AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IBSA ವರ್ಲ್ಡ್ ಗೇಮ್ಸ್​ನಲ್ಲಿ ಭಾರತ ಮಹಿಳಾ ಅಂಧರ ಕ್ರಿಕೆಟ್ ತಂಡ ಚಾಂಪಿಯನ್ಸ್​

IBSA World Games 2023: ಈ ಸುಲಭ ಗುರಿಯನ್ನು ಬೆನ್ನತ್ತಿದ ಭಾರತ ತಂಡದ ಮಹಿಳಾ ಆಟಗಾರ್ತಿಯರು ಅದ್ಭುತ ಪ್ರದರ್ಶನ ನೀಡಿದರು. ಪರಿಣಾಮ ಕೇವಲ 3.3 ಓವರ್​ಗಳಲ್ಲಿ ಭಾರತ ತಂಡವು 1 ವಿಕೆಟ್ ಕಳೆದುಕೊಂಡು 43 ರನ್​ಗಳಿಸಿ  9 ವಿಕೆಟ್​ಗಳ ಅಮೋಘ ಗೆಲುವನ್ನು ತನ್ನದಾಗಿಸಿಕೊಂಡಿದೆ.

IBSA ವರ್ಲ್ಡ್ ಗೇಮ್ಸ್​ನಲ್ಲಿ ಭಾರತ ಮಹಿಳಾ ಅಂಧರ ಕ್ರಿಕೆಟ್ ತಂಡ ಚಾಂಪಿಯನ್ಸ್​
Team India
TV9 Web
| Edited By: |

Updated on:Aug 26, 2023 | 8:02 PM

Share

ಇಂಗ್ಲೆಂಡ್​ನ ಎಡ್ಜ್​ಬಾಸ್ಟನ್​ನಲ್ಲಿ  ನಡೆದ ಇಂಟರ್ನ್ಯಾಷನಲ್ ಬ್ಲೈಂಡ್ ಸ್ಪೋರ್ಟ್ ಫೆಡರೇಶನ್ (IBSA) ವರ್ಲ್ಡ್ ಗೇಮ್ಸ್​ನ ಮಹಿಳಾ ಅಂಧರ ಕ್ರಿಕೆಟ್​ ಫೈನಲ್​ನಲ್ಲಿ ಭರ್ಜರಿ ಜಯ ಸಾಧಿಸಿ ಭಾರತೀಯ ವನಿತೆಯರು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ. ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 9 ವಿಕೆಟ್​ಗಳಿಂದ  ಗೆಲ್ಲುವ ಮೂಲಕ ಭಾರತ ತಂಡ ಈ ಸಾಧನೆ ಮಾಡಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ VI ಮಹಿಳಾ ತಂಡ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 114 ರನ್​ ಕಲೆಹಾಕಿತು. ದ್ವಿತೀಯ ಇನಿಂಗ್ಸ್​ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು 9 ಓವರ್​ಗಳಿಗೆ ಸೀಮಿತಗೊಳಿಸಲಾಯಿತು. ಅಲ್ಲದೆ ಭಾರತ VI ಮಹಿಳಾ ತಂಡಕ್ಕೆ 9 ಓವರ್​ಗಳಲ್ಲಿ 43 ರನ್​ಗಳ ಗುರಿ ನೀಡಲಾಗಿತ್ತು.

ಈ ಸುಲಭ ಗುರಿಯನ್ನು ಬೆನ್ನತ್ತಿದ ಭಾರತ ತಂಡದ ಮಹಿಳಾ ಆಟಗಾರ್ತಿಯರು ಅದ್ಭುತ ಪ್ರದರ್ಶನ ನೀಡಿದರು. ಪರಿಣಾಮ ಕೇವಲ 3.3 ಓವರ್​ಗಳಲ್ಲಿ ಭಾರತ ತಂಡವು 1 ವಿಕೆಟ್ ಕಳೆದುಕೊಂಡು 43 ರನ್​ಗಳಿಸಿ,  9 ವಿಕೆಟ್​ಗಳ ಅಮೋಘ ಗೆಲುವನ್ನು ತನ್ನದಾಗಿಸಿಕೊಂಡಿದೆ.

ಈ ಮೂಲಕ ಇಂಟರ್ನ್ಯಾಷನಲ್ ಬ್ಲೈಂಡ್ ಸ್ಪೋರ್ಟ್ ಫೆಡರೇಶನ್ (IBSA) ವರ್ಲ್ಡ್ ಗೇಮ್ಸ್​ನ ಅಂಧರ ಕ್ರಿಕೆಟ್​ನಲ್ಲಿ ಭಾರತ ಮಹಿಳಾ ತಂಡವು​ ಐತಿಹಾಸಿಕ ಸಾಧನೆ ಮಾಡಿದೆ.

Published On - 7:06 pm, Sat, 26 August 23

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ