AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ ಐಸಿಸಿ; ಈ ದಿನದಂದು ಭಾರತ- ಪಾಕ್ ಫೈಟ್

T20 World Cup 2024: ಬಾಂಗ್ಲಾದೇಶದ ಬದಲಿಗೆ ಯುಎಇಯಲ್ಲಿ ನಡೆಯಲ್ಲಿರುವ ಮಹಿಳಾ ಟಿ20 ವಿಶ್ವಕಪ್​ನ ಹೊಸ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಬಿಡುಗಡೆಗೊಳಿಸಿದೆ. ಈ ಪಂದ್ಯಾವಳಿಗೆ ಯುಎಇಯ ದುಬೈ ಮತ್ತು ಶಾರ್ಜಾದ ಎರಡು ಕ್ರೀಡಾಂಗಣಗಳು ಆತಿಥ್ಯವಹಿಸಲಿದ್ದು, ಅಕ್ಟೋಬರ್ 3 ರಿಂದ 20 ರವರೆಗೆ ನಡೆಯಲಿದೆ. ಹೊಸ ವೇಳಾಪಟ್ಟಿಯ ಪ್ರಕಾರ ಟೂರ್ನಿಯ ಉದ್ಘಾಟನಾ ಪಂದ್ಯ ಬಾಂಗ್ಲಾದೇಶ ಮತ್ತು ಸ್ಕಾಟ್ಲೆಂಡ್ ತಂಡಗಳ ನಡುವೆ ನಡೆಯಲಿದೆ

T20 World Cup 2024: ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ ಐಸಿಸಿ; ಈ ದಿನದಂದು ಭಾರತ- ಪಾಕ್ ಫೈಟ್
ಮಹಿಳಾ ಟಿ20 ವಿಶ್ವಕಪ್
ಪೃಥ್ವಿಶಂಕರ
|

Updated on:Aug 26, 2024 | 9:56 PM

Share

ಬಾಂಗ್ಲಾದೇಶದ ಬದಲಿಗೆ ಯುಎಇಯಲ್ಲಿ ನಡೆಯಲ್ಲಿರುವ ಮಹಿಳಾ ಟಿ20 ವಿಶ್ವಕಪ್​ನ ಹೊಸ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಬಿಡುಗಡೆಗೊಳಿಸಿದೆ. ಈ ಪಂದ್ಯಾವಳಿಗೆ ಯುಎಇಯ ದುಬೈ ಮತ್ತು ಶಾರ್ಜಾದ ಎರಡು ಕ್ರೀಡಾಂಗಣಗಳು ಆತಿಥ್ಯವಹಿಸಲಿದ್ದು, ಅಕ್ಟೋಬರ್ 3 ರಿಂದ 20 ರವರೆಗೆ ನಡೆಯಲಿದೆ. ಹೊಸ ವೇಳಾಪಟ್ಟಿಯ ಪ್ರಕಾರ ಟೂರ್ನಿಯ ಉದ್ಘಾಟನಾ ಪಂದ್ಯ ಬಾಂಗ್ಲಾದೇಶ ಮತ್ತು ಸ್ಕಾಟ್ಲೆಂಡ್ ತಂಡಗಳ ನಡುವೆ ನಡೆಯಲಿದೆ. ಪಂದ್ಯಾವಳಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿದ್ದು, ಎಲ್ಲಾ ತಂಡಗಳು ತಲಾ 4 ಗುಂಪು ಪಂದ್ಯಗಳನ್ನು ಆಡಲಿವೆ. ಅದರಂತೆ ಟೂರ್ನಿಯಲ್ಲಿ ಒಟ್ಟು 23 ಪಂದ್ಯಗಳು ನಡೆಯಲಿವೆ.

ಟೂರ್ನಿಯಲ್ಲಿ ಭಾಗವಹಿಸುವ 10 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದ್ದು, ಎ ಗುಂಪಿನಲ್ಲಿ ಆಸ್ಟ್ರೇಲಿಯಾ, ಭಾರತ, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳಿದ್ದರೆ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಬಾಂಗ್ಲಾದೇಶ ಮತ್ತು ಸ್ಕಾಟ್ಲೆಂಡ್ ತಂಡಗಳು ಬಿ ಗುಂಪಿನಲ್ಲಿವೆ. ಟೂರ್ನಿಯ ಸೆಮಿಫೈನಲ್ ಪಂದ್ಯಗಳು ಅಕ್ಟೋಬರ್ 17 ಮತ್ತು 18 ರಂದು ನಡೆದರೆ, ಫೈನಲ್ ಪಂದ್ಯವು ಅಕ್ಟೋಬರ್ 20 ರಂದು ದುಬೈನಲ್ಲಿ ನಡೆಯಲಿದೆ.

ಈ ದಿನದಂದು ಭಾರತ-ಪಾಕಿಸ್ತಾನ ಫೈಟ್

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿವೆ. ಆದ್ದರಿಂದ ಗುಂಪು ಹಂತದಲ್ಲಿ ಎರಡು ತಂಡಗಳ ನಡುವೆ ಪೈಪೋಟಿ ಏರ್ಪಡಲಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯ ಅಕ್ಟೋಬರ್ 3 ರಂದು ಭಾರತೀಯ ಕಾಲಮಾನ ಮಧ್ಯಾಹ್ನ 3.30 ಕ್ಕೆ ನಡೆಯಲಿದೆ. ಎರಡೂ ತಂಡಗಳು ದುಬೈನಲ್ಲಿ ಮುಖಾಮುಖಿಯಾಗಲಿವೆ. ಇತ್ತೀಚೆಗಷ್ಟೇ ಏಷ್ಯಾಕಪ್‌ನಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಿದ್ದವು, ಇಲ್ಲಿ ಟೀಂ ಇಂಡಿಯಾ ಸುಲಭ ಜಯ ಸಾಧಿಸಿತ್ತು.

ದಿನಾಂಕ

ಮುಖಾಮುಖಿ

ಸ್ಥಳ

ಸಮಯ

ಅಕ್ಟೋಬರ್ 3 ಬಾಂಗ್ಲಾದೇಶ vs ಸ್ಕಾಟ್ಲೆಂಡ್ ಶಾರ್ಜಾ ಮಧ್ಯಾಹ್ನ 2 ಗಂಟೆಗೆ
ಅಕ್ಟೋಬರ್ 3 ಪಾಕಿಸ್ತಾನ vs ಶ್ರೀಲಂಕಾ ಶಾರ್ಜಾ ಸಂಜೆ 6 ಗಂಟೆಗೆ
ಅಕ್ಟೋಬರ್ 4 ದಕ್ಷಿಣ ಆಫ್ರಿಕಾ vs ವೆಸ್ಟ್ ಇಂಡೀಸ್ ದುಬೈ, ಮಧ್ಯಾಹ್ನ 2 ಗಂಟೆಗೆ
ಅಕ್ಟೋಬರ್ 4 ಭಾರತ vs ನ್ಯೂಜಿಲೆಂಡ್ ದುಬೈ ಸಂಜೆ 6 ಗಂಟೆಗೆ
ಅಕ್ಟೋಬರ್ 5 ಬಾಂಗ್ಲಾದೇಶ vs ಇಂಗ್ಲೆಂಡ್ ಶಾರ್ಜಾ ಮಧ್ಯಾಹ್ನ 2 ಗಂಟೆಗೆ
ಅಕ್ಟೋಬರ್ 5 ಆಸ್ಟ್ರೇಲಿಯಾ vs ಶ್ರೀಲಂಕಾ ಶಾರ್ಜಾ ಸಂಜೆ 6 ಗಂಟೆಗೆ
ಅಕ್ಟೋಬರ್ 6 ಭಾರತ vs ಪಾಕಿಸ್ತಾನ ದುಬೈ ಮಧ್ಯಾಹ್ನ 2 ಗಂಟೆಗೆ
ಅಕ್ಟೋಬರ್ 6 ವೆಸ್ಟ್ ಇಂಡೀಸ್ vs ಸ್ಕಾಟ್ಲೆಂಡ್ ದುಬೈ ಸಂಜೆ 6 ಗಂಟೆಗೆ
ಅಕ್ಟೋಬರ್ 7 ಇಂಗ್ಲೆಂಡ್ vs ದಕ್ಷಿಣ ಆಫ್ರಿಕಾ ಶಾರ್ಜಾ ಸಂಜೆ 6 ಗಂಟೆಗೆ
ಅಕ್ಟೋಬರ್ 8 ಆಸ್ಟ್ರೇಲಿಯಾ vs ನ್ಯೂಜಿಲೆಂಡ್ ಶಾರ್ಜಾ ಸಂಜೆ 6 ಗಂಟೆಗೆ
ಅಕ್ಟೋಬರ್ 9 ದಕ್ಷಿಣ ಆಫ್ರಿಕಾ vs ಸ್ಕಾಟ್ಲೆಂಡ್ ದುಬೈ ಮಧ್ಯಾಹ್ನ 2 ಗಂಟೆಗೆ
ಅಕ್ಟೋಬರ್ 9 ಭಾರತ vs ಶ್ರೀಲಂಕಾ ದುಬೈ ಸಂಜೆ 6 ಗಂಟೆಗೆ
ಅಕ್ಟೋಬರ್ 10 ಬಾಂಗ್ಲಾದೇಶ vs ವೆಸ್ಟ್ ಇಂಡೀಸ್ ಶಾರ್ಜಾ ಸಂಜೆ 6 ಗಂಟೆಗೆ
ಅಕ್ಟೋಬರ್ 11 ಆಸ್ಟ್ರೇಲಿಯಾ vs ಪಾಕಿಸ್ತಾನ ದುಬೈ ಸಂಜೆ 6 ಗಂಟೆಗೆ
ಅಕ್ಟೋಬರ್ 12 ನ್ಯೂಜಿಲೆಂಡ್ vs ಶ್ರೀಲಂಕಾ ಶಾರ್ಜಾ ಮಧ್ಯಾಹ್ನ 2 ಗಂಟೆಗೆ
ಅಕ್ಟೋಬರ್ 12 ಬಾಂಗ್ಲಾದೇಶ vs ದಕ್ಷಿಣ ಆಫ್ರಿಕಾ ದುಬೈ ಸಂಜೆ 6 ಗಂಟೆಗೆ
ಅಕ್ಟೋಬರ್ 13 ಇಂಗ್ಲೆಂಡ್ vs ಸ್ಕಾಟ್ಲೆಂಡ್ ಶಾರ್ಜಾ ಮಧ್ಯಾಹ್ನ 2 ಗಂಟೆಗೆ
ಅಕ್ಟೋಬರ್ 13 ಭಾರತ vs ಆಸ್ಟ್ರೇಲಿಯಾ ಶಾರ್ಜಾ ಸಂಜೆ 6 ಗಂಟೆಗೆ
ಅಕ್ಟೋಬರ್ 14 ಪಾಕಿಸ್ತಾನ vs ನ್ಯೂಜಿಲೆಂಡ್ ದುಬೈ ಸಂಜೆ 6 ಗಂಟೆಗೆ
ಅಕ್ಟೋಬರ್ 15 ಇಂಗ್ಲೆಂಡ್ vs ವೆಸ್ಟ್ ಇಂಡೀಸ್ ದುಬೈ ಸಂಜೆ 6 ಗಂಟೆಗೆ
ಅಕ್ಟೋಬರ್ 17 ಸೆಮಿಫೈನಲ್ 1 ದುಬೈ ಸಂಜೆ 6 ಗಂಟೆಗೆ
ಅಕ್ಟೋಬರ್ 18 ಸೆಮಿಫೈನಲ್ 2 ಶಾರ್ಜಾ ಸಂಜೆ 6 ಗಂಟೆಗೆ
20 ಅಕ್ಟೋಬರ್ ಫೈನಲ್ ದುಬೈ ಸಂಜೆ 6 ಗಂಟೆಗೆ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:39 pm, Mon, 26 August 24

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ