AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಅಭಿಮಾನಿಗಳ ಕ್ಷಮೆಯಾಚಿಸಿದ ಸ್ಮೃತಿ ಮಂಧಾನ

WPL 2025: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೂರನೇ ಆವೃತ್ತಿಯಲ್ಲಿ ಆರ್​ಸಿಬಿ ತಂಡವು ಈಗಾಗಲೇ 6 ಪಂದ್ಯಗಳನ್ನಾಡಿದೆ. ಇನ್ನುಳಿದಿರುವುದು ಕೇವಲ 2 ಮ್ಯಾಚ್ ಮಾತ್ರ. ಈ ಪಂದ್ಯಗಳಲ್ಲಿ ಆರ್​ಸಿಬಿ ಯುಪಿ ವಾರಿಯರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳನ್ನು ಎದುರಿಸಲಿದೆ. ಈ ಎರಡು ಮ್ಯಾಚ್​ಗಳು ಪ್ಲೇಆಫ್​ಗೆ ಪ್ರವೇಶಿಸಲು ಆರ್​ಸಿಬಿ ಪಾಲಿಗೆ ನಿರ್ಣಾಯಕ.

RCB ಅಭಿಮಾನಿಗಳ ಕ್ಷಮೆಯಾಚಿಸಿದ ಸ್ಮೃತಿ ಮಂಧಾನ
Smriti Mandhana
ಝಾಹಿರ್ ಯೂಸುಫ್
|

Updated on: Mar 02, 2025 | 12:53 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಾಯಲ್ ಅಭಿಮಾನಿಗಳ ಬಳಿ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಕ್ಷಮೆಯಾಚಿಸಿದ್ದಾರೆ. ಇಂತಹದೊಂದು ಕ್ಷಮಾಪಣೆಗೆ ಮುಖ್ಯ ಕಾರಣ ತಂಡದ ಕಳಪೆ ಪ್ರದರ್ಶನ. ಅದರಲ್ಲೂ ಈ ಬಾರಿ ಬೆಂಗಳೂರಿನಲ್ಲಿ ಒಂದೇ ಒಂದು ಪಂದ್ಯ ಗೆಲ್ಲದಿರುವ ಕಾರಣ ಸ್ಮೃತಿ ಮಂಧಾನ ಅಭಿಮಾನಿಗಳ ಬಳಿಕ ಕ್ಷಮಾಪಣೆ ಕೋರಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸೋತ ಬಳಿಕ ಮಾತನಾಡಿದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ, ಬೆಂಗಳೂರಿನಲ್ಲಿ ಈ ಬಾರಿ ನಮಗೆ ಒಂದೇ ಒಂದು ಪಂದ್ಯ ಗೆಲ್ಲಲು ಸಾಧ್ಯವಾಗಿಲ್ಲ. ಇದಾಗ್ಯೂ ಪ್ರತಿ ಬಾರಿ ಆರ್​ಸಿಬಿ ಅಭಿಮಾನಿಗಳು ನಮ್ಮ ಬೆಂಬಲಕ್ಕೆ ನಿಂತಿದ್ದರು. ಅದಕ್ಕಾಗಿಯೇ ಆರ್​ಸಿಬಿ ಫ್ಯಾನ್ಸ್ ವಿಶ್ವದ ಅತ್ಯುತ್ತಮ ಅಭಿಮಾನಿಗಳು ಎನಿಸಿಕೊಂಡಿರುವುದು.

ನಮ್ಮ ಸೋಲಿನ ಹೊರತಾಗಿಯೂ ಆರ್​ಸಿಬಿ ಅಭಿಮಾನಿಗಳು ತುಂಬಾ ಬೆಂಬಲ ನೀಡಿದ್ದಾರೆ. ಇದಾಗ್ಯೂ ನಮಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಒಂದು ಮ್ಯಾಚ್ ಕೂಡ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ನಾನು ಆರ್​ಸಿಬಿ ಅಭಿಮಾನಿಗಳಿಗೆ ಕ್ಷಮೆಯಾಚಿಸುತ್ತೇನೆ ಎಂದು ಸ್ಮೃತಿ ಮಂಧಾನ ಹೇಳಿದ್ದಾರೆ.

ವಡೋದರಾದಲ್ಲಿ ನಡೆದ ಈ ಬಾರಿಯ ಐಪಿಎಲ್​ನ ಮೊದಲೆರಡು ಪಂದ್ಯಗಳಲ್ಲಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆ ಬಳಿಕ ಬ್ಯಾಕ್ ಟು ಬ್ಯಾಕ್ 4 ಸೋಲುಗಳನ್ನು ಕಂಡಿದೆ. ಅದರಲ್ಲೂ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 4 ಮ್ಯಾಚ್​ಗಳಲ್ಲೂ ಮುಗ್ಗರಿಸುವ ಮೂಲಕ ನಿರಾಸೆ ಮೂಡಿಸಿದ್ದಾರೆ. ಈ ನಿರಾಸೆಯ ಕಾರಣದಿಂದಲೇ ಇದೀಗ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಅಭಿಮಾನಿಗಳ ಬಳಿ ಕ್ಷಮೆಯಾಚಿಸಿದ್ದಾರೆ.

ಇನ್ನು ಆರ್​ಸಿಬಿ ತಂಡಕ್ಕೆ ಎರಡು ಪಂದ್ಯಗಳು ಬಾಕಿಯಿದ್ದು, ಈ ಮ್ಯಾಚ್​ಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್​ಗೆ ಪ್ರವೇಶಿಸಬಹುದು. ಈ ಎರಡು ಪಂದ್ಯಗಳಲ್ಲಿ ಗೆಲುವು ದಾಖಲಿಸುವ ನಾವು ಆರ್​ಸಿಬಿ ಅಭಿಮಾನಿಗಳು ಹೆಮ್ಮೆಪಡುವಂತೆ ಮಾಡುತ್ತೇವೆ ಎಂದು ಸ್ಮೃತಿ ಮಂಧಾನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Champions Trophy 2025: ಅದೇ ನಾಲ್ಕು… ನಾಲ್ಕರಲ್ಲಿ ಎರಡು… ಹಿಸ್ಟರಿ ರಿಪೀಟ್

RCB ತನ್ನ ಮುಂದಿನ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ. ಮಾರ್ಚ್ 8 ರಂದು ನಡೆಯಲಿರುವ ಈ ಪಂದ್ಯಕ್ಕೆ ಲಕ್ನೋನ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಮಾರ್ಚ್ 11 ರಂದು ನಡೆಯಲಿರುವ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ. ಈ ಪಂದ್ಯವು ಮುಂಬೈನ ಬ್ರಬೋರ್ನ್​ ಸ್ಟೇಡಿಯಂನಲ್ಲಿ ಜರುಗಲಿದೆ.

Follow Us
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ