AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ಹೊಸ ನಿಯಮ: ಈ ಶಾಟ್ ಹೊಡೆದ್ರೆ ಇನ್ಮುಂದೆ ರನ್ ಇಲ್ಲ..!

ICC New Rules: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಕ್ರಿಕೆಟ್​ ರೋಚಕತೆಯನ್ನು ಉಳಿಸಲು ಹೊಸ ನಿಯಮಗಳನ್ನು ಜಾರಿಗೆ ತರುತ್ತಿದೆ. ಕೆಲ ತಿಂಗಳ ಹಿಂದೆಯಷ್ಟೇ ಹಲವು ನಿಯಮಗಳನ್ನು ಪರಿಚಯಿಸಿದ್ದ ಐಸಿಸಿ ಇದೀಗ ಬ್ಯಾಟ್ಸ್​ಮನ್​​ಗಳ ತಂತ್ರಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಈ ನಿಯಮದಿಂದ ಬೌಲರ್​ಗಳಿಗೆ ಅನುಕೂಲವಾಗಲಿದೆ.

ಐಸಿಸಿ ಹೊಸ ನಿಯಮ: ಈ ಶಾಟ್ ಹೊಡೆದ್ರೆ ಇನ್ಮುಂದೆ ರನ್ ಇಲ್ಲ..!
Cricket
ಝಾಹಿರ್ ಯೂಸುಫ್
|

Updated on: Oct 18, 2025 | 10:55 AM

Share

ಕ್ರಿಕೆಟ್ ಅನ್ನು ರೋಮಾಂಚನಗೊಳಿಸಲು ಐಸಿಸಿ ಹೊಸ ನಿಯಮಗಳನ್ನು ಅಭಿವೃದ್ಧಿಪಡಿಸುವುದನ್ನು ಮುಂದುವರೆಸಿದೆ. ಇದೀಗ ಆಟವನ್ನು ಇನ್ನಷ್ಟು ಆಸಕ್ತಿದಾಯಕವಾಗಿಸಲು ಮತ್ತೊಂದು ಹೊಸ ನಿಯಮವನ್ನು ಪರಿಚಯಿಸಲಾಗಿದೆ. ಈ ನಿಯಮದಿಂದಾಗಿ ಬ್ಯಾಟ್ಸ್​ಮನ್ ಇನ್ಮುಂದೆ ವಿಕೆಟ್​ ಹಿಂದೆ ಹೋಗಿ ಶಾಟ್ ಬಾರಿಸುವಂತಿಲ್ಲ. ಒಂದು ವೇಳೆ ಶಾಟ್ ಬಾರಿಸಿದರೂ ಅದಕ್ಕೆ ರನ್ ನೀಡಲಾಗುವುದಿಲ್ಲ.

ಈ ಹೊಸ ಐಸಿಸಿ ನಿಯಮದ ಪ್ರಕಾರ, ಬ್ಯಾಟ್ಸ್‌ಮನ್ ಚೆಂಡನ್ನು ಆಡುವಾಗ ಸಂಪೂರ್ಣವಾಗಿ ಸ್ಟಂಪ್‌ಗಳ ಹಿಂದೆ ಹೋದರೆ ಅದನ್ನು ಕಾನೂನುಬಾಹಿರ ಎಂದು ಪರಿಗಣಿಸಲಾಗುತ್ತದೆ. ಒಂದು ವೇಳೆ ಸ್ಟಂಪ್ ಹಿಂದೆ ಹೋಗಿ ಶಾಟ್ ಬಾರಿಸುವಾಗ ಬ್ಯಾಟರ್​ನ ಕೈ ಅಥವಾ ದೇಹದ ಭಾಗವು ಪಿಚ್​ನಲ್ಲಿದ್ದರೆ ರನ್ ನೀಡಲಾಗುತ್ತದೆ. ಇಲ್ಲದಿದ್ದರೆ ಡೆಡ್ ರನ್ ಎಂದು ಘೋಷಿಸಲಾಗುತ್ತದೆ.

ಇತ್ತೀಚಿನ ದಿನಗಳಲ್ಲಿ ಬೌಲರ್‌ನನ್ನು ವಂಚಿಸಲು ಬ್ಯಾಟ್ಸ್‌ಮನ್‌ಗಳು ಸ್ಟಂಪ್‌ಗಳ ಹಿಂದೆ ಹೋಗಿ ಬ್ಯಾಟ್ ಬೀಸುವುದನ್ನು ನೀವು ನೋಡಿರುತ್ತೀರಿ. ಅದರಲ್ಲೂ ವೆಸ್ಟ್ ಇಂಡೀಸ್ ದಂತಕಥೆ ಕೀರನ್ ಪೊಲಾರ್ಡ್ ಇಂತಹ ಶಾಟ್​ಗಳ ಮೂಲಕ ಹಲವು ಬಾರಿ ರನ್​ಗಳಿಸಿದ್ದಾರೆ.

ಬೌಲರ್‌ಗಳನ್ನು ತೊಂದರೆಗೊಳಿಸಲು ಮತ್ತು ಫೀಲ್ಡಿಂಗ್‌ಗೆ ಅಡ್ಡಿಪಡಿಸಲು ಬ್ಯಾಟ್ಸ್‌ಮನ್‌ಗಳು ಈ ತಂತ್ರಗಳತ್ತ ಮುಖ ಮಾಡಿದ್ದಾರೆ. ಆದರೆ ಈ ತಂತ್ರಕ್ಕೆ ಕಡಿವಾಣ ಹಾಕಲು ಐಸಿಸಿ ನಿರ್ಧರಿಸಿದೆ. ಅದರಂತೆ ಇದೀಗ ಹೊಸ ನಿಯಮವನ್ನು ಜಾರಿಗೊಳಿಸಲಾಗುತ್ತಿದೆ.

ಅಂದರೆ ಬ್ಯಾಟರ್ ವಿಕೆಟ್ ಹಿಂದೆ ಹೋಗಿ ರನ್​ಗಳಿಸಿದರೆ, ಆತನ ಕೈ ಅಥವಾ ಕಾಲು ಅಥವಾ  ಯಾವುದೇ ಭಾಗವು ಪಿಚ್ ಮೇಲ್ಮೈ ಮೇಲಿರಬೇಕು. ದೇಹದ ಯಾವುದೇ ಭಾಗ ಪಿಚ್​ನ​ ಮೇಲ್ಮೈಯಲ್ಲಿರದೇ ರನ್​ಗಳಿಸಿದರೆ ಅದನ್ನು ಕಾನೂನುಬದ್ಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಐಸಿಸಿಯ ಈ ನಿಯಮವು ಬೌಲರ್‌ಗಳಿಗೆ ಸ್ವಲ್ಪ ಅನುಕೂಲವನ್ನು ನೀಡಲಿದೆ. ಏಕೆಂದರೆ ಇನ್ಮುಂದೆ ಬ್ಯಾಟ್ಸ್‌ಮನ್‌ಗಳು ತಮ್ಮ ಸ್ಥಾನದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಈ ನಿಯಮವು ಟಿ20, ಏಕದಿನ ಮತ್ತು ಟೆಸ್ಟ್ ಸೇರಿದಂತೆ ಎಲ್ಲಾ ಸ್ವರೂಪಗಳಿಗೂ ಅನ್ವಯಿಸಲಿದೆ ಎಂದು ಐಸಿಸಿ ತಿಳಿಸಿದೆ.

ಐಸಿಸಿ ಹೊಸ ನಿಯಮದ ವಿಡಿಯೋ:

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬ್ಯಾಟ್ಸ್‌ಮನ್‌ಗಳ ಕುತಂತ್ರವನ್ನು ನಿಗ್ರಹಿಸಲು ಜಾರಿಗೆ ತಂದಿರುವ ಹೊಸ ನಿಯಮದ ಕುರಿತು ಮಾಜಿ ಐಸಿಸಿ ಅಂಪೈರ್ ಅನಿಲ್ ಚೌಧರಿ ವಿಡಿಯೋವೊಂದನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿದರೆ ಐಸಿಸಿಯ ಹೊಸ ನಿಯಮದ ಸಂಪೂರ್ಣ ಮಾಹಿತಿ ಸಿಗಲಿದೆ.

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ