AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಈ ವಿಶ್ವಕಪ್ ನನಗೆ ಬೇಕು: ರಾಹುಲ್ ದ್ರಾವಿಡ್

T20 World Cup 2024: ಕೋಚ್ ರಾಹುಲ್ ದ್ರಾವಿಡ್ ಅವರ ಸಾರಥ್ಯದಲ್ಲಿ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾಗೂ ಏಕದಿನ ವಿಶ್ವಕಪ್ 2023 ಫೈನಲ್​ ಆಡಿದೆ. ಈ ಎರಡೂ ಫೈನಲ್​ಗಳಲ್ಲೂ ಭಾರತ ತಂಡಕ್ಕೆ ಆಸ್ಟ್ರೇಲಿಯಾ ಸೋಲುಣಿಸಿತ್ತು. ಇದೀಗ ಟೀಮ್ ಇಂಡಿಯಾ ಮತ್ತೊಮ್ಮೆ ಫೈನಲ್​ಗೆ ಪ್ರವೇಶಿಸಿದೆ. ಈ ಬಾರಿ ಟೀಮ್ ಇಂಡಿಯಾ ಎದುರಾಳಿ ಸೌತ್ ಆಫ್ರಿಕಾ.

T20 World Cup 2024: ಈ ವಿಶ್ವಕಪ್ ನನಗೆ ಬೇಕು: ರಾಹುಲ್ ದ್ರಾವಿಡ್
Rahul Dravid
ಝಾಹಿರ್ ಯೂಸುಫ್
|

Updated on: Jun 29, 2024 | 10:53 AM

Share

T20 World Cup 2024:  ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಕಣಕ್ಕಿಳಿಯಲಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್​ ಓವಲ್ ಮೈದಾನದಲ್ಲಿ ಇಂದು (ಜೂ.29) ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅವರ ಕೊನೆಯ ಪಂದ್ಯ. ಅಂದರೆ ಈ ಪಂದ್ಯದ ಬಳಿಕ ದ್ರಾವಿಡ್ ಅವರು ಭಾರತ ತಂಡದ ಕೋಚ್ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ.

ಹೀಗಾಗಿಯೇ ಫೈನಲ್ ಪಂದ್ಯವು​ ರಾಹುಲ್ ದ್ರಾವಿಡ್ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಆಟಗಾರನಾಗಿ ದ್ರಾವಿಡ್ ಒಮ್ಮೆಯೂ ವಿಶ್ವಕಪ್ ಅನ್ನು ಎತ್ತಿ ಹಿಡಿದಿಲ್ಲ. ಇದೀಗ ಕೋಚ್ ಆಗಿ ತಮ್ಮ ಬಹುದೊಡ್ಡ ಕನಸನ್ನು ಈಡೇರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಹುಲ್ ದ್ರಾವಿಡ್, ನಾನು ಉತ್ತಮ ಕ್ರಿಕೆಟ್ ಆಡಲು ಬಯಸುತ್ತೇನೆ. ಆದರೆ ಒಬ್ಬ ವ್ಯಕ್ತಿಗಾಗಿ ಕಪ್ ಗೆಲ್ಲುವುದನ್ನು ನಾನು ಎದುರು ನೋಡುವುದಿಲ್ಲ. ಆಗಾಗಿ ನನಗೋಸ್ಕರ ವಿಶ್ವಕಪ್ ಗೆಲ್ಲಬೇಕು ಎಂಬುದನ್ನು ನಾನು ಇಲ್ಲಿ ಚರ್ಚಿಸಲು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ.

ಅವರಿಗೋಸ್ಕರ ಗೆಲ್ಲಬೇಕೆಂದು ಎಂಬುದರಲ್ಲಿ ನನಗೆ ನಿಜವಾಗಿಯೂ ನಂಬಿಕೆಯಿಲ್ಲ. ಆದರೆ ಅವರಿಗೋಸ್ಕರ ಈ ಸಲ ಗೆಲ್ಲಬೇಕೆಂಬ ಉಲ್ಲೇಖವನ್ನು ನಾನು ಇಷ್ಟಪಡುತ್ತೇನೆ. ಏಕೆಂದರೆ ‘ನೀವು ಏಕೆ ಮೌಂಟ್ ಎವರೆಸ್ಟ್ ಅನ್ನು ಏರಲು ಬಯಸುತ್ತೀರಿ?’ ಎಂದು ಕೇಳಿದ್ರೆ, ನನ್ನ ಉತ್ತರ ‘ನಾನು ಮೌಂಟ್ ಎವರೆಸ್ಟ್ ಅನ್ನು ಏರಲು ಬಯಸುತ್ತೇನೆ. ಏಕೆಂದರೆ ಅದು ಅದು ಮೌಂಟ್ ಎವರೆಸ್ಟ್. ಅತ್ಯಂತ ಎತ್ತರದಲ್ಲಿದೆ’.

ಹೀಗಾಗಿ ನಾನು ಸಹ ವಿಶ್ವಕಪ್ ಗೆಲ್ಲಲು ಬಯಸುತ್ತೇನೆ. ಏಕೆಂದರೆ ಇದು ವಿಶ್ವಕಪ್. ಅತೀ ದೊಡ್ಡ ಟ್ರೋಫಿ. ಇದು ಯಾರಿಗಾಗಿಯೂ ಅಲ್ಲ, ಇಲ್ಲಿ ನಮ್ಮ ಧ್ಯೇಯ ವಿಶ್ವಕಪ್​ನ ಗೆಲುವು ಎಂದು ರಾಹುಲ್ ದ್ರಾವಿಡ್ ಒತ್ತಿ ಹೇಳಿದ್ದಾರೆ.

ಇದಕ್ಕೂ ಮುನ್ನ ಸೋಷಿಯಲ್ ಮೀಡಿಯಾದಲ್ಲಿ #DoItForDravid ಎಂಬ ಹ್ಯಾಶ್ ಟ್ಯಾಗ್ ವೈರಲ್ ಆಗಿತ್ತು. ಅಲ್ಲದೆ ಟೀಮ್ ಇಂಡಿಯಾ ಕ್ರಿಕೆಟ್ ಪ್ರೇಮಿಗಳು ರಾಹುಲ್ ದ್ರಾವಿಡ್ ಅವರಿಗೋಸ್ಕರ ವಿಶ್ವಕಪ್ ಗೆಲ್ಲಬೇಕೆಂದು ಈ ಮೂಲಕ ಆಗ್ರಹಿಸಿದ್ದರು. ಆದರೀಗ ನನಗೋಸ್ಕರ ಗೆಲ್ಲಬೇಕೆಂದು ಬಯಸುವುದರಲ್ಲಿ ಅರ್ಥವಿಲ್ಲ. ಆದರೆ ನಮಗೆ ವಿಶ್ವಕಪ್ ಬೇಕೆಂದು ಗೆಲ್ಲಬೇಕು ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಇದನ್ನೂ ಓದಿ: Shafali Verma: ದಾಖಲೆಗಳ ಮೇಲೆ ದಾಖಲೆ ಬರೆದ ಶಫಾಲಿ ವರ್ಮಾ

ಫೈನಲ್ ಪಂದ್ಯ ಎಷ್ಟು ಗಂಟೆಗೆ ಶುರು?

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಫೈನಲ್ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ. ಬಾರ್ಬಡೋಸ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದರೆ, ಮೀಸಲು ದಿದನಾಟದಲ್ಲಿ ಪಂದ್ಯ ಮುಂದುವರೆಯಲಿದೆ. ಅಂದರೆ ಫೈನಲ್ ಪಂದ್ಯಕ್ಕೆ ಜೂನ್ 30 ಅನ್ನು ಮೀಸಲು ದಿನವಾಗಿ ನಿಗದಿ ಮಾಡಲಾಗಿದೆ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!