AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಪಂದ್ಯದ ವೇಳೆ ಪಾಕಿಸ್ತಾನದ ಹೆಸರಿಲ್ಲ; ಐಸಿಸಿ ಸ್ಪಷ್ಟನೆ ನೀಡಿದರೂ ಖ್ಯಾತೆ ತೆಗೆದ ಪಿಸಿಬಿ

Champions Trophy Logo Controversy: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಪಾಕಿಸ್ತಾನದ ಹೆಸರಿಲ್ಲದ ಲೋಗೋ ಪ್ರದರ್ಶನಗೊಂಡಿದ್ದಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಐಸಿಸಿಯನ್ನು ಪ್ರಶ್ನಿಸಿದೆ. ಐಸಿಸಿ ತಾಂತ್ರಿಕ ದೋಷ ಎಂದು ಸ್ಪಷ್ಟನೆ ನೀಡಿದೆ. ಆದರೆ ಪಿಸಿಬಿ ಅಸಮಾಧಾನ ವ್ಯಕ್ತಪಡಿಸಿದ್ದು, ದುಬೈನಲ್ಲಿ ನಡೆಯುವ ಎಲ್ಲಾ ಪಂದ್ಯಗಳಲ್ಲಿ ಪಾಕಿಸ್ತಾನದ ಹೆಸರುಳ್ಳ ಲೋಗೋ ಬಳಸುವುದಾಗಿ ಐಸಿಸಿ ಭರವಸೆ ನೀಡಿದೆ.

ಭಾರತದ ಪಂದ್ಯದ ವೇಳೆ ಪಾಕಿಸ್ತಾನದ ಹೆಸರಿಲ್ಲ; ಐಸಿಸಿ ಸ್ಪಷ್ಟನೆ ನೀಡಿದರೂ ಖ್ಯಾತೆ ತೆಗೆದ ಪಿಸಿಬಿ
ಚಾಂಪಿಯನ್ಸ್ ಟ್ರೋಫಿ
ಪೃಥ್ವಿಶಂಕರ
|

Updated on:Feb 22, 2025 | 4:42 PM

Share

ಗುರುವಾರ ದುಬೈನಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಚಾಂಪಿಯನ್ಸ್ ಟ್ರೋಫಿ ಪಂದ್ಯದ ನೇರ ಪ್ರಸಾರದ ಸಂದರ್ಭದಲ್ಲಿ ತೋರಿಸಲಾದ ಟೂರ್ನಮೆಂಟ್ ಲೋಗೋದಲ್ಲಿ ದೇಶದ ಹೆಸರು ಇಲ್ಲದಿರುವ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ, ಐಸಿಸಿ ಬಳಿ ವಿವರಣೆ ಕೇಳಿದೆ. ವಾಸ್ತವವಾಗಿ ಪಂದ್ಯ ಮುಗಿದ ಬಳಿಕವೇ ಐಸಿಸಿ ಈ ಲೋಪದ ಬಗ್ಗೆ ವಿವರಣೆ ನೀಡಿತ್ತು. ಆದಾಗ್ಯೂ ತನ್ನ ಬೆಳೆ ಬೇಯಿಸಿಕೊಳ್ಳುವುದನ್ನು ಮುಂದುವರೆಸಿರುವ ಪಿಸಿಬಿ, ಐಸಿಸಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಮೂಲಗಳ ಪ್ರಕಾರ, ಈಗಾಗಲೇ ಐಸಿಸಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ದುಬೈನಲ್ಲಿ ನಡೆಯುವ ಎಲ್ಲಾ ಪಂದ್ಯಗಳಲ್ಲಿ ಪಾಕಿಸ್ತಾನದ ಹೆಸರಿರುವ ಲೋಗೋವನ್ನು ಬಳಸುವುದಾಗಿ ಭರವಸೆ ನೀಡಿದೆ.

ಐಸಿಸಿ ನೀಡಿದ್ದ ವಿವರಣೆಯಲ್ಲಿ ಏನಿತ್ತು?

ಭಾರತ-ಬಾಂಗ್ಲಾದೇಶ ಪಂದ್ಯದಲ್ಲಿ ಚಾಂಪಿಯನ್ಸ್ ಟ್ರೋಫಿ ಲೋಗೋ ಜೊತೆಗೆ ಪಾಕಿಸ್ತಾನದ ಹೆಸರು ಕಾಣಿಸದಿರುವ ಬಗ್ಗೆ ಐಸಿಸಿ ನೀಡಿದ ಸ್ಪಷ್ಟನೆಯಲ್ಲಿ, ತಾಂತ್ರಿಕ ದೋಷದಿಂದ ಈ ಲೋಪ ಉಂಟಾಗಿದೆ. ಭಾರತ-ಬಾಂಗ್ಲಾದೇಶ ಪಂದ್ಯದ ವೇಳೆ ಗ್ರಾಫಿಕ್ಸ್ ಸಂಬಂಧಿತ ಸಮಸ್ಯೆಯಿಂದಾಗಿ ಪಾಕಿಸ್ತಾನದ ಹೆಸರನ್ನು ಲೋಗೋದೊಂದಿಗೆ ಹಾಕಲು ಸಾಧ್ಯವಾಗಿರಲಿಲ್ಲ. ಆದರೆ ದುಬೈನಲ್ಲಿ ನಡೆಯುವ ಮುಂದಿನ ಎಲ್ಲಾ ಪಂದ್ಯಗಳಲ್ಲಿ ಪಾಕಿಸ್ತಾನದ ಹೆಸರು ಲೋಗೋದಲ್ಲಿ ಗೋಚರಿಸುತ್ತದೆ ಎಂದು ಐಸಿಸಿ ವಕ್ತಾರರು ಭರವಸೆ ನೀಡಿದ್ದರು.

ವಿವಾದಗಳು ಇದೇ ಮೊದಲಲ್ಲ

ವಾಸ್ತವವಾಗಿ ಚಾಂಪಿಯನ್ಸ್ ಟ್ರೋಫಿಗೆ ಸಂಬಂಧಿಸಿದಂತೆ ಭಾರತ ಹಾಗೂ ಪಾಕಿಸ್ತಾನ ನಡುವೆ ವಿವಾದ ಉಂಟಾಗಿರುವುದು ಇದೇ ಮೊದಲಲ್ಲ. ಟೂರ್ನಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಭಾರತ ಸರ್ಕಾರ ಅನುಮತಿ ನೀಡಲಿಲ್ಲ. ಹೀಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿರುವುದನ್ನೇ ಗಾಳವನ್ನಾಗಿ ಮಾಡಿಕೊಂಡಿದ್ದ ಪಿಸಿಬಿ, ಐಸಿಸಿ ಬಳಿ ತಾನು ಕೂಡ ಕೆಲವು ಷರತ್ತುಗಳನ್ನು ಮುಂದಿರಿಸಿತ್ತು.

ಐಸಿಸಿ ಕೂಡ ಅದಕ್ಕೆ ಒಪ್ಪಿಗೆ ಸೂಚಿಸಿತ್ತು. ಆ ಬಳಿಕ ಟೀಂ ಇಂಡಿಯಾ ಜೆರ್ಸಿಯಲ್ಲಿ ಪಾಕಿಸ್ತಾನದ ಹೆಸರನ್ನು ಮುದ್ರಿಸುತ್ತಿಲ್ಲ ಎಂಬುದನ್ನೇ ಪಾಕ್ ಮೀಡಿಯಾಗಳು ದೊಡ್ಡ ವಿವಾದವನ್ನಾಗಿಸಿದ್ದವು. ಆದರೆ ಇದಕ್ಕೆ ತಕ್ಕ ತಿರುಗೇಟು ನೀಡಿದ್ದ ಬಿಸಿಸಿಐ, ನಾವು ಐಸಿಸಿ ನಿಯಮಗಳಿಗೆ ಬದ್ಧರಾಗಿದ್ದೇವೆ ಎಂದಿತ್ತು. ಇದೀಗ ಲೋಗೋದಲ್ಲಿ ಹೆಸರಿಲ್ಲದ್ದಿರುವುದಕ್ಕೆ ಐಸಿಸಿ ಸ್ಪಷ್ಟನೆ ನೀಡಿದರೂ ಪಿಸಿಬಿಗೆ ಮಾತ್ರ ಸಮಾಧಾನವಾದಂತೆ ಕಾಣುತ್ತಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:41 pm, Sat, 22 February 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ