Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಗೆದ್ದರೂ ನಿರಾಶೆ ವ್ಯಕ್ತಪಡಿಸಿದ ರಿಯಾನ್ ಪರಾಗ್

India vs Sri Lanka: ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದ ರಿಯಾನ್ ಪರಾಗ್ 1.2 ಓವರ್​ಗಳಲ್ಲಿ 5 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಆದರೆ ಆ ಬಳಿಕ ನಡೆದ ಎರಡು ಪಂದ್ಯಗಳಲ್ಲಿ ಒಟ್ಟು 8 ಓವರ್​ಗಳನ್ನು ಎಸೆದರೂ ಒಂದೇ ಒಂದು ವಿಕೆಟ್ ಕಬಳಿಸಿಲ್ಲ. ಇನ್ನು ಬ್ಯಾಟಿಂಗ್​ನಲ್ಲಿ ಉಪಯುಕ್ತ ಕಾಣಿಕೆ ನೀಡುವಲ್ಲಿ ಯುವ ದಾಂಡಿಗ ಯಶಸ್ವಿಯಾಗಿದ್ದಾರೆ.

ಟೀಮ್ ಇಂಡಿಯಾ ಗೆದ್ದರೂ ನಿರಾಶೆ ವ್ಯಕ್ತಪಡಿಸಿದ ರಿಯಾನ್ ಪರಾಗ್
Riyan Parag
Follow us
ಝಾಹಿರ್ ಯೂಸುಫ್
|

Updated on: Jul 31, 2024 | 9:20 AM

ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 137 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 137 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಪಂದ್ಯವು ಸೂಪರ್ ಓವರ್​ನತ್ತ ಸಾಗಿತು.

ಸೂಪರ್ ಓವರ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವನ್ನು 2 ರನ್​ಗಳಿಗೆ ನಿಯಂತ್ರಿಸುವಲ್ಲಿ ವಾಷಿಂಗ್ಟನ್ ಸುಂದರ್ ಯಶಸ್ವಿಯಾದರು. ಕೇವಲ 3 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ ಮೊದಲ ಎಸೆತದಲ್ಲೇ ಫೋರ್​ ಬಾರಿಸಿ ಭಾರತಕ್ಕೆ ಗೆಲುವು ತಂದುಕೊಟ್ಟರು. ಈ ಗೆಲುವಿನೊಂದಿಗೆ ಭಾರತ ತಂಡವು 3 ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿದೆ.

ಈ ಗೆಲುವಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾದ ಯುವ ಆಲ್​ರೌಂಡರ್ ರಿಯಾನ್ ಪರಾಗ್, ನನ್ನ ಪ್ರದರ್ಶನದ ಬಗ್ಗೆ ನಿಜವಾಗಿಯೂ ನಿರಾಶೆಗೊಂಡಿದ್ದೇನೆ. ಏಕೆಂದರೆ ಬ್ಯಾಟಿಂಗ್​ ವೇಳೆ ನಾನು ಕೊನೆಯವರೆಗೂ ಬ್ಯಾಟಿಂಗ್ ಮಾಡಬೇಕಾಗಿತ್ತು. ಬಹುಶಃ ನಾನು ಔಟಾಗದಿದ್ದರೆ ಭಾರತ ತಂಡವು 160 ಗಳಿಸುತ್ತಿತ್ತು ಎಂದು ತಿಳಿಸಿದ್ದಾರೆ.

ಇದಾಗ್ಯೂ ಕಡಿಮೆ ಮೊತ್ತಗಳಿಸಿದರೂ ನಾನು ಉತ್ತಮ ಬೌಲಿಂಗ್ ಮಾಡಿದ್ದೆವು. ಬೌಲಿಂಗ್​ನಲ್ಲಿ ನನ್ನ ಪ್ರದರ್ಶನ ಖುಷಿ ನೀಡಿದೆ. ನಾನು ನನ್ನ ಪ್ಲ್ಯಾನ್​ಗಳನ್ನು ತುಂಬಾ ಸರಳವಾಗಿ ಇರಿಸಲು ಬಯಸುತ್ತೇನೆ. ಹೀಗಾಗಿಯೇ ನಾನು ಲೆಗ್-ಬ್ರೇಕ್‌ನಲ್ಲಿ ಕೆಲಸ ಮಾಡುತ್ತಿದ್ದೇನೆ.

ದೇಶೀಯ ಕ್ರಿಕೆಟ್​ನಲ್ಲಿ ಲೆಗ್ ಬ್ರೇಕ್​ ಎಸೆತಗಳನ್ನು ಪ್ರಯತ್ನಿಸಿದ್ದೆ. ಕೆಲವು ನೆಟ್ ಸೆಷನ್‌ಗಳನ್ನು ಅಭ್ಯಾಸ ಮಾಡಿದ್ದೇನೆ. ಇದೀಗ ನನ್ನ ಬೌಲಿಂಗ್ ತುಂಬಾ ಚೆನ್ನಾಗಿ ಮೂಡಿ ಬರುತ್ತಿದೆ. ನಾಯಕ ಸೂರ್ಯಕುಮಾರ್ ಯಾದವ್ ಕೂಡ ಲೆಗ್ ಬ್ರೇಕ್​ ಎಸೆಯುವಂತೆ ಸೂಚಿಸಿದ್ದರು. ಇದು ಸಹ ನನಗೆ ಖುಷಿ ನೀಡಿತು ಎಂದು ರಿಯಾನ್ ಪರಾಗ್ ಹೇಳಿದ್ದಾರೆ.

ಈ ಪಂದ್ಯದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಯಾನ್ ಪರಾಗ್ 18 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 26 ರನ್ ಕಲೆಹಾಕಿದ್ದರು. ಹಾಗೆಯೇ ಬೌಲಿಂಗ್​ನಲ್ಲಿ 4 ಓವರ್​ ಎಸೆದಿದ್ದ ಪರಾಗ್ 27 ರನ್ ನೀಡಿದರೂ ಯಾವುದೇ ವಿಕೆಟ್ ಪಡೆದಿರಲಿಲ್ಲ.

ಇದನ್ನೂ ಓದಿ: IPL 2025: RCB ತಂಡದಿಂದ ಗ್ಲೆನ್ ಮ್ಯಾಕ್ಸ್​ವೆಲ್ ಔಟ್?

ಇನ್ನು ರಿಯಾನ್ ಪರಾಗ್ ಭಾರತ ಏಕದಿನ ತಂಡದಲ್ಲೂ ಸ್ಥಾನ ಪಡೆದಿದ್ದು, ಅದರಂತೆ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪಾದಾರ್ಪಣೆ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
ಹರಪನಹಳ್ಳಿ: ಒಂದೇ ಫಾರಂನಲ್ಲಿನ ಮೂರು ಸಾವಿರ ಕೋಳಿಗಳ ಸಾವು
ಹರಪನಹಳ್ಳಿ: ಒಂದೇ ಫಾರಂನಲ್ಲಿನ ಮೂರು ಸಾವಿರ ಕೋಳಿಗಳ ಸಾವು