AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ಹೊಸ ನಿಯಮ: ಈ ಶಾಟ್ ಹೊಡೆದ್ರೆ ಇನ್ಮುಂದೆ ರನ್ ಇಲ್ಲ..!

ICC New Rules: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಕ್ರಿಕೆಟ್​ ರೋಚಕತೆಯನ್ನು ಉಳಿಸಲು ಹೊಸ ನಿಯಮಗಳನ್ನು ಜಾರಿಗೆ ತರುತ್ತಿದೆ. ಕೆಲ ತಿಂಗಳ ಹಿಂದೆಯಷ್ಟೇ ಹಲವು ನಿಯಮಗಳನ್ನು ಪರಿಚಯಿಸಿದ್ದ ಐಸಿಸಿ ಇದೀಗ ಬ್ಯಾಟ್ಸ್​ಮನ್​​ಗಳ ತಂತ್ರಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಈ ನಿಯಮದಿಂದ ಬೌಲರ್​ಗಳಿಗೆ ಅನುಕೂಲವಾಗಲಿದೆ.

ಐಸಿಸಿ ಹೊಸ ನಿಯಮ: ಈ ಶಾಟ್ ಹೊಡೆದ್ರೆ ಇನ್ಮುಂದೆ ರನ್ ಇಲ್ಲ..!
Cricket
ಝಾಹಿರ್ ಯೂಸುಫ್
|

Updated on: Oct 18, 2025 | 10:55 AM

Share

ಕ್ರಿಕೆಟ್ ಅನ್ನು ರೋಮಾಂಚನಗೊಳಿಸಲು ಐಸಿಸಿ ಹೊಸ ನಿಯಮಗಳನ್ನು ಅಭಿವೃದ್ಧಿಪಡಿಸುವುದನ್ನು ಮುಂದುವರೆಸಿದೆ. ಇದೀಗ ಆಟವನ್ನು ಇನ್ನಷ್ಟು ಆಸಕ್ತಿದಾಯಕವಾಗಿಸಲು ಮತ್ತೊಂದು ಹೊಸ ನಿಯಮವನ್ನು ಪರಿಚಯಿಸಲಾಗಿದೆ. ಈ ನಿಯಮದಿಂದಾಗಿ ಬ್ಯಾಟ್ಸ್​ಮನ್ ಇನ್ಮುಂದೆ ವಿಕೆಟ್​ ಹಿಂದೆ ಹೋಗಿ ಶಾಟ್ ಬಾರಿಸುವಂತಿಲ್ಲ. ಒಂದು ವೇಳೆ ಶಾಟ್ ಬಾರಿಸಿದರೂ ಅದಕ್ಕೆ ರನ್ ನೀಡಲಾಗುವುದಿಲ್ಲ.

ಈ ಹೊಸ ಐಸಿಸಿ ನಿಯಮದ ಪ್ರಕಾರ, ಬ್ಯಾಟ್ಸ್‌ಮನ್ ಚೆಂಡನ್ನು ಆಡುವಾಗ ಸಂಪೂರ್ಣವಾಗಿ ಸ್ಟಂಪ್‌ಗಳ ಹಿಂದೆ ಹೋದರೆ ಅದನ್ನು ಕಾನೂನುಬಾಹಿರ ಎಂದು ಪರಿಗಣಿಸಲಾಗುತ್ತದೆ. ಒಂದು ವೇಳೆ ಸ್ಟಂಪ್ ಹಿಂದೆ ಹೋಗಿ ಶಾಟ್ ಬಾರಿಸುವಾಗ ಬ್ಯಾಟರ್​ನ ಕೈ ಅಥವಾ ದೇಹದ ಭಾಗವು ಪಿಚ್​ನಲ್ಲಿದ್ದರೆ ರನ್ ನೀಡಲಾಗುತ್ತದೆ. ಇಲ್ಲದಿದ್ದರೆ ಡೆಡ್ ರನ್ ಎಂದು ಘೋಷಿಸಲಾಗುತ್ತದೆ.

ಇತ್ತೀಚಿನ ದಿನಗಳಲ್ಲಿ ಬೌಲರ್‌ನನ್ನು ವಂಚಿಸಲು ಬ್ಯಾಟ್ಸ್‌ಮನ್‌ಗಳು ಸ್ಟಂಪ್‌ಗಳ ಹಿಂದೆ ಹೋಗಿ ಬ್ಯಾಟ್ ಬೀಸುವುದನ್ನು ನೀವು ನೋಡಿರುತ್ತೀರಿ. ಅದರಲ್ಲೂ ವೆಸ್ಟ್ ಇಂಡೀಸ್ ದಂತಕಥೆ ಕೀರನ್ ಪೊಲಾರ್ಡ್ ಇಂತಹ ಶಾಟ್​ಗಳ ಮೂಲಕ ಹಲವು ಬಾರಿ ರನ್​ಗಳಿಸಿದ್ದಾರೆ.

ಬೌಲರ್‌ಗಳನ್ನು ತೊಂದರೆಗೊಳಿಸಲು ಮತ್ತು ಫೀಲ್ಡಿಂಗ್‌ಗೆ ಅಡ್ಡಿಪಡಿಸಲು ಬ್ಯಾಟ್ಸ್‌ಮನ್‌ಗಳು ಈ ತಂತ್ರಗಳತ್ತ ಮುಖ ಮಾಡಿದ್ದಾರೆ. ಆದರೆ ಈ ತಂತ್ರಕ್ಕೆ ಕಡಿವಾಣ ಹಾಕಲು ಐಸಿಸಿ ನಿರ್ಧರಿಸಿದೆ. ಅದರಂತೆ ಇದೀಗ ಹೊಸ ನಿಯಮವನ್ನು ಜಾರಿಗೊಳಿಸಲಾಗುತ್ತಿದೆ.

ಅಂದರೆ ಬ್ಯಾಟರ್ ವಿಕೆಟ್ ಹಿಂದೆ ಹೋಗಿ ರನ್​ಗಳಿಸಿದರೆ, ಆತನ ಕೈ ಅಥವಾ ಕಾಲು ಅಥವಾ  ಯಾವುದೇ ಭಾಗವು ಪಿಚ್ ಮೇಲ್ಮೈ ಮೇಲಿರಬೇಕು. ದೇಹದ ಯಾವುದೇ ಭಾಗ ಪಿಚ್​ನ​ ಮೇಲ್ಮೈಯಲ್ಲಿರದೇ ರನ್​ಗಳಿಸಿದರೆ ಅದನ್ನು ಕಾನೂನುಬದ್ಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಐಸಿಸಿಯ ಈ ನಿಯಮವು ಬೌಲರ್‌ಗಳಿಗೆ ಸ್ವಲ್ಪ ಅನುಕೂಲವನ್ನು ನೀಡಲಿದೆ. ಏಕೆಂದರೆ ಇನ್ಮುಂದೆ ಬ್ಯಾಟ್ಸ್‌ಮನ್‌ಗಳು ತಮ್ಮ ಸ್ಥಾನದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಈ ನಿಯಮವು ಟಿ20, ಏಕದಿನ ಮತ್ತು ಟೆಸ್ಟ್ ಸೇರಿದಂತೆ ಎಲ್ಲಾ ಸ್ವರೂಪಗಳಿಗೂ ಅನ್ವಯಿಸಲಿದೆ ಎಂದು ಐಸಿಸಿ ತಿಳಿಸಿದೆ.

ಐಸಿಸಿ ಹೊಸ ನಿಯಮದ ವಿಡಿಯೋ:

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬ್ಯಾಟ್ಸ್‌ಮನ್‌ಗಳ ಕುತಂತ್ರವನ್ನು ನಿಗ್ರಹಿಸಲು ಜಾರಿಗೆ ತಂದಿರುವ ಹೊಸ ನಿಯಮದ ಕುರಿತು ಮಾಜಿ ಐಸಿಸಿ ಅಂಪೈರ್ ಅನಿಲ್ ಚೌಧರಿ ವಿಡಿಯೋವೊಂದನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿದರೆ ಐಸಿಸಿಯ ಹೊಸ ನಿಯಮದ ಸಂಪೂರ್ಣ ಮಾಹಿತಿ ಸಿಗಲಿದೆ.

Follow Us
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ