಹಿರಂಗವಾಗಿಯೇ ಹೇಳಿದ್ದರು.

ಇದನ್ನೂ ಓದಿ: 2 ವರ್ಷ ಬ್ಯಾನ್… CSKಯನ್ನು ಗೇಲಿ ಮಾಡಿದ್ರಾ ವಿರಾಟ್ ಕೊಹ್ಲಿ?

ಇದೀಗ ಮತ್ತೊಮ್ಮೆ ಅಂಬಾಟಿ ರಾಯುಡು ಆರ್​ಸಿಬಿಯನ್ನು ಹೀಯಾಳಿಸಿ ಮಾತನಾಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಾಯಲ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?