AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಪಂದ್ಯದ ವೇಳೆ ಪಾಕಿಸ್ತಾನದ ಹೆಸರಿಲ್ಲ; ಐಸಿಸಿ ಸ್ಪಷ್ಟನೆ ನೀಡಿದರೂ ಖ್ಯಾತೆ ತೆಗೆದ ಪಿಸಿಬಿ

Champions Trophy Logo Controversy: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಪಾಕಿಸ್ತಾನದ ಹೆಸರಿಲ್ಲದ ಲೋಗೋ ಪ್ರದರ್ಶನಗೊಂಡಿದ್ದಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಐಸಿಸಿಯನ್ನು ಪ್ರಶ್ನಿಸಿದೆ. ಐಸಿಸಿ ತಾಂತ್ರಿಕ ದೋಷ ಎಂದು ಸ್ಪಷ್ಟನೆ ನೀಡಿದೆ. ಆದರೆ ಪಿಸಿಬಿ ಅಸಮಾಧಾನ ವ್ಯಕ್ತಪಡಿಸಿದ್ದು, ದುಬೈನಲ್ಲಿ ನಡೆಯುವ ಎಲ್ಲಾ ಪಂದ್ಯಗಳಲ್ಲಿ ಪಾಕಿಸ್ತಾನದ ಹೆಸರುಳ್ಳ ಲೋಗೋ ಬಳಸುವುದಾಗಿ ಐಸಿಸಿ ಭರವಸೆ ನೀಡಿದೆ.

ಭಾರತದ ಪಂದ್ಯದ ವೇಳೆ ಪಾಕಿಸ್ತಾನದ ಹೆಸರಿಲ್ಲ; ಐಸಿಸಿ ಸ್ಪಷ್ಟನೆ ನೀಡಿದರೂ ಖ್ಯಾತೆ ತೆಗೆದ ಪಿಸಿಬಿ
ಚಾಂಪಿಯನ್ಸ್ ಟ್ರೋಫಿ
Follow us
ಪೃಥ್ವಿಶಂಕರ
|

Updated on:Feb 22, 2025 | 4:42 PM

ಗುರುವಾರ ದುಬೈನಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಚಾಂಪಿಯನ್ಸ್ ಟ್ರೋಫಿ ಪಂದ್ಯದ ನೇರ ಪ್ರಸಾರದ ಸಂದರ್ಭದಲ್ಲಿ ತೋರಿಸಲಾದ ಟೂರ್ನಮೆಂಟ್ ಲೋಗೋದಲ್ಲಿ ದೇಶದ ಹೆಸರು ಇಲ್ಲದಿರುವ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ, ಐಸಿಸಿ ಬಳಿ ವಿವರಣೆ ಕೇಳಿದೆ. ವಾಸ್ತವವಾಗಿ ಪಂದ್ಯ ಮುಗಿದ ಬಳಿಕವೇ ಐಸಿಸಿ ಈ ಲೋಪದ ಬಗ್ಗೆ ವಿವರಣೆ ನೀಡಿತ್ತು. ಆದಾಗ್ಯೂ ತನ್ನ ಬೆಳೆ ಬೇಯಿಸಿಕೊಳ್ಳುವುದನ್ನು ಮುಂದುವರೆಸಿರುವ ಪಿಸಿಬಿ, ಐಸಿಸಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಮೂಲಗಳ ಪ್ರಕಾರ, ಈಗಾಗಲೇ ಐಸಿಸಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ದುಬೈನಲ್ಲಿ ನಡೆಯುವ ಎಲ್ಲಾ ಪಂದ್ಯಗಳಲ್ಲಿ ಪಾಕಿಸ್ತಾನದ ಹೆಸರಿರುವ ಲೋಗೋವನ್ನು ಬಳಸುವುದಾಗಿ ಭರವಸೆ ನೀಡಿದೆ.

ಐಸಿಸಿ ನೀಡಿದ್ದ ವಿವರಣೆಯಲ್ಲಿ ಏನಿತ್ತು?

ಭಾರತ-ಬಾಂಗ್ಲಾದೇಶ ಪಂದ್ಯದಲ್ಲಿ ಚಾಂಪಿಯನ್ಸ್ ಟ್ರೋಫಿ ಲೋಗೋ ಜೊತೆಗೆ ಪಾಕಿಸ್ತಾನದ ಹೆಸರು ಕಾಣಿಸದಿರುವ ಬಗ್ಗೆ ಐಸಿಸಿ ನೀಡಿದ ಸ್ಪಷ್ಟನೆಯಲ್ಲಿ, ತಾಂತ್ರಿಕ ದೋಷದಿಂದ ಈ ಲೋಪ ಉಂಟಾಗಿದೆ. ಭಾರತ-ಬಾಂಗ್ಲಾದೇಶ ಪಂದ್ಯದ ವೇಳೆ ಗ್ರಾಫಿಕ್ಸ್ ಸಂಬಂಧಿತ ಸಮಸ್ಯೆಯಿಂದಾಗಿ ಪಾಕಿಸ್ತಾನದ ಹೆಸರನ್ನು ಲೋಗೋದೊಂದಿಗೆ ಹಾಕಲು ಸಾಧ್ಯವಾಗಿರಲಿಲ್ಲ. ಆದರೆ ದುಬೈನಲ್ಲಿ ನಡೆಯುವ ಮುಂದಿನ ಎಲ್ಲಾ ಪಂದ್ಯಗಳಲ್ಲಿ ಪಾಕಿಸ್ತಾನದ ಹೆಸರು ಲೋಗೋದಲ್ಲಿ ಗೋಚರಿಸುತ್ತದೆ ಎಂದು ಐಸಿಸಿ ವಕ್ತಾರರು ಭರವಸೆ ನೀಡಿದ್ದರು.

ವಿವಾದಗಳು ಇದೇ ಮೊದಲಲ್ಲ

ವಾಸ್ತವವಾಗಿ ಚಾಂಪಿಯನ್ಸ್ ಟ್ರೋಫಿಗೆ ಸಂಬಂಧಿಸಿದಂತೆ ಭಾರತ ಹಾಗೂ ಪಾಕಿಸ್ತಾನ ನಡುವೆ ವಿವಾದ ಉಂಟಾಗಿರುವುದು ಇದೇ ಮೊದಲಲ್ಲ. ಟೂರ್ನಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಭಾರತ ಸರ್ಕಾರ ಅನುಮತಿ ನೀಡಲಿಲ್ಲ. ಹೀಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿರುವುದನ್ನೇ ಗಾಳವನ್ನಾಗಿ ಮಾಡಿಕೊಂಡಿದ್ದ ಪಿಸಿಬಿ, ಐಸಿಸಿ ಬಳಿ ತಾನು ಕೂಡ ಕೆಲವು ಷರತ್ತುಗಳನ್ನು ಮುಂದಿರಿಸಿತ್ತು.

ಐಸಿಸಿ ಕೂಡ ಅದಕ್ಕೆ ಒಪ್ಪಿಗೆ ಸೂಚಿಸಿತ್ತು. ಆ ಬಳಿಕ ಟೀಂ ಇಂಡಿಯಾ ಜೆರ್ಸಿಯಲ್ಲಿ ಪಾಕಿಸ್ತಾನದ ಹೆಸರನ್ನು ಮುದ್ರಿಸುತ್ತಿಲ್ಲ ಎಂಬುದನ್ನೇ ಪಾಕ್ ಮೀಡಿಯಾಗಳು ದೊಡ್ಡ ವಿವಾದವನ್ನಾಗಿಸಿದ್ದವು. ಆದರೆ ಇದಕ್ಕೆ ತಕ್ಕ ತಿರುಗೇಟು ನೀಡಿದ್ದ ಬಿಸಿಸಿಐ, ನಾವು ಐಸಿಸಿ ನಿಯಮಗಳಿಗೆ ಬದ್ಧರಾಗಿದ್ದೇವೆ ಎಂದಿತ್ತು. ಇದೀಗ ಲೋಗೋದಲ್ಲಿ ಹೆಸರಿಲ್ಲದ್ದಿರುವುದಕ್ಕೆ ಐಸಿಸಿ ಸ್ಪಷ್ಟನೆ ನೀಡಿದರೂ ಪಿಸಿಬಿಗೆ ಮಾತ್ರ ಸಮಾಧಾನವಾದಂತೆ ಕಾಣುತ್ತಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:41 pm, Sat, 22 February 25

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ