AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಕಪ್ ಗೆಲ್ಲಬಾರದು: ಅಂಬಾಟಿ ರಾಯುಡು ಉವಾಚ

IPL 2025 RCB: ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮೂರು ಬಾರಿ ಫೈನಲ್​ಗೆ ಪ್ರವೇಶಿಸಿದೆ. 2009, 2011 ಮತ್ತು 2016 ರಲ್ಲಿ ಫೈನಲ್ ಆಡಿದ್ದ ಆರ್​ಸಿಬಿ ತಂಡವು ಮೂರು ಬಾರಿ ಕೂಡ ಟ್ರೋಫಿ ಎತ್ತಿ ಹಿಡಿಯುವಲ್ಲಿ ವಿಫಲವಾಗಿತ್ತು. ಇದೀಗ 18ನೇ ಸೀಸನ್​ನಲ್ಲಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ.

RCB ಕಪ್ ಗೆಲ್ಲಬಾರದು: ಅಂಬಾಟಿ ರಾಯುಡು ಉವಾಚ
Rcb - Ambati Rayudu
ಝಾಹಿರ್ ಯೂಸುಫ್
|

Updated on: Mar 29, 2025 | 11:30 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 17 ವರ್ಷಗಳು ಕಳೆದಿವೆ. ಈ ಹದಿನೇಳು ವರ್ಷಗಳಲ್ಲಿ ಟ್ರೋಫಿ ಎತ್ತಿ ಹಿಡಿಯದ ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಕೂಡ ಒಂದು. ಇದೀಗ ಹೊಸ ಸೀಸನ್​ನಲ್ಲಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿದಿರುವ ಆರ್​ಸಿಬಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವ ಹುಮ್ಮಸ್ಸಿನಲ್ಲಿದೆ. ಆದರೆ ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆಲ್ಲಬಾರದು ಎಂದು ಆಶಿಸಿದ್ದಾರೆ ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು.

ಎಸ್ ಬ್ರದಿನಾಥ್ ನಡೆಸಿದ ಚಿಟ್​ ಚಾಟ್​ನಲ್ಲಿ ಕಾಣಿಸಿಕೊಂಡ ಅಂಬಾಟಿ ರಾಯುಡುಗೆ ಈ ಬಾರಿಯಾದರೂ ಆರ್​ಸಿಬಿ ತಂಡದ ಕಾಯುವಿಕೆ ಕೊನೆಗೊಳ್ಳಲಿದೆಯಾ ಎಂದು ಪ್ರಶ್ನಿಸಲಾಗಿತ್ತು. ಇದಕ್ಕೆ ನಗುತ್ತಾ ಉತ್ತರಿಸಿದ ರಾಯುಡು, ಈ ಸಲ ನನಗೆ ಆರ್​ಸಿಬಿ ತಂಡ ಕಪ್ ಗೆಲ್ಲೋದು ಇಷ್ಟವಿಲ್ಲ ಎಂದು ಬಹಿರಂಗವಾಗಿಯೇ ಎಂದಿದ್ದಾರೆ.

ರಾಯಲ್ ಚಾಲೆಂಜರ್ಸ್​ ಬೆಂಗಳೂರುನಂತಹ ತಂಡ ಇರಬೇಕು. ಏಕೆಂದರೆ ನಿರೀಕ್ಷೆಗಳನ್ನು ಹೆಚ್ಚಿಸಿ ಅದನ್ನು ಪೂರೈಸಲು ವಿಫಲವಾಗುವ ತಂಡ ಇದ್ದರೇನೇ ಮನರಂಜನೆ ಸಿಗೋದು. ಹೀಗಾಗಿ ಆರ್​ಸಿಬಿಯಂತಹ ತಂಡ ಐಪಿಎಲ್​ನಲ್ಲಿ ಇರಬೇಕೆಂದು ನಾನು ಬಯಸುತ್ತೇನೆ.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ಅಲ್ಲದೆ ಆರ್‌ಸಿಬಿ ತಂಡವು ಗೆಲ್ಲಲು ಹೆಣಗಾಡುವುದನ್ನು ನೋಡಿ ನಾನು ಸದಾ ಆನಂದಿಸುತ್ತೇನೆ. ಇದಾಗ್ಯೂ ಅವರು ಟ್ರೋಫಿ ಗೆಲ್ಲಲಿ ಎಂದು ಬಯಸುತ್ತೇನೆ. ಆದರೆ ಈ ಬಾರಿ ಅವರು ಕಪ್ ಗೆಲ್ಲಬಾರದು. ಮುಂದೊಂದು ದಿನ ಯಾವತ್ತಾದರು ಗೆಲ್ಲಲಿ. ಈ ಸಲ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟ್ರೋಫಿ ಎತ್ತಿ ಹಿಡಿಯಬೇಕು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಇದೀಗ ಅಂಬಾಟಿ ರಾಯುಡು ಅವರ ಈ ಹೇಳಿಕೆಯು ವೈರಲ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆಗಳು ಶುರುವಾಗಿದೆ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲ್ಲುತ್ತಿದ್ದಂತೆ ಆರ್​ಸಿಬಿ ಅಭಿಮಾನಿಗಳು ರಾಯುಡು ಅವರನ್ನು ಟ್ರೋಲ್ ಮಾಡಲಾರಂಭಿಸಿದ್ದಾರೆ.

ಅಂದಹಾಗೆ ಅಂಬಾಟಿ ರಾಯುಡು ಇಂತಹ ಹೇಳಿಕೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಪೋಡ್​ ಕಾಸ್ಟ್​ವೊಂದರಲ್ಲಿ ಮಾತನಾಡಿದ್ದ ರಾಯುಡು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಂದು ದಿನ ಕಪ್ ಗೆಲ್ಲಬಹುದು ಎಂದು ನಾನು ಭಾವಿಸುತ್ತೇನೆ. ಆದರೆ ಈ ವರ್ಷ ಅವರು ಕಪ್ ಗೆಲ್ಲದಿರಲಿ ಎಂದು ನಾನು ಆಶಿಸುತ್ತೇನೆ ಹಾಗೂ ಪ್ರಾರ್ಥಿಸುತ್ತೇನೆ ಎಂದು ಬಹಿರಂಗವಾಗಿಯೇ ಹೇಳಿದ್ದರು.

ಇದನ್ನೂ ಓದಿ: 2 ವರ್ಷ ಬ್ಯಾನ್… CSKಯನ್ನು ಗೇಲಿ ಮಾಡಿದ್ರಾ ವಿರಾಟ್ ಕೊಹ್ಲಿ?

ಇದೀಗ ಮತ್ತೊಮ್ಮೆ ಅಂಬಾಟಿ ರಾಯುಡು ಆರ್​ಸಿಬಿಯನ್ನು ಹೀಯಾಳಿಸಿ ಮಾತನಾಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಾಯಲ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ