AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Harmanpreet Kaur: ಹರ್ಮನ್‌ಪ್ರೀತ್ ಕೌರ್​ಗೆ ಅಮಾನತು ಶಿಕ್ಷೆ, ದಂಡದ ಬರೆ..!

Harmanpreet Kaur: ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಯ ವೇಳೆ ಅನುಚಿತ ವರ್ತನೆ ತೋರಿದ ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್​ಗೆ ಅಮಾನತಿನ ಶಿಕ್ಷೆಯ ಜೊತೆ ದಂಡದ ಬರೆ ಎಳೆದ ಐಸಿಸಿ.

Harmanpreet Kaur: ಹರ್ಮನ್‌ಪ್ರೀತ್ ಕೌರ್​ಗೆ ಅಮಾನತು ಶಿಕ್ಷೆ, ದಂಡದ ಬರೆ..!
Harmanpreet Kaur
TV9 Web
| Edited By: |

Updated on:Jul 25, 2023 | 9:27 PM

Share

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಅವರನ್ನು ಮುಂದಿನ ಎರಡು ಅಂತಾರಾಷ್ಟ್ರೀಯ ಪಂದ್ಯಗಳಿಗೆ ಐಸಿಸಿ ಅಮಾನತುಗೊಳಿಸಿದೆ. ಇತ್ತೀಚೆಗೆ ನಡೆದ ಬಾಂಗ್ಲಾದೇಶ್ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕಿ ಅನುಚಿತ ವರ್ತನೆ ತೋರಿದ್ದರು. ಈ ಸರಣಿಯ ಮೂರನೇ ಏಕದಿನ ಪಂದ್ಯದಲ್ಲಿ ಔಟ್ ನೀಡಿದ ಅಂಪೈರ್ ತೀರ್ಪಿನಿಂದ ಆಕ್ರೋಶಗೊಂಡ ಹರ್ಮನ್​ಪ್ರೀತ್ ಬ್ಯಾಟ್​ನಿಂದ ವಿಕೆಟ್​ಗೆ ಹೊಡೆದಿದ್ದರು. ಇನ್ನು ಅಂತಿಮ ಏಕದಿನ ಪಂದ್ಯವು ಟೈನಲ್ಲಿ ಅಂತ್ಯಗೊಂಡಿದ್ದರಿಂದ ಸರಣಿಯು 1-1 ಅಂತರದಿಂದ ಸಮಬಲಗೊಂಡಿತು. ಹೀಗಾಗಿ ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಯಿತು.

ಆದರೆ ಆ ಬಳಿಕ ನಡೆದ ಸಮಾರೋಪ ಸಮಾರಂಭದಲ್ಲಿ ಬಾಂಗ್ಲಾದೇಶ್ ತಂಡದೊಂದಿಗೆ ಫೋಟೋ ತೆಗೆಸಿಕೊಳ್ಳುವಾಗ ಅಂಪೈರ್‌ಗಳನ್ನೂ ಕರೆಯಬೇಕು ಎಂದು ಆತಿಥೇಯ ತಂಡವನ್ನು ಹರ್ಮನ್​ಪ್ರೀತ್ ಕೌರ್ ಮೂದಲಿಸಿದರು. ಈ ಎರಡು ದುರ್ವತನೆಗಳಿಗಾಗಿ ಇದೀಗ ಐಸಿಸಿ ಟೀಮ್ ಇಂಡಿಯಾ ನಾಯಕಿಗೆ ಅಮಾನುತಿನ ಶಿಕ್ಷೆ ಜೊತೆಗೆ ದಂಡ ವಿಧಿಸಿದೆ.

ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.8 ರ ಅಂಪೈರ್ ನಿರ್ಧಾರಕ್ಕೆ ಭಿನ್ನಾಭಿಪ್ರಾಯವನ್ನು ತೋರಿಸುವುದನ್ನು ಒಳಗೊಂಡಂತೆ ಹರ್ಮನ್‌ಪ್ರೀತ್ ತಪ್ಪಿತಸ್ಥರೆಂದು ಸಾಬೀತಾಗಿದೆ. ಹೀಗಾಗಿ ಐಸಿಸಿ ಇದೀಗ 2 ಪಂದ್ಯಗಳ ನಿಷೇಧ ಹೇರಿದ್ದಾರೆ. ಅಲ್ಲದೆ ಲೆವೆಲ್-2 ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಹರ್ಮನ್‌ಪ್ರೀತ್‌ಗೆ ಶೇ. 50 ರಷ್ಟು ದಂಡ ವಿಧಿಸಲಾಗಿದೆ. ಇದಲ್ಲದೇ ಮೂರು ಡಿಮೆರಿಟ್ ಅಂಕಗಳನ್ನು ನೀಡಲಾಗಿದೆ.

ಇನ್ನು ಪಂದ್ಯದ ಬಳಿಕ ಬಾಂಗ್ಲಾದೇಶ್ ತಂಡವನ್ನು ಲೇವಡಿ ಮಾಡಿದ ಹರ್ಮನ್​ಪ್ರೀತ್​ನಿಂದ ನಷ್ಟ ಉಂಟಾಗಿದೆ ಎಂದು ಪಂದ್ಯದ ಆಯೋಜಕರು ಆರೋಪಿಸಿದ್ದಾರೆ. ಇದಕ್ಕಾಗಿ ಹರ್ಮನ್‌ಪ್ರೀತ್‌ಗೆ ಪಂದ್ಯ ಶುಲ್ಕದ ಶೇ.25ರಷ್ಟು ದಂಡ ವಿಧಿಸಲಾಗಿದೆ. ಅಂತಾರಾಷ್ಟ್ರೀಯ ಪಂದ್ಯದಲ್ಲಿ ನಡೆದ ಘಟನೆಯನ್ನು ಸಾರ್ವಜನಿಕವಾಗಿ ಟೀಕಿಸುವುದನ್ನು ಒಳಗೊಂಡಿರುವ ಲೆವೆಲ್-1 ರ ತಪ್ಪಿಗಾಗಿ ಈ ದಂಡವನ್ನು ವಿಧಿಸಲಾಗಿದೆ ಎಂದು ಐಸಿಸಿ ತಿಳಿಸಿದೆ.

ಇದನ್ನೂ ಓದಿ: 4,4,4,4,4,4,4: ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ಹರ್ಮನ್​ಪ್ರೀತ್ ಕೌರ್

ಐಸಿಸಿ ಹೇಳಿಕೆಯ ಪ್ರಕಾರ, ಹರ್ಮನ್‌ಪ್ರೀತ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಹೀಗಾಗಿ ಈ ವಿಷಯದಲ್ಲಿ ಯಾವುದೇ ಅಧಿಕೃತ ವಿಚಾರಣೆಯ ಅಗತ್ಯವಿಲ್ಲ. ಹಾಗಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿಕ್ಷೆ ವಿಧಿಸಲಾಯಿತು.

Published On - 9:09 pm, Tue, 25 July 23

Follow Us
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ