AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s T20 World Cup 2024: ಬಾಂಗ್ಲಾದೇಶದಲ್ಲಿ ಹಿಂಸಾಚಾರ; ಮಹಿಳಾ ಟಿ20 ವಿಶ್ವಕಪ್ ಸ್ಥಳಾಂತರ?

Women’s T20 World Cup 2024: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಆರಂಭಕ್ಕೆ ಇನ್ನೇರಡು ತಿಂಗಳು ಬಾಕಿ ಉಳಿದಿದೆ. ಅಕ್ಟೋಬರ್ 3ರಿಂದ ಆರಂಭವಾಗಲಿರುವ ಚುಟುಕು ವಿಶ್ವಸಮರಕ್ಕೆ ಬಾಂಗ್ಲಾದೇಶ ಆತಿಥ್ಯವಹಿಸುತ್ತಿದೆ. ಆದರೆ ಸದ್ಯದ ಪರಿಸ್ಥಿತಿಯನ್ನು ನೋಡಿದರೆ, ಮಹಿಳಾ ಟಿ20 ವಿಶ್ವಕಪ್ ಬೇರೆಗೆ ಸ್ಥಳಾಂತರಗೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

Women’s T20 World Cup 2024: ಬಾಂಗ್ಲಾದೇಶದಲ್ಲಿ ಹಿಂಸಾಚಾರ; ಮಹಿಳಾ ಟಿ20 ವಿಶ್ವಕಪ್ ಸ್ಥಳಾಂತರ?
ಮಹಿಳಾ ಟಿ20 ವಿಶ್ವಕಪ್
ಪೃಥ್ವಿಶಂಕರ
|

Updated on: Aug 05, 2024 | 8:37 PM

Share

ಐಸಿಸಿ ಮಹಿಳಾ ಟಿ20 ವಿಶ್ವಕಪ್ ಆರಂಭಕ್ಕೆ ಇನ್ನೇರಡು ತಿಂಗಳು ಬಾಕಿ ಉಳಿದಿದೆ. ಅಕ್ಟೋಬರ್ 3ರಿಂದ ಆರಂಭವಾಗಲಿರುವ ಚುಟುಕು ವಿಶ್ವಸಮರಕ್ಕೆ ಬಾಂಗ್ಲಾದೇಶ ಆತಿಥ್ಯವಹಿಸುತ್ತಿದೆ. ಆದರೆ ಸದ್ಯದ ಪರಿಸ್ಥಿತಿಯನ್ನು ನೋಡಿದರೆ, ಮಹಿಳಾ ಟಿ20 ವಿಶ್ವಕಪ್ ಬೇರೆಗೆ ಸ್ಥಳಾಂತರಗೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ವಾಸ್ತವವಾಗಿ ಸರ್ಕಾರಿ ಹುದ್ದೆಯಲ್ಲಿನ ಮೀಸಲಾತಿಗೆ ಸಂಬಂಧಿಸಿದಂತೆ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದಿದ್ದೆ. ದಿನೇ ದಿನೇ ಹೋರಾಟದ ಸ್ವರೂಪ ಬದಲಾಗುತ್ತಿದೆ. ಈಗಾಗಲೇ ಈ ಹೋರಾಟದಲ್ಲಿ ನೂರಾರು ಸಾವುಗಳು ಸಂಭವಿಸಿವೆ. ಇದೀಗ ದೇಶದ ಪ್ರಧಾನಿ ಶೇಖ್ ಹಸೀನಾ ಕೂಡ ದೇಶ ತೊರೆದು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಬಾಂಗ್ಲಾದೇಶದಲ್ಲಿ ಇಂತಹ ಪರಿಸ್ಥಿತಿ ಇರುವಾಗ ಮಹಿಳಾ ಟಿ20 ವಿಶ್ವಕಪ್ ನಡೆಯುವುದರ ಬಗ್ಗೆ ಅನುಮಾನ ಮೂಡಿದೆ.

ಬಾಂಗ್ಲಾದೇಶದಲ್ಲಿ ಹಿಂಸಾಚಾರ

ಬಾಂಗ್ಲಾದೇಶದಲ್ಲಿ ಸರ್ಕಾರದ ವಿರುದ್ಧ ಸಾವಿರಾರು ಜನ ಬೀದಿಗಿಳಿದಿದ್ದಾರೆ. ದೇಶದ ಪ್ರಧಾನಿ ಶೇಖ್ ಹಸೀನಾ ಅವರ ಕಚೇರಿಗೂ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಹಿಂಸಾಚಾರ ಮತ್ತಷ್ಟು ಉಗ್ರರೂಪ ತಾಳುವುದರಲ್ಲಿ ಸಂದೇಹವಿಲ್ಲ. ಉದ್ಯೋಗ ಮೀಸಲಾತಿಯನ್ನು ತೆಗೆದುಹಾಕುವಂತೆ ಮತ್ತು ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನಾಕಾರರು ಬೀದಿಗಿಳಿದಿದ್ದಾರೆ. ಈ ಹಿಂಸಾಚಾರದಲ್ಲಿ ಇದುವರೆಗೆ 19 ಪೊಲೀಸರು ಮತ್ತು 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಕೂಡ ಗಾಯಗೊಂಡಿದ್ದಾರೆ. ಹಿಂಸಾಚಾರದ ಹಿನ್ನೆಲೆಯಲ್ಲಿ ದೇಶದಲ್ಲಿ ಅನಿರ್ದಿಷ್ಟಾವಧಿ ಕರ್ಫ್ಯೂ ಹೇರಲಾಗಿದೆ.

ಗಡಿಯಲ್ಲಿ ಭದ್ರತೆ ಹೆಚ್ಚಳ

ಬಾಂಗ್ಲಾದೇಶದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬಿಎಸ್ಎಫ್ ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಿದೆ. ಬಾಂಗ್ಲಾದೇಶದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತದಲ್ಲೂ ಎಚ್ಚರಿಕೆ ನೀಡಲಾಗಿದೆ. ಈ ಎಲ್ಲಾ ಪರಿಸ್ಥಿತಿಯಿಂದ ಟಿ20 ವಿಶ್ವಕಪ್ ಆಯೋಜನೆಯ ಮೇಲೆ ಪ್ರಶ್ನಾರ್ಥಕ ಚಿಹ್ನೆ ಮೂಡಿದೆ. ಬಾಂಗ್ಲಾದೇಶವನ್ನು ಹೊರತುಪಡಿಸಿ ಇತರ ತಂಡಗಳ ಭದ್ರತೆಯ ಜವಾಬ್ದಾರಿಯನ್ನು ಯಾರು ತೆಗೆದುಕೊಳ್ಳುತ್ತಾರೆ? ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಹೀಗಾಗಿ ಬಾಂಗ್ಲಾದೇಶದಲ್ಲಿ ನಡೆಯಲಿರುವ ಟೂರ್ನಿಯಿಂದ ಕೆಲ ದೇಶಗಳು ಹಿಂದೆ ಸರಿಯುವ ಸಾಧ್ಯತೆಗಳಿವೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಐಸಿಸಿ, ಮಹಿಳಾ ಟಿ20 ವಿಶ್ವಕಪ್​ಗೆ ಬೇರೆ ಸ್ಥಳವನ್ನು ನಿಗದಿಪಡಿಸುವ ಸಾಧ್ಯತೆಗಳಿವೆ.

ಟಿ20 ವಿಶ್ವಕಪ್ ವಿವರ

ಇನ್ನು ಮಹಿಳಾ ಟಿ20 ವಿಶ್ವಕಪ್ ಬಗ್ಗೆ ಹೇಳುವುದಾದರೆ.. ಈ ಟೂರ್ನಿಯಲ್ಲಿ 10 ತಂಡಗಳು ಭಾಗವಹಿಸಲಿವೆ. 17 ದಿನಗಳ ಈ ಟೂರ್ನಿಯಲ್ಲಿ ಒಟ್ಟು 23 ಪಂದ್ಯಗಳು ನಡೆಯಲಿವೆ. ಅಕ್ಟೋಬರ್ 3 ರಿಂದ ಅಕ್ಟೋಬರ್ 14 ರವರೆಗೆ ಲೀಗ್ ಪಂದ್ಯಗಳು ನಡೆಯಲಿವೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ನಂತರ ಸೆಮಿಫೈನಲ್‌ಗೆ ಮುನ್ನಡೆಯುತ್ತವೆ. ಸೆಮಿಫೈನಲ್ ಪಂದ್ಯಗಳು ಅಕ್ಟೋಬರ್ 17 ಮತ್ತು 18 ರಂದು ನಡೆಯಲಿದೆ. ಈ ಟೂರ್ನಿಯ ಫೈನಲ್ ಪಂದ್ಯ ಅಕ್ಟೋಬರ್ 20 ರಂದು ನಡೆಯಲಿದೆ. ಎ ಗುಂಪಿನಲ್ಲಿ ಆಸ್ಟ್ರೇಲಿಯಾ, ಭಾರತ, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡವಿದ್ದರೆ, ಬಾಂಗ್ಲಾದೇಶ, ಇಂಗ್ಲೆಂಡ್, ಸ್ಕಾಟ್ಲೆಂಡ್, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ಬಿ ಗುಂಪಿನಲ್ಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ