T20 World Cup 2024: ಟಿ20 ವಿಶ್ವಕಪ್‌ನಲ್ಲಿ ದಿನೇಶ್ ಕಾರ್ತಿಕ್ ದರ್ಬಾರ್ ಶುರು..!

T20 World Cup 2024: ಮುಂಬರುವ ಟಿ20 ವಿಶ್ವಕಪ್​ನಲ್ಲಿ ವೀಕ್ಷಕ ವಿವರಣೆಗಾರರ ಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆ ಮಾಡಿದೆ. ಈ ಕಾಮೆಂಟರಿ ಪ್ಯಾನೆಲ್‌ನಲ್ಲಿ 40 ಅನುಭವಿಗಳು ಸ್ಥಾನ ಪಡೆದಿದ್ದಾರೆ. ಇದರಲ್ಲಿ ನಾಲ್ವರು ಮಾಜಿ ಟೀಂ ಇಂಡಿಯಾ ಆಟಗಾರರು ಸ್ಥಾನ ಪಡೆದಿದ್ದಾರೆ.

T20 World Cup 2024: ಟಿ20 ವಿಶ್ವಕಪ್‌ನಲ್ಲಿ ದಿನೇಶ್ ಕಾರ್ತಿಕ್ ದರ್ಬಾರ್ ಶುರು..!
ಟಿ20 ವಿಶ್ವಕಪ್ 2024
Follow us
|

Updated on: May 24, 2024 | 6:08 PM

ಮುಂಬರುವ ಟಿ20 ವಿಶ್ವಕಪ್​ನಲ್ಲಿ (T20 World Cup 2024) ವೀಕ್ಷಕ ವಿವರಣೆಗಾರರ ಪಟ್ಟಿಯನ್ನು ಐಸಿಸಿ (ICC) ಇಂದು ಬಿಡುಗಡೆ ಮಾಡಿದೆ. ಈ ಕಾಮೆಂಟರಿ ಪ್ಯಾನೆಲ್‌ನಲ್ಲಿ 40 ಅನುಭವಿಗಳು ಸ್ಥಾನ ಪಡೆದಿದ್ದಾರೆ. ಇದರಲ್ಲಿ ನಾಲ್ವರು ಮಾಜಿ ಟೀಂ ಇಂಡಿಯಾ (Team India) ಆಟಗಾರರು ಸ್ಥಾನ ಪಡೆದಿದ್ದಾರೆ. ವಿಶೇಷವೆಂದರೆ ಈಗಷ್ಟೇ ಐಪಿಎಲ್​ಗೆ (IPL) ವಿದಾಯ ಹೇಳಿದ ಆರ್​ಸಿಬಿಯ (RCB) ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ದಿನೇಶ್ ಕಾರ್ತಿಕ್ (Dinesh Karthik) ಕೂಡ ವೀಕ್ಷಕ ವಿವರಣೆಗಾರನಾಗಿ ಟಿ20 ವಿಶ್ವಕಪ್​ನಲ್ಲಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಇವರನ್ನು ಹೊರತುಪಡಿಸಿ ಲೆಜೆಂಡರಿ ವೀಕ್ಷಕ ವಿವರಣೆಗಾರರಾದ ರವಿಶಾಸ್ತ್ರಿ, ನಾಸರ್ ಹುಸೇನ್, ಇಯಾನ್ ಸ್ಮಿತ್, ಮೆಲ್ ಜೋನ್ಸ್, ಹರ್ಷಾ ಭೋಗ್ಲೆ ಮತ್ತು ಇಯಾನ್ ಬಿಷಪ್ ಕೂಡ ಈ ಪಟ್ಟಿಯಲ್ಲಿದ್ದಾರೆ.

ವೀಕ್ಷಕ ವಿವರಣೆಗಾರರ ಪಟ್ಟಿ ರಿಲೀಸ್

ಭಾರತದ ಕಾಲಮಾನದ ಪ್ರಕಾರ ಜೂನ್ 2 ರಿಂದ ವಿಶ್ವಕಪ್ ಆರಂಭವಾಗಲಿದೆ. ಮೊದಲ ಪಂದ್ಯ ಅಮೆರಿಕ ಮತ್ತು ಕೆನಡಾ ನಡುವೆ ನಡೆಯಲಿದೆ. ಈ ಬಾರಿಯ ವಿಶ್ವಕಪ್ ಅನ್ನು ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸುತ್ತಿವೆ. ಟೂರ್ನಿಯ ಆರಂಭಿಕ ಪಂದ್ಯಗಳು ಅಮೆರಿಕದಲ್ಲಿ ನಡೆಯಲಿವೆ. ಈ ಬಾರಿ, ಮಾಜಿ ಪುರುಷರ ಮತ್ತು ಮಹಿಳಾ ಟಿ 20 ವಿಶ್ವಕಪ್ ಚಾಂಪಿಯನ್‌ಗಳಾದ ದಿನೇಶ್ ಕಾರ್ತಿಕ್, ಎಬೊನಿ ರೈನ್‌ಫೋರ್ಡ್-ಬ್ರೆಂಟ್, ಸ್ಯಾಮ್ಯುಯೆಲ್ ಬದ್ರಿ, ಕಾರ್ಲೋಸ್ ಬ್ರಾಥ್‌ವೈಟ್, ಸ್ಟೀವ್ ಸ್ಮಿತ್, ಆರೋನ್ ಫಿಂಚ್ ಮತ್ತು ಲಿಸಾ ಸ್ಥಾಲೇಕರ್ ಅವರ ಧ್ವನಿ ಪಂದ್ಯಾವಳಿಯಲ್ಲಿ ಪಂದ್ಯದುದ್ದಕ್ಕೂ ಕೇಳಿಬರಲಿದೆ.

ನಾಲ್ವರು ಭಾರತೀಯರಿಗೆ ಸ್ಥಾನ

ಟಿ20 ವಿಶ್ವಕಪ್‌ನ ಕಾಮೆಂಟರಿ ಪ್ಯಾನೆಲ್‌ನಲ್ಲಿ ನಾಲ್ವರು ಭಾರತೀಯರಾದ ರವಿಶಾಸ್ತ್ರಿ, ಸುನಿಲ್ ಗವಾಸ್ಕರ್, ಹರ್ಷಾ ಭೋಗ್ಲೆ ಮತ್ತು ದಿನೇಶ್ ಕಾರ್ತಿಕ್ ಇದ್ದಾರೆ. ಇತ್ತೀಚೆಗಷ್ಟೇ ಐಪಿಎಲ್‌ನಿಂದ ನಿವೃತ್ತರಾದ ದಿನೇಶ್ ಕಾರ್ತಿಕ್ ಈಗ ಟಿ20 ವಿಶ್ವಕಪ್‌ನಲ್ಲಿ ಕಾಮೆಂಟ್ ಮಾಡಲಿದ್ದಾರೆ.

ಮಾಜಿ ದಂತಕಥೆಗಳ ಉಪಸ್ಥಿತಿ

ಇವರನ್ನು ಹೊರತುಪಡಿಸಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್, ಸುನಿಲ್ ಗವಾಸ್ಕರ್, ಮ್ಯಾಥ್ಯೂ ಹೇಡನ್, ರಮಿಜ್ ರಾಜಾ, ಇಯಾನ್ ಮಾರ್ಗನ್, ಟಾಮ್ ಮೂಡಿ ಮತ್ತು ವಾಸಿಂ ಅಕ್ರಮ್ ಕೂಡ ಮುಂಬರುವ ಪಂದ್ಯಾವಳಿಯ ಬಗ್ಗೆ ತಮ್ಮ ಪರಿಣಿತ ವಿಶ್ಲೇಷಣೆಯನ್ನು ನೀಡಲಿದ್ದಾರೆ. ಅಮೇರಿಕನ್ ಕಾಮೆಂಟೇಟರ್ ಜೇಮ್ಸ್ ಒ’ಬ್ರೇನ್ ಕೂಡ ಕಾಮೆಂಟ್ ಮಾಡುವುದನ್ನು ಕಾಣಬಹುದು.

ಕಾಮೆಂಟರಿ ಪ್ಯಾನೆಲ್‌ನಲ್ಲಿರುವ ಇತರ ದೊಡ್ಡ ಹೆಸರುಗಳಲ್ಲಿ ಡೇಲ್ ಸ್ಟೇನ್, ಗ್ರೇಮ್ ಸ್ಮಿತ್, ಮೈಕೆಲ್ ಅಥರ್ಟನ್, ವಕಾರ್ ಯೂನಿಸ್, ಸೈಮನ್ ಡೌಲ್, ಶಾನ್ ಪೊಲಾಕ್, ಕೇಟೀ ಮಾರ್ಟಿನ್, ಎಂಪುಮೆಲೆಲೊ ಎಂಬಾಂಗ್ವಾ, ನಟಾಲಿ ಜರ್ಮನೋಸ್, ಡ್ಯಾನಿ ಮಾರಿಸನ್, ಅಲಿಸನ್ ಮಿಚೆಲ್, ಅಲನ್ ವಿಲ್ಕಿನ್ಸ್. ಬ್ರಿಯಾನ್ ಮುರ್ಗಟ್ರಾಯ್ಡ್, ಮೈಕ್ ಹೈಸ್ಮನ್, ಇಯಾನ್ ವಾರ್ಡ್, ಅಥರ್ ಅಲಿ ಖಾನ್, ರಸೆಲ್ ಅರ್ನಾಲ್ಡ್, ನಿಯಾಲ್ ಒ’ಬ್ರೇನ್, ಕ್ಲೈವ್ ನಾಯ್ಡು, ಡ್ಯಾರೆನ್ ಗಂಗಾ ಕೂಡ ಸೇರಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ