AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravindra Jadeja: ಸರ್ ಎಂದು ಕರೆಯಬೇಡಿ, ಬಾಪು ಅನ್ನಿ ಸಾಕು: ರವೀಂದ್ರ ಜಡೇಜಾ

India vs Australia Test: ಈ ಭರ್ಜರಿ ಪ್ರದರ್ಶನದ ಫಲವಾಗಿ ಅವರು ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆದಿದ್ದರು. 5 ತಿಂಗಳುಗಳ ಬಳಿಕ ಕಂಬ್ಯಾಕ್ ಮಾಡಿದ್ದ ಜಡ್ಡು ನಾಗ್ಪುರ ಟೆಸ್ಟ್​ನಲ್ಲಿ ಒಟ್ಟು 7 ವಿಕೆಟ್ ಪಡೆದು ಮಿಂಚಿದ್ದರು.

Ravindra Jadeja: ಸರ್ ಎಂದು ಕರೆಯಬೇಡಿ, ಬಾಪು ಅನ್ನಿ ಸಾಕು: ರವೀಂದ್ರ ಜಡೇಜಾ
Ravindra Jadeja
TV9 Web
| Edited By: |

Updated on: Feb 16, 2023 | 4:00 PM

Share

ಟೀಮ್ ಇಂಡಿಯಾದ (Team India) ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ (Ravindra Jadeja) ಅವರನ್ನು ಸರ್ ಎಂದು ಕರೆಯುತ್ತಿರುವುದು ಗೊತ್ತೇ ಇದೆ. 2013 ರಲ್ಲಿ ಮಹೇಂದ್ರ ಸಿಂಗ್​ ಧೋನಿ ಸೋಷಿಯಲ್ ಮೀಡಿಯಾದಲ್ಲಿ ಸರ್ ರವೀಂದ್ರ ಜಡೇಜಾ ಎಂದು ಸಂಬೋಧಿಸಿದ ಪರಿಣಾಮ ಅವರ ಹೆಸರಿನ ಮುಂದೆ ಸರ್ ಸೇರ್ಪಡೆಯಾಯಿತು. ಆದರೆ ಜನರು ಸರ್ ಎಂದು ಕರೆಯುತ್ತಿರುವುದು ಖುದ್ದು ಜಡೇಜಾ ಅವರಿಗೂ ಇಷ್ಟವಿಲ್ಲ. ಬದಲಾಗಿ ನನ್ನನ್ನು ಬಾಪು ಎಂದು ಕರೆಯಿರಿ ಎಂದಿದ್ದಾರೆ ಟೀಮ್ ಇಂಡಿಯಾದ ಆಟಗಾರ.

ಸಂದರ್ಶನವೊಂದರಲ್ಲಿ ಮಾತನಾಡಿದ ರವೀಂದ್ರ ಜಡೇಜಾ, ಜನರು ನನ್ನನ್ನು ನನ್ನ ಹೆಸರಿನಿಂದ ಕರೆಯಬೇಕು. ಅಷ್ಟೇ ಸಾಕು. ನಾನು ಸರ್ ಎಂದು ಕರೆಯುವುದನ್ನು ದ್ವೇಷಿಸುತ್ತೇನೆ. ನೀವು ಬಯಸಿದರೆ, ನನ್ನನ್ನು ಬಾಪು ಎಂದು ಕರೆಯಿರಿ. ಅದು ನನಗೆ ಇಷ್ಟವಾಗುತ್ತದೆ. ಈ ಸರ್-ವಾರ್, ನನಗೆ ಇಷ್ಟವಿಲ್ಲ. ವಾಸ್ತವವಾಗಿ, ಜನರು ನನ್ನನ್ನು ಸರ್ ಎಂದು ಕರೆದಾಗ ನಾನು ಹೆಚ್ಚಾಗಿ ಗಮನಿಸುವುದಿಲ್ಲ ಎಂದು ಜಡೇಜಾ ಹೇಳಿದ್ದಾರೆ.

ನಾನು ಗುಜರಾತಿನ ಜಾಮ್‌ನಗರದವ. ಅಲ್ಲಿ ಎಲ್ಲರೂ ನನ್ನನ್ನು ಪ್ರೀತಿಯಿಂದ ‘ಬಾಪು’ ಎಂದು ಕರೆಯುತ್ತಾರೆ. ಹಾಗಾಗಿ ‘ಸರ್’ ಬದಲು ಬಾಪು ಎಂದು ಕರೆಯದರೆ ನನಗೆ ಹೆಚ್ಚು ಇಷ್ಟವಾಗುತ್ತದೆ ಎಂದು ಜಡೇಜಾ ಹೇಳಿದ್ದಾರೆ.

ಇದನ್ನೂ ಓದಿ
Image
India vs Australia 2nd Test: ಟೀಮ್ ಇಂಡಿಯಾಗೆ ಸ್ಟಾರ್ ಆಟಗಾರ ಎಂಟ್ರಿ
Image
Virender Sehwag: ಪುಲ್ವಾಮಾ ದಾಳಿಗೆ 4 ವರ್ಷ: ಕೊಟ್ಟ ಮಾತು ಉಳಿಸಿಕೊಂಡ ವೀರೇಂದ್ರ ಸೆಹ್ವಾಗ್
Image
RCB ತಂಡದ ಸ್ಮೈಲ್ ಸುಂದರಿ ಸ್ಮೃತಿ ಮಂಧಾನ ಅವರ ಶೈಕ್ಷಣಿಕ ಅರ್ಹತೆ ಏನು ಗೊತ್ತಾ?
Image
WPL 2023: ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯುವ 5 ತಂಡಗಳು ಹೀಗಿವೆ

ಇದೇ ವೇಳೆ ಮಾಧ್ಯಮಗಳಿಂದ ದೂರ ಉಳಿಯುತ್ತಿರುವ ಬಗ್ಗೆ ಕೂಡ ಸ್ಪಷ್ಟನೆ ನೀಡಿದರು. ನೀವು ನನ್ನ ಬಗ್ಗೆ ಬರೆದರೆ, ನಾನು ಕಂಬ್ಯಾಕ್ ಮಾಡುತ್ತೇನೆ ಎಂದು ನೀವು ಭಾವಿಸುತ್ತೀರಾ?. ವಿಮರ್ಶಕರು ನಿರಂತರವಾಗಿ ತಮ್ಮನ್ನು ದುರ್ಬಲಗೊಳಿಸಿದಾಗ ನಮಲ್ಲೇ ಆತಂಕ ಮೂಡುತ್ತದೆ. ಇಂತಹ ಸಂದರ್ಭದಲ್ಲಿ ನನಗೆ ತಂದೆ ಹೇಳಿದ ಮಾತೊಂದು ನೆನಪು ಬರುತ್ತದೆ.

ನಮ್ಮ ತಂದೆಯವರು ನನಗೆ ಯಾವತ್ತೂ “ಚಮಚಗಿರಿ” ಮಾಡದಂತೆ ಎಚ್ಚರಿಕೆ ನೀಡಿದ್ದರು. “ಗ್ರೌಂಡ್ ಮೇ ಪ್ರದರ್ಶನ ಕರೋ, ಬಸ್ ಬಾತ್ ಖತಮ್” (ಮೈದಾನದಲ್ಲಿ ಪ್ರದರ್ಶನ ನೀಡು, ಅಲ್ಲಿಗೆ ಎಲ್ಲವೂ ಕೊನೆಗೊಳ್ಳುತ್ತೆ) ಎಂದು ಹೇಳಿದ್ದರು. ಇದನ್ನೇ ಪಾಲಿಸುತ್ತಾ ವೃತ್ತಿ ಜೀವನದಲ್ಲಿ ಬೀಳು ಏಳುಗಳನ್ನು ಕಂಡಿದ್ದೇನೆ ಎಂದು ಜಡೇಜಾ ಹೇಳಿದರು.

ಇದಕ್ಕೆ ಸಾಕ್ಷಿಯೇ ರವೀಂದ್ರ ಜಡೇಜಾ ಅವರ ಇತ್ತೀಚಿನ ಕಂಬ್ಯಾಕ್. ಗಾಯಗೊಂಡು 5 ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿದಿದ್ದ ಜಡೇಜಾ ಅವರಿಗೆ ತಂಡದಲ್ಲಿ ಸ್ಥಾನ ಸಿಗಬೇಕಿದ್ದರೆ ರಣಜಿ ಟೂರ್ನಿ ಆಡಿ ಫಿಟ್​ನೆಸ್ ಸಾಬೀತುಪಡಿಸುವಂತೆ ಬಿಸಿಸಿಐ ಸೂಚಿಸಿತ್ತು. ಅದರಂತೆ ರಣಜಿ ಕ್ರಿಕೆಟ್​ನಲ್ಲಿ ಸೌರಾಷ್ಟ್ರ ಪರ ಕಣಕ್ಕಿಳಿದ ಜಡ್ಡು ತಮಿಳುನಾಡು ವಿರುದ್ಧ 7 ವಿಕೆಟ್ ಪಡೆದು ಮಿಂಚಿದ್ದರು.

ಈ ಭರ್ಜರಿ ಪ್ರದರ್ಶನದ ಫಲವಾಗಿ ಅವರು ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆದಿದ್ದರು. 5 ತಿಂಗಳುಗಳ ಬಳಿಕ ಕಂಬ್ಯಾಕ್ ಮಾಡಿದ್ದ ಜಡ್ಡು ನಾಗ್ಪುರ ಟೆಸ್ಟ್​ನಲ್ಲಿ ಒಟ್ಟು 7 ವಿಕೆಟ್ ಪಡೆದು ಮಿಂಚಿದ್ದರು. ಅಷ್ಟೇ ಅಲ್ಲದೆ ಬ್ಯಾಟಿಂಗ್​ನಲ್ಲಿ 70 ರನ್​ ಬಾರಿಸಿದ್ದರು. ಪರಿಣಾಮ ಮೊದಲ ಟೆಸ್ಟ್ ಪಂದ್ಯದ ಗೆಲುವಿನ ರೂವಾರಿಯಾಗಿ ರವೀಂದ್ರ ಜಡೇಜಾ ಮ್ಯಾನ್ ಆಫ್ ದಿ ಮ್ಯಾಚ್ ತಮ್ಮದಾಗಿಸಿಕೊಂಡಿದ್ದರು. ಅಲ್ಲಿಗೆ ಜಡೇಜಾ ಹೇಳಿದಂತೆ ಬಾತ್ ಖತಂ.

Follow Us
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!