AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಅಭಿಮಾನಿಗಳ ಕ್ಷಮೆಯಾಚಿಸಿದ ಸ್ಮೃತಿ ಮಂಧಾನ

WPL 2025: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೂರನೇ ಆವೃತ್ತಿಯಲ್ಲಿ ಆರ್​ಸಿಬಿ ತಂಡವು ಈಗಾಗಲೇ 6 ಪಂದ್ಯಗಳನ್ನಾಡಿದೆ. ಇನ್ನುಳಿದಿರುವುದು ಕೇವಲ 2 ಮ್ಯಾಚ್ ಮಾತ್ರ. ಈ ಪಂದ್ಯಗಳಲ್ಲಿ ಆರ್​ಸಿಬಿ ಯುಪಿ ವಾರಿಯರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳನ್ನು ಎದುರಿಸಲಿದೆ. ಈ ಎರಡು ಮ್ಯಾಚ್​ಗಳು ಪ್ಲೇಆಫ್​ಗೆ ಪ್ರವೇಶಿಸಲು ಆರ್​ಸಿಬಿ ಪಾಲಿಗೆ ನಿರ್ಣಾಯಕ.

RCB ಅಭಿಮಾನಿಗಳ ಕ್ಷಮೆಯಾಚಿಸಿದ ಸ್ಮೃತಿ ಮಂಧಾನ
Smriti Mandhana
ಝಾಹಿರ್ ಯೂಸುಫ್
|

Updated on: Mar 02, 2025 | 12:53 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಾಯಲ್ ಅಭಿಮಾನಿಗಳ ಬಳಿ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಕ್ಷಮೆಯಾಚಿಸಿದ್ದಾರೆ. ಇಂತಹದೊಂದು ಕ್ಷಮಾಪಣೆಗೆ ಮುಖ್ಯ ಕಾರಣ ತಂಡದ ಕಳಪೆ ಪ್ರದರ್ಶನ. ಅದರಲ್ಲೂ ಈ ಬಾರಿ ಬೆಂಗಳೂರಿನಲ್ಲಿ ಒಂದೇ ಒಂದು ಪಂದ್ಯ ಗೆಲ್ಲದಿರುವ ಕಾರಣ ಸ್ಮೃತಿ ಮಂಧಾನ ಅಭಿಮಾನಿಗಳ ಬಳಿಕ ಕ್ಷಮಾಪಣೆ ಕೋರಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸೋತ ಬಳಿಕ ಮಾತನಾಡಿದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ, ಬೆಂಗಳೂರಿನಲ್ಲಿ ಈ ಬಾರಿ ನಮಗೆ ಒಂದೇ ಒಂದು ಪಂದ್ಯ ಗೆಲ್ಲಲು ಸಾಧ್ಯವಾಗಿಲ್ಲ. ಇದಾಗ್ಯೂ ಪ್ರತಿ ಬಾರಿ ಆರ್​ಸಿಬಿ ಅಭಿಮಾನಿಗಳು ನಮ್ಮ ಬೆಂಬಲಕ್ಕೆ ನಿಂತಿದ್ದರು. ಅದಕ್ಕಾಗಿಯೇ ಆರ್​ಸಿಬಿ ಫ್ಯಾನ್ಸ್ ವಿಶ್ವದ ಅತ್ಯುತ್ತಮ ಅಭಿಮಾನಿಗಳು ಎನಿಸಿಕೊಂಡಿರುವುದು.

ನಮ್ಮ ಸೋಲಿನ ಹೊರತಾಗಿಯೂ ಆರ್​ಸಿಬಿ ಅಭಿಮಾನಿಗಳು ತುಂಬಾ ಬೆಂಬಲ ನೀಡಿದ್ದಾರೆ. ಇದಾಗ್ಯೂ ನಮಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಒಂದು ಮ್ಯಾಚ್ ಕೂಡ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ನಾನು ಆರ್​ಸಿಬಿ ಅಭಿಮಾನಿಗಳಿಗೆ ಕ್ಷಮೆಯಾಚಿಸುತ್ತೇನೆ ಎಂದು ಸ್ಮೃತಿ ಮಂಧಾನ ಹೇಳಿದ್ದಾರೆ.

ವಡೋದರಾದಲ್ಲಿ ನಡೆದ ಈ ಬಾರಿಯ ಐಪಿಎಲ್​ನ ಮೊದಲೆರಡು ಪಂದ್ಯಗಳಲ್ಲಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆ ಬಳಿಕ ಬ್ಯಾಕ್ ಟು ಬ್ಯಾಕ್ 4 ಸೋಲುಗಳನ್ನು ಕಂಡಿದೆ. ಅದರಲ್ಲೂ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 4 ಮ್ಯಾಚ್​ಗಳಲ್ಲೂ ಮುಗ್ಗರಿಸುವ ಮೂಲಕ ನಿರಾಸೆ ಮೂಡಿಸಿದ್ದಾರೆ. ಈ ನಿರಾಸೆಯ ಕಾರಣದಿಂದಲೇ ಇದೀಗ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಅಭಿಮಾನಿಗಳ ಬಳಿ ಕ್ಷಮೆಯಾಚಿಸಿದ್ದಾರೆ.

ಇನ್ನು ಆರ್​ಸಿಬಿ ತಂಡಕ್ಕೆ ಎರಡು ಪಂದ್ಯಗಳು ಬಾಕಿಯಿದ್ದು, ಈ ಮ್ಯಾಚ್​ಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್​ಗೆ ಪ್ರವೇಶಿಸಬಹುದು. ಈ ಎರಡು ಪಂದ್ಯಗಳಲ್ಲಿ ಗೆಲುವು ದಾಖಲಿಸುವ ನಾವು ಆರ್​ಸಿಬಿ ಅಭಿಮಾನಿಗಳು ಹೆಮ್ಮೆಪಡುವಂತೆ ಮಾಡುತ್ತೇವೆ ಎಂದು ಸ್ಮೃತಿ ಮಂಧಾನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Champions Trophy 2025: ಅದೇ ನಾಲ್ಕು… ನಾಲ್ಕರಲ್ಲಿ ಎರಡು… ಹಿಸ್ಟರಿ ರಿಪೀಟ್

RCB ತನ್ನ ಮುಂದಿನ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ. ಮಾರ್ಚ್ 8 ರಂದು ನಡೆಯಲಿರುವ ಈ ಪಂದ್ಯಕ್ಕೆ ಲಕ್ನೋನ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಮಾರ್ಚ್ 11 ರಂದು ನಡೆಯಲಿರುವ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ. ಈ ಪಂದ್ಯವು ಮುಂಬೈನ ಬ್ರಬೋರ್ನ್​ ಸ್ಟೇಡಿಯಂನಲ್ಲಿ ಜರುಗಲಿದೆ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ