AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಧಶತಕದ ಬಳಿಕ 26 ಎಸೆತಗಳಲ್ಲಿ ಶತಕ ಪೂರೈಸಿದ ಯುಎಸ್​ಎ ಬ್ಯಾಟ್ಸ್​ಮನ್

ICC Men Cricket World Cup League 2: ವಿಶೇಷ ಎಂದರೆ ಇದು ಜೋನ್ಸ್ ಅವರ ವೃತ್ತಿಜೀವನದ ಮೊದಲ ಶತಕವಾಗಿದೆ. ಈ ಶತಕದ ಇನ್ನಿಂಗ್ಸ್‌ನ ನೆರವಿನಿಂದ ಯುಎಸ್ಎ ನಿಗದಿತ 50 ಓವರ್‌ನಲ್ಲಿ 8 ವಿಕೆಟ್‌ಗೆ 295 ರನ್ ಗಳಿಸಿತು.

ಅರ್ಧಶತಕದ ಬಳಿಕ 26 ಎಸೆತಗಳಲ್ಲಿ ಶತಕ ಪೂರೈಸಿದ ಯುಎಸ್​ಎ ಬ್ಯಾಟ್ಸ್​ಮನ್
Aaron Jones
TV9 Web
| Edited By: |

Updated on: Aug 14, 2022 | 1:04 PM

Share

ಐಸಿಸಿ ಪುರುಷರ ಕ್ರಿಕೆಟ್ ವರ್ಲ್ಡ್ ಲೀಗ್-2 ರ ಪಂದ್ಯದಲ್ಲಿ USA ಬ್ಯಾಟ್ಸ್‌ಮನ್ ಆರೋನ್ ಜೋನ್ಸ್ ಸ್ಕಾಟ್ಲೆಂಡ್ ವಿರುದ್ದ ಸ್ಪೋಟಕ ಶತಕ ಸಿಡಿಸಿ ಮೈದಾನದಲ್ಲಿ ಸಂಚಲನ ಸೃಷ್ಟಿಸಿದರು. ಮೊದಲು ಬ್ಯಾಟ್ ಮಾಡಿದ ಅಮೇರಿಕ ತಂಡದ ಪರ ಜೋನ್ಸ್ 50 ಎಸೆತಗಳಲ್ಲಿ 56 ರನ್ ಗಳಿಸಿದರು. ಅರ್ಧಶತಕದ ಬಳಿಕ ಬ್ಯಾಟಿಂಗ್ ವರಸೆ ಬದಲಿಸಿದ ಜೋನ್ಸ್​ ಸಿಡಿಲಬ್ಬರವನ್ನು ಶುರು ಮಾಡಿದರು.

ಪರಿಣಾಮ ಮುಂದಿನ 26 ಎಸೆತಗಳಲ್ಲಿ ತಮ್ಮ ಮೊದಲ ಶತಕವನ್ನು ಪೂರ್ಣಗೊಳಿಸಿದರು. 87 ಎಸೆತಗಳಲ್ಲಿ ಅಜೇಯ 123 ರನ್ ಬಾರಿಸಿದ ಜೋನ್ಸ್​ 9 ಬೌಂಡರಿ ಮತ್ತು 6 ಸಿಕ್ಸರ್‌ಗಳನ್ನು ಸಿಡಿಸಿದರು. ವಿಶೇಷ ಎಂದರೆ ಇದು ಜೋನ್ಸ್ ಅವರ ವೃತ್ತಿಜೀವನದ ಮೊದಲ ಶತಕವಾಗಿದೆ. ಈ ಶತಕದ ಇನ್ನಿಂಗ್ಸ್‌ನ ನೆರವಿನಿಂದ ಯುಎಸ್ಎ ನಿಗದಿತ 50 ಓವರ್‌ನಲ್ಲಿ 8 ವಿಕೆಟ್‌ಗೆ 295 ರನ್ ಗಳಿಸಿತು.

296 ರನ್‌ಗಳ ಗುರಿಯನ್ನು ಬೆನ್ನತ್ತಿದ ಸ್ಕಾಟ್ಲೆಂಡ್ ಪರ ಮೆಕ್‌ಲಿಯೋಡ್ (117) ಸಿಡಿಲಬ್ಬರದ ಸೆಂಚುರಿ ಸಿಡಿಸಿ ಅಬ್ಬರಿಸಿದರು. ಇವರಲ್ಲದೆ ಕ್ರೇಗ್ ವಾಲೇಸ್ 45 ರನ್ ಹಾಗೂ ನಾಯಕ ಮ್ಯಾಥ್ಯೂ ಕ್ರಾಸ್ 40 ರನ್ ಗಳಿಸಿದರು. ಸ್ಕಾಟ್ಲೆಂಡ್ ಆಟಗಾರರ ಈ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದಾಗಿ 14 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್ ನಷ್ಟಕ್ಕೆ 301 ರನ್​ ಗಳಿಸಿ ಸ್ಕಾಟ್ಲೆಂಡ್ ಭರ್ಜರಿ ಜಯ ಸಾಧಿಸಿತು.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು