Harmanpreet Kaur: ಹರ್ಮನ್‌ಪ್ರೀತ್ ಕೌರ್​ಗೆ ಅಮಾನತು ಶಿಕ್ಷೆ, ದಂಡದ ಬರೆ..!

Harmanpreet Kaur: ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಯ ವೇಳೆ ಅನುಚಿತ ವರ್ತನೆ ತೋರಿದ ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್​ಗೆ ಅಮಾನತಿನ ಶಿಕ್ಷೆಯ ಜೊತೆ ದಂಡದ ಬರೆ ಎಳೆದ ಐಸಿಸಿ.

Harmanpreet Kaur: ಹರ್ಮನ್‌ಪ್ರೀತ್ ಕೌರ್​ಗೆ ಅಮಾನತು ಶಿಕ್ಷೆ, ದಂಡದ ಬರೆ..!
Harmanpreet Kaur
Follow us
| Updated By: ಝಾಹಿರ್ ಯೂಸುಫ್

Updated on:Jul 25, 2023 | 9:27 PM

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಅವರನ್ನು ಮುಂದಿನ ಎರಡು ಅಂತಾರಾಷ್ಟ್ರೀಯ ಪಂದ್ಯಗಳಿಗೆ ಐಸಿಸಿ ಅಮಾನತುಗೊಳಿಸಿದೆ. ಇತ್ತೀಚೆಗೆ ನಡೆದ ಬಾಂಗ್ಲಾದೇಶ್ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕಿ ಅನುಚಿತ ವರ್ತನೆ ತೋರಿದ್ದರು. ಈ ಸರಣಿಯ ಮೂರನೇ ಏಕದಿನ ಪಂದ್ಯದಲ್ಲಿ ಔಟ್ ನೀಡಿದ ಅಂಪೈರ್ ತೀರ್ಪಿನಿಂದ ಆಕ್ರೋಶಗೊಂಡ ಹರ್ಮನ್​ಪ್ರೀತ್ ಬ್ಯಾಟ್​ನಿಂದ ವಿಕೆಟ್​ಗೆ ಹೊಡೆದಿದ್ದರು. ಇನ್ನು ಅಂತಿಮ ಏಕದಿನ ಪಂದ್ಯವು ಟೈನಲ್ಲಿ ಅಂತ್ಯಗೊಂಡಿದ್ದರಿಂದ ಸರಣಿಯು 1-1 ಅಂತರದಿಂದ ಸಮಬಲಗೊಂಡಿತು. ಹೀಗಾಗಿ ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಯಿತು.

ಆದರೆ ಆ ಬಳಿಕ ನಡೆದ ಸಮಾರೋಪ ಸಮಾರಂಭದಲ್ಲಿ ಬಾಂಗ್ಲಾದೇಶ್ ತಂಡದೊಂದಿಗೆ ಫೋಟೋ ತೆಗೆಸಿಕೊಳ್ಳುವಾಗ ಅಂಪೈರ್‌ಗಳನ್ನೂ ಕರೆಯಬೇಕು ಎಂದು ಆತಿಥೇಯ ತಂಡವನ್ನು ಹರ್ಮನ್​ಪ್ರೀತ್ ಕೌರ್ ಮೂದಲಿಸಿದರು. ಈ ಎರಡು ದುರ್ವತನೆಗಳಿಗಾಗಿ ಇದೀಗ ಐಸಿಸಿ ಟೀಮ್ ಇಂಡಿಯಾ ನಾಯಕಿಗೆ ಅಮಾನುತಿನ ಶಿಕ್ಷೆ ಜೊತೆಗೆ ದಂಡ ವಿಧಿಸಿದೆ.

ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.8 ರ ಅಂಪೈರ್ ನಿರ್ಧಾರಕ್ಕೆ ಭಿನ್ನಾಭಿಪ್ರಾಯವನ್ನು ತೋರಿಸುವುದನ್ನು ಒಳಗೊಂಡಂತೆ ಹರ್ಮನ್‌ಪ್ರೀತ್ ತಪ್ಪಿತಸ್ಥರೆಂದು ಸಾಬೀತಾಗಿದೆ. ಹೀಗಾಗಿ ಐಸಿಸಿ ಇದೀಗ 2 ಪಂದ್ಯಗಳ ನಿಷೇಧ ಹೇರಿದ್ದಾರೆ. ಅಲ್ಲದೆ ಲೆವೆಲ್-2 ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಹರ್ಮನ್‌ಪ್ರೀತ್‌ಗೆ ಶೇ. 50 ರಷ್ಟು ದಂಡ ವಿಧಿಸಲಾಗಿದೆ. ಇದಲ್ಲದೇ ಮೂರು ಡಿಮೆರಿಟ್ ಅಂಕಗಳನ್ನು ನೀಡಲಾಗಿದೆ.

ಇನ್ನು ಪಂದ್ಯದ ಬಳಿಕ ಬಾಂಗ್ಲಾದೇಶ್ ತಂಡವನ್ನು ಲೇವಡಿ ಮಾಡಿದ ಹರ್ಮನ್​ಪ್ರೀತ್​ನಿಂದ ನಷ್ಟ ಉಂಟಾಗಿದೆ ಎಂದು ಪಂದ್ಯದ ಆಯೋಜಕರು ಆರೋಪಿಸಿದ್ದಾರೆ. ಇದಕ್ಕಾಗಿ ಹರ್ಮನ್‌ಪ್ರೀತ್‌ಗೆ ಪಂದ್ಯ ಶುಲ್ಕದ ಶೇ.25ರಷ್ಟು ದಂಡ ವಿಧಿಸಲಾಗಿದೆ. ಅಂತಾರಾಷ್ಟ್ರೀಯ ಪಂದ್ಯದಲ್ಲಿ ನಡೆದ ಘಟನೆಯನ್ನು ಸಾರ್ವಜನಿಕವಾಗಿ ಟೀಕಿಸುವುದನ್ನು ಒಳಗೊಂಡಿರುವ ಲೆವೆಲ್-1 ರ ತಪ್ಪಿಗಾಗಿ ಈ ದಂಡವನ್ನು ವಿಧಿಸಲಾಗಿದೆ ಎಂದು ಐಸಿಸಿ ತಿಳಿಸಿದೆ.

ಇದನ್ನೂ ಓದಿ: 4,4,4,4,4,4,4: ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ಹರ್ಮನ್​ಪ್ರೀತ್ ಕೌರ್

ಐಸಿಸಿ ಹೇಳಿಕೆಯ ಪ್ರಕಾರ, ಹರ್ಮನ್‌ಪ್ರೀತ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಹೀಗಾಗಿ ಈ ವಿಷಯದಲ್ಲಿ ಯಾವುದೇ ಅಧಿಕೃತ ವಿಚಾರಣೆಯ ಅಗತ್ಯವಿಲ್ಲ. ಹಾಗಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿಕ್ಷೆ ವಿಧಿಸಲಾಯಿತು.

Published On - 9:09 pm, Tue, 25 July 23

ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು