AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಕಪ್ ಗೆಲ್ಲಬಾರದು: ಅಂಬಾಟಿ ರಾಯುಡು ಉವಾಚ

IPL 2025 RCB: ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮೂರು ಬಾರಿ ಫೈನಲ್​ಗೆ ಪ್ರವೇಶಿಸಿದೆ. 2009, 2011 ಮತ್ತು 2016 ರಲ್ಲಿ ಫೈನಲ್ ಆಡಿದ್ದ ಆರ್​ಸಿಬಿ ತಂಡವು ಮೂರು ಬಾರಿ ಕೂಡ ಟ್ರೋಫಿ ಎತ್ತಿ ಹಿಡಿಯುವಲ್ಲಿ ವಿಫಲವಾಗಿತ್ತು. ಇದೀಗ 18ನೇ ಸೀಸನ್​ನಲ್ಲಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ.

RCB ಕಪ್ ಗೆಲ್ಲಬಾರದು: ಅಂಬಾಟಿ ರಾಯುಡು ಉವಾಚ
Rcb - Ambati Rayudu
ಝಾಹಿರ್ ಯೂಸುಫ್
|

Updated on: Mar 29, 2025 | 11:30 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 17 ವರ್ಷಗಳು ಕಳೆದಿವೆ. ಈ ಹದಿನೇಳು ವರ್ಷಗಳಲ್ಲಿ ಟ್ರೋಫಿ ಎತ್ತಿ ಹಿಡಿಯದ ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಕೂಡ ಒಂದು. ಇದೀಗ ಹೊಸ ಸೀಸನ್​ನಲ್ಲಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿದಿರುವ ಆರ್​ಸಿಬಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವ ಹುಮ್ಮಸ್ಸಿನಲ್ಲಿದೆ. ಆದರೆ ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆಲ್ಲಬಾರದು ಎಂದು ಆಶಿಸಿದ್ದಾರೆ ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು.

ಎಸ್ ಬ್ರದಿನಾಥ್ ನಡೆಸಿದ ಚಿಟ್​ ಚಾಟ್​ನಲ್ಲಿ ಕಾಣಿಸಿಕೊಂಡ ಅಂಬಾಟಿ ರಾಯುಡುಗೆ ಈ ಬಾರಿಯಾದರೂ ಆರ್​ಸಿಬಿ ತಂಡದ ಕಾಯುವಿಕೆ ಕೊನೆಗೊಳ್ಳಲಿದೆಯಾ ಎಂದು ಪ್ರಶ್ನಿಸಲಾಗಿತ್ತು. ಇದಕ್ಕೆ ನಗುತ್ತಾ ಉತ್ತರಿಸಿದ ರಾಯುಡು, ಈ ಸಲ ನನಗೆ ಆರ್​ಸಿಬಿ ತಂಡ ಕಪ್ ಗೆಲ್ಲೋದು ಇಷ್ಟವಿಲ್ಲ ಎಂದು ಬಹಿರಂಗವಾಗಿಯೇ ಎಂದಿದ್ದಾರೆ.

ರಾಯಲ್ ಚಾಲೆಂಜರ್ಸ್​ ಬೆಂಗಳೂರುನಂತಹ ತಂಡ ಇರಬೇಕು. ಏಕೆಂದರೆ ನಿರೀಕ್ಷೆಗಳನ್ನು ಹೆಚ್ಚಿಸಿ ಅದನ್ನು ಪೂರೈಸಲು ವಿಫಲವಾಗುವ ತಂಡ ಇದ್ದರೇನೇ ಮನರಂಜನೆ ಸಿಗೋದು. ಹೀಗಾಗಿ ಆರ್​ಸಿಬಿಯಂತಹ ತಂಡ ಐಪಿಎಲ್​ನಲ್ಲಿ ಇರಬೇಕೆಂದು ನಾನು ಬಯಸುತ್ತೇನೆ.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ಅಲ್ಲದೆ ಆರ್‌ಸಿಬಿ ತಂಡವು ಗೆಲ್ಲಲು ಹೆಣಗಾಡುವುದನ್ನು ನೋಡಿ ನಾನು ಸದಾ ಆನಂದಿಸುತ್ತೇನೆ. ಇದಾಗ್ಯೂ ಅವರು ಟ್ರೋಫಿ ಗೆಲ್ಲಲಿ ಎಂದು ಬಯಸುತ್ತೇನೆ. ಆದರೆ ಈ ಬಾರಿ ಅವರು ಕಪ್ ಗೆಲ್ಲಬಾರದು. ಮುಂದೊಂದು ದಿನ ಯಾವತ್ತಾದರು ಗೆಲ್ಲಲಿ. ಈ ಸಲ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟ್ರೋಫಿ ಎತ್ತಿ ಹಿಡಿಯಬೇಕು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಇದೀಗ ಅಂಬಾಟಿ ರಾಯುಡು ಅವರ ಈ ಹೇಳಿಕೆಯು ವೈರಲ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆಗಳು ಶುರುವಾಗಿದೆ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲ್ಲುತ್ತಿದ್ದಂತೆ ಆರ್​ಸಿಬಿ ಅಭಿಮಾನಿಗಳು ರಾಯುಡು ಅವರನ್ನು ಟ್ರೋಲ್ ಮಾಡಲಾರಂಭಿಸಿದ್ದಾರೆ.

ಅಂದಹಾಗೆ ಅಂಬಾಟಿ ರಾಯುಡು ಇಂತಹ ಹೇಳಿಕೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಪೋಡ್​ ಕಾಸ್ಟ್​ವೊಂದರಲ್ಲಿ ಮಾತನಾಡಿದ್ದ ರಾಯುಡು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಂದು ದಿನ ಕಪ್ ಗೆಲ್ಲಬಹುದು ಎಂದು ನಾನು ಭಾವಿಸುತ್ತೇನೆ. ಆದರೆ ಈ ವರ್ಷ ಅವರು ಕಪ್ ಗೆಲ್ಲದಿರಲಿ ಎಂದು ನಾನು ಆಶಿಸುತ್ತೇನೆ ಹಾಗೂ ಪ್ರಾರ್ಥಿಸುತ್ತೇನೆ ಎಂದು ಬಹಿರಂಗವಾಗಿಯೇ ಹೇಳಿದ್ದರು.

ಇದನ್ನೂ ಓದಿ: 2 ವರ್ಷ ಬ್ಯಾನ್… CSKಯನ್ನು ಗೇಲಿ ಮಾಡಿದ್ರಾ ವಿರಾಟ್ ಕೊಹ್ಲಿ?

ಇದೀಗ ಮತ್ತೊಮ್ಮೆ ಅಂಬಾಟಿ ರಾಯುಡು ಆರ್​ಸಿಬಿಯನ್ನು ಹೀಯಾಳಿಸಿ ಮಾತನಾಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಾಯಲ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Follow Us
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ